Categories: ಕೋಲಾರ

ಅಂಬ್ಲಿಕಲ್ ಶಾಲೆಯ ಮುಖ್ಯ ಶಿಕ್ಷಕನ ವರ್ಗಾವಣೆಗೆ ಎಸ್ಎಫ್ಐ ಒತ್ತಾಯ

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ಅಂಬ್ಲಿಕಲ್‌ ಶಾಲೆಯ ಮುಖ್ಯ ಶಿಕ್ಷಕ ಶ್ರೀರಾಮಪ್ಪ ಅವರನ್ನು ವರ್ಗಾವಣೆ ಮಾಡುವಂತೆ ಎಸ್ಎಫ್ಐ ವಿಧ್ಯಾರ್ಥಿ ಸಂಘಟನೆಯಿಂದ ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾ ಅಧ್ಯಕ್ಷ ಅಂಬ್ಲಿಕಲ್ ಎನ್ ಶಿವಪ್ಪ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಬಹುತೇಕ ಬಡವರ ಮಕ್ಕಳು ಹೆಚ್ಚಾಗಿ ವಿಧ್ಯಾಭ್ಯಾಸ ಮಾಡುತ್ತಿದ್ದು, ಶಾಲೆಯ ಅಭಿವೃದ್ಧಿ ವಿಚಾರವಾಗಿ ಮುಖ್ಯ ಶಿಕ್ಷಕ ಶ್ರೀರಾಮಪ್ಪನೊಂದಿಗೆ ಗ್ರಾಮಸ್ಥರು ಭೇಟಿ ನೀಡಿದಾಗ ಏಕವಚನದಲ್ಲಿ ಮಾತಾಡೋದು ಹಿರಿಯರಿಗೆ ಗೌರವ, ಮರ್ಯಾದೆ ಕೊಡೊದಿಲ್ಲ ಜೊತೆಗೆ ವಿದ್ಯಾರ್ಥಿಗಳನ್ನು ಮನಬಂದಂತೆ ಹೊಡೆದು ನಿಮ್ಮ ತಂದೆ ತಾಯಿಗೆ ತಿಳಿಸಿದರೆ ನಿಮ್ಮನ್ನು ಶಾಲೆಯಿಂದ ಹೊರಹಾಕುತ್ತೇನೆಂದು ಬೆದರಿಕೆ ಹಾಕುತ್ತಾರೆ ಎಂದು ಆರೋಪಿಸಿದರು

ಶಾಲೆಯಲ್ಲಿ ಹಿಂದೆ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ಕೆ.ಸರಿತ ರವರು, ಮುಖ್ಯ ಶಿಕ್ಷಕ ಶ್ರೀರಾಮಪ್ಪನ ದೌರ್ಜನ್ಯ, ದಬ್ಬಾಳಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡಿರುವುದರಿಂದ ಆ ಶಿಕ್ಷಕಿ ಸಹ ಯಾರಿಗೂ ಗೊತ್ತಿಲ್ಲದೆ ಸ್ವಯಂ ಪ್ರೇರಿತವಾಗಿ ವರ್ಗಾವಣೆ ಮಾಡಿಕೊಂಡು ಹೋಗಿದ್ದಾರೆ ವಿಧ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮುಖ್ಯ ಶಿಕ್ಷಕ ಶ್ರೀರಾಮಪ್ಪ ರವರನ್ನು ವರ್ಗಾವಣೆ ಮಾಡಿ ಬೇರೆ ಶಿಕ್ಷಕರನ್ನು ವರ್ಗಾವಣೆ ಮಾಡಿ ವಿಧ್ಯಾರ್ಥಿಗಳಿಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್ಎಫ್ಐ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಬೀರಾಜು, ಜಿಲ್ಲಾ ಉಪಾಧ್ಯಕ್ಷ ಸುರೇಶ್ ಬಾಬು, ಜಿಲ್ಲಾ ಸಹ ಕಾರ್ಯದರ್ಶಿಗಳಾದ ಶಶಿಕುಮಾರ್, ಸುದರ್ಶನ್, ಅಂಬ್ಲಿಕಲ್ ಗ್ರಾಮಸ್ಥರಾದ ವಿಜಯಕುಮಾರ್, ಚನ್ನಕೇಶವ, ತಿಪ್ಪಣ್ಣ, ವೆಂಕಟರಣಪ್ಪ, ಮಂಜುನಾಥ್, ವಿಜಯ್ ಮುಂತಾದವರು ಇದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

1 hour ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

13 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

14 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

15 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

15 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

22 hours ago