ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ಅಂಬ್ಲಿಕಲ್ ಶಾಲೆಯ ಮುಖ್ಯ ಶಿಕ್ಷಕ ಶ್ರೀರಾಮಪ್ಪ ಅವರನ್ನು ವರ್ಗಾವಣೆ ಮಾಡುವಂತೆ ಎಸ್ಎಫ್ಐ ವಿಧ್ಯಾರ್ಥಿ ಸಂಘಟನೆಯಿಂದ ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾ ಅಧ್ಯಕ್ಷ ಅಂಬ್ಲಿಕಲ್ ಎನ್ ಶಿವಪ್ಪ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಬಹುತೇಕ ಬಡವರ ಮಕ್ಕಳು ಹೆಚ್ಚಾಗಿ ವಿಧ್ಯಾಭ್ಯಾಸ ಮಾಡುತ್ತಿದ್ದು, ಶಾಲೆಯ ಅಭಿವೃದ್ಧಿ ವಿಚಾರವಾಗಿ ಮುಖ್ಯ ಶಿಕ್ಷಕ ಶ್ರೀರಾಮಪ್ಪನೊಂದಿಗೆ ಗ್ರಾಮಸ್ಥರು ಭೇಟಿ ನೀಡಿದಾಗ ಏಕವಚನದಲ್ಲಿ ಮಾತಾಡೋದು ಹಿರಿಯರಿಗೆ ಗೌರವ, ಮರ್ಯಾದೆ ಕೊಡೊದಿಲ್ಲ ಜೊತೆಗೆ ವಿದ್ಯಾರ್ಥಿಗಳನ್ನು ಮನಬಂದಂತೆ ಹೊಡೆದು ನಿಮ್ಮ ತಂದೆ ತಾಯಿಗೆ ತಿಳಿಸಿದರೆ ನಿಮ್ಮನ್ನು ಶಾಲೆಯಿಂದ ಹೊರಹಾಕುತ್ತೇನೆಂದು ಬೆದರಿಕೆ ಹಾಕುತ್ತಾರೆ ಎಂದು ಆರೋಪಿಸಿದರು
ಶಾಲೆಯಲ್ಲಿ ಹಿಂದೆ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ಕೆ.ಸರಿತ ರವರು, ಮುಖ್ಯ ಶಿಕ್ಷಕ ಶ್ರೀರಾಮಪ್ಪನ ದೌರ್ಜನ್ಯ, ದಬ್ಬಾಳಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡಿರುವುದರಿಂದ ಆ ಶಿಕ್ಷಕಿ ಸಹ ಯಾರಿಗೂ ಗೊತ್ತಿಲ್ಲದೆ ಸ್ವಯಂ ಪ್ರೇರಿತವಾಗಿ ವರ್ಗಾವಣೆ ಮಾಡಿಕೊಂಡು ಹೋಗಿದ್ದಾರೆ ವಿಧ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮುಖ್ಯ ಶಿಕ್ಷಕ ಶ್ರೀರಾಮಪ್ಪ ರವರನ್ನು ವರ್ಗಾವಣೆ ಮಾಡಿ ಬೇರೆ ಶಿಕ್ಷಕರನ್ನು ವರ್ಗಾವಣೆ ಮಾಡಿ ವಿಧ್ಯಾರ್ಥಿಗಳಿಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್ಎಫ್ಐ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಬೀರಾಜು, ಜಿಲ್ಲಾ ಉಪಾಧ್ಯಕ್ಷ ಸುರೇಶ್ ಬಾಬು, ಜಿಲ್ಲಾ ಸಹ ಕಾರ್ಯದರ್ಶಿಗಳಾದ ಶಶಿಕುಮಾರ್, ಸುದರ್ಶನ್, ಅಂಬ್ಲಿಕಲ್ ಗ್ರಾಮಸ್ಥರಾದ ವಿಜಯಕುಮಾರ್, ಚನ್ನಕೇಶವ, ತಿಪ್ಪಣ್ಣ, ವೆಂಕಟರಣಪ್ಪ, ಮಂಜುನಾಥ್, ವಿಜಯ್ ಮುಂತಾದವರು ಇದ್ದರು.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…