ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ಅಂಬ್ಲಿಕಲ್ ಶಾಲೆಯ ಮುಖ್ಯ ಶಿಕ್ಷಕ ಶ್ರೀರಾಮಪ್ಪ ಅವರನ್ನು ವರ್ಗಾವಣೆ ಮಾಡುವಂತೆ ಎಸ್ಎಫ್ಐ ವಿಧ್ಯಾರ್ಥಿ ಸಂಘಟನೆಯಿಂದ ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾ ಅಧ್ಯಕ್ಷ ಅಂಬ್ಲಿಕಲ್ ಎನ್ ಶಿವಪ್ಪ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಬಹುತೇಕ ಬಡವರ ಮಕ್ಕಳು ಹೆಚ್ಚಾಗಿ ವಿಧ್ಯಾಭ್ಯಾಸ ಮಾಡುತ್ತಿದ್ದು, ಶಾಲೆಯ ಅಭಿವೃದ್ಧಿ ವಿಚಾರವಾಗಿ ಮುಖ್ಯ ಶಿಕ್ಷಕ ಶ್ರೀರಾಮಪ್ಪನೊಂದಿಗೆ ಗ್ರಾಮಸ್ಥರು ಭೇಟಿ ನೀಡಿದಾಗ ಏಕವಚನದಲ್ಲಿ ಮಾತಾಡೋದು ಹಿರಿಯರಿಗೆ ಗೌರವ, ಮರ್ಯಾದೆ ಕೊಡೊದಿಲ್ಲ ಜೊತೆಗೆ ವಿದ್ಯಾರ್ಥಿಗಳನ್ನು ಮನಬಂದಂತೆ ಹೊಡೆದು ನಿಮ್ಮ ತಂದೆ ತಾಯಿಗೆ ತಿಳಿಸಿದರೆ ನಿಮ್ಮನ್ನು ಶಾಲೆಯಿಂದ ಹೊರಹಾಕುತ್ತೇನೆಂದು ಬೆದರಿಕೆ ಹಾಕುತ್ತಾರೆ ಎಂದು ಆರೋಪಿಸಿದರು
ಶಾಲೆಯಲ್ಲಿ ಹಿಂದೆ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ಕೆ.ಸರಿತ ರವರು, ಮುಖ್ಯ ಶಿಕ್ಷಕ ಶ್ರೀರಾಮಪ್ಪನ ದೌರ್ಜನ್ಯ, ದಬ್ಬಾಳಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡಿರುವುದರಿಂದ ಆ ಶಿಕ್ಷಕಿ ಸಹ ಯಾರಿಗೂ ಗೊತ್ತಿಲ್ಲದೆ ಸ್ವಯಂ ಪ್ರೇರಿತವಾಗಿ ವರ್ಗಾವಣೆ ಮಾಡಿಕೊಂಡು ಹೋಗಿದ್ದಾರೆ ವಿಧ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮುಖ್ಯ ಶಿಕ್ಷಕ ಶ್ರೀರಾಮಪ್ಪ ರವರನ್ನು ವರ್ಗಾವಣೆ ಮಾಡಿ ಬೇರೆ ಶಿಕ್ಷಕರನ್ನು ವರ್ಗಾವಣೆ ಮಾಡಿ ವಿಧ್ಯಾರ್ಥಿಗಳಿಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್ಎಫ್ಐ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಬೀರಾಜು, ಜಿಲ್ಲಾ ಉಪಾಧ್ಯಕ್ಷ ಸುರೇಶ್ ಬಾಬು, ಜಿಲ್ಲಾ ಸಹ ಕಾರ್ಯದರ್ಶಿಗಳಾದ ಶಶಿಕುಮಾರ್, ಸುದರ್ಶನ್, ಅಂಬ್ಲಿಕಲ್ ಗ್ರಾಮಸ್ಥರಾದ ವಿಜಯಕುಮಾರ್, ಚನ್ನಕೇಶವ, ತಿಪ್ಪಣ್ಣ, ವೆಂಕಟರಣಪ್ಪ, ಮಂಜುನಾಥ್, ವಿಜಯ್ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…