Categories: ಕೋಲಾರ

ಅಂಬ್ಲಿಕಲ್ ಶಾಲೆಯ ಮುಖ್ಯ ಶಿಕ್ಷಕನ ವರ್ಗಾವಣೆಗೆ ಎಸ್ಎಫ್ಐ ಒತ್ತಾಯ

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ಅಂಬ್ಲಿಕಲ್‌ ಶಾಲೆಯ ಮುಖ್ಯ ಶಿಕ್ಷಕ ಶ್ರೀರಾಮಪ್ಪ ಅವರನ್ನು ವರ್ಗಾವಣೆ ಮಾಡುವಂತೆ ಎಸ್ಎಫ್ಐ ವಿಧ್ಯಾರ್ಥಿ ಸಂಘಟನೆಯಿಂದ ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾ ಅಧ್ಯಕ್ಷ ಅಂಬ್ಲಿಕಲ್ ಎನ್ ಶಿವಪ್ಪ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಬಹುತೇಕ ಬಡವರ ಮಕ್ಕಳು ಹೆಚ್ಚಾಗಿ ವಿಧ್ಯಾಭ್ಯಾಸ ಮಾಡುತ್ತಿದ್ದು, ಶಾಲೆಯ ಅಭಿವೃದ್ಧಿ ವಿಚಾರವಾಗಿ ಮುಖ್ಯ ಶಿಕ್ಷಕ ಶ್ರೀರಾಮಪ್ಪನೊಂದಿಗೆ ಗ್ರಾಮಸ್ಥರು ಭೇಟಿ ನೀಡಿದಾಗ ಏಕವಚನದಲ್ಲಿ ಮಾತಾಡೋದು ಹಿರಿಯರಿಗೆ ಗೌರವ, ಮರ್ಯಾದೆ ಕೊಡೊದಿಲ್ಲ ಜೊತೆಗೆ ವಿದ್ಯಾರ್ಥಿಗಳನ್ನು ಮನಬಂದಂತೆ ಹೊಡೆದು ನಿಮ್ಮ ತಂದೆ ತಾಯಿಗೆ ತಿಳಿಸಿದರೆ ನಿಮ್ಮನ್ನು ಶಾಲೆಯಿಂದ ಹೊರಹಾಕುತ್ತೇನೆಂದು ಬೆದರಿಕೆ ಹಾಕುತ್ತಾರೆ ಎಂದು ಆರೋಪಿಸಿದರು

ಶಾಲೆಯಲ್ಲಿ ಹಿಂದೆ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ಕೆ.ಸರಿತ ರವರು, ಮುಖ್ಯ ಶಿಕ್ಷಕ ಶ್ರೀರಾಮಪ್ಪನ ದೌರ್ಜನ್ಯ, ದಬ್ಬಾಳಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡಿರುವುದರಿಂದ ಆ ಶಿಕ್ಷಕಿ ಸಹ ಯಾರಿಗೂ ಗೊತ್ತಿಲ್ಲದೆ ಸ್ವಯಂ ಪ್ರೇರಿತವಾಗಿ ವರ್ಗಾವಣೆ ಮಾಡಿಕೊಂಡು ಹೋಗಿದ್ದಾರೆ ವಿಧ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮುಖ್ಯ ಶಿಕ್ಷಕ ಶ್ರೀರಾಮಪ್ಪ ರವರನ್ನು ವರ್ಗಾವಣೆ ಮಾಡಿ ಬೇರೆ ಶಿಕ್ಷಕರನ್ನು ವರ್ಗಾವಣೆ ಮಾಡಿ ವಿಧ್ಯಾರ್ಥಿಗಳಿಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್ಎಫ್ಐ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಬೀರಾಜು, ಜಿಲ್ಲಾ ಉಪಾಧ್ಯಕ್ಷ ಸುರೇಶ್ ಬಾಬು, ಜಿಲ್ಲಾ ಸಹ ಕಾರ್ಯದರ್ಶಿಗಳಾದ ಶಶಿಕುಮಾರ್, ಸುದರ್ಶನ್, ಅಂಬ್ಲಿಕಲ್ ಗ್ರಾಮಸ್ಥರಾದ ವಿಜಯಕುಮಾರ್, ಚನ್ನಕೇಶವ, ತಿಪ್ಪಣ್ಣ, ವೆಂಕಟರಣಪ್ಪ, ಮಂಜುನಾಥ್, ವಿಜಯ್ ಮುಂತಾದವರು ಇದ್ದರು.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

11 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

13 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

18 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago