ಅಕಾಲಿಕ ಮತ್ತು ಆಲಿಕಲ್ಲು ಮಳೆ: 3,196 ಹೆಕ್ಟೇರ್ ಕೃಷಿ ಬೆಳೆ, 3697.96 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ- ಶೀಘ್ರವೇ ಬೆಳೆ ಹಾನಿ ಸಮೀಕ್ಷೆ ನಡೆಸಿ, ಪರಿಹಾರ ನೀಡಲಾಗುವುದು- ಸಚಿವ ಪ್ರಿಯಾಂಕ್ ಖರ್ಗೆ

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಿತು..

ಇತ್ತೀಚಿನ ವರ್ಷಗಳಲ್ಲಿ ಪ್ರತಿ ವರ್ಷವೂ ಅತಿವೃಷ್ಟಿ, ಇಲ್ಲವೇ ಅನಾವೃಷ್ಟಿಯಂತಹ ಒಂದಿಲ್ಲೊಂದು ಪ್ರಾಕೃತಿಕ ವಿಕೋಪಗಳನ್ನು ರಾಜ್ಯ ಎದುರಿಸುತ್ತಿದೆ. ಇದಲ್ಲದೆ ಬೇಸಿಗೆಯ ತೀವ್ರತೆ, ಬಿಸಿಲಿನ ತಾಪಮಾನ ಪ್ರತಿ ವರ್ಷವೂ ಏರುಗತಿಯಲ್ಲಿದೆ. ಪ್ರಾಕೃತಿಕ ಸವಾಲುಗಳನ್ನು ಎದುರಿಸುವುದನ್ನು ಸರ್ಕಾರವು ಆದ್ಯತೆಯಾಗಿ ಪರಿಗಣಿಸಬೇಕಿರುವುದು ಅನಿವಾರ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಪೂರ್ವ ಮುಂಗಾರಿನಲ್ಲಿ 17 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ, 5 ಜಿಲ್ಲೆಗಳಲ್ಲಿ ಅಧಿಕ ಮಳೆ, 6 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದ್ದರೆ, 3 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದೆ. ಪ್ರಸ್ತುತ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯಲ್ಲಿನ 1,655 ಸಣ್ಣ ನೀರಾವರಿ ಕೆರೆ ಕಟ್ಟೆಗಳಲ್ಲಿ ಸರಾಸರಿ 44% ನಷ್ಟು ನೀರು ಲಭ್ಯವಿದೆ. ಈ ಸಾಲಿನ ಬೇಸಿಗೆಯಲ್ಲಿ 207 ತಾಲೂಕುಗಳ ಕೆಲ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಈ ಪೈಕಿ 60 ತಾಲೂಕುಗಳು ಈಗಾಗಲೇ ನೀರಿನ ಕೊರತೆ ಎದುರಿಸುತ್ತಿವೆ‌ ಎಂದರು.

ಬೇಸಿಗೆಯಲ್ಲಿ 2,258 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇದೆ. 212 ಗ್ರಾಮ ಪಂಚಾಯತಿಗಳು ಈಗಾಗಲೇ ಅಭಾವ ಎದುರಿಸುತ್ತಿವೆ. 4 ಗ್ರಾಮಗಳಲ್ಲಿ ಸರ್ಕಾರದ ಟ್ಯಾಂಕರ್‌ಗಳಲ್ಲಿ ನೀರು ಒದಗಿಸುತ್ತಿದ್ದು, 56 ಗ್ರಾಮಗಳಲ್ಲಿ ಖಾಸಗಿ ಟ್ಯಾಂಕರ್‌ಗಳನ್ನು ಬಳಕೆ ಮಾಡಲಾಗುತ್ತಿದೆ ಹಾಗೂ 246 ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ಗಳ ಮುಖಾಂತರ ನೀರಿನ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನೀರಿನ ಕೊರತೆಯನ್ನು ಎದುರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಬೇಸಿಗೆಯನ್ನು ಎದುರಿಸಲು ನಿರ್ಧರಿಸಲಾಗಿರುವ ಮುನ್ನೆಚ್ಚರಿಕಾ ಕ್ರಮಗಳು

◆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸಾಪ್ತಾಹಿಕ ಮಳೆಯ ಮೇಲ್ವಿಚಾರಣೆ.

◆ ಜಿಲ್ಲಾವಾರು ಬೆಳೆ ಆಕಸ್ಮಿಕ ಯೋಜನೆಗಳನ್ನು ಮತ್ತು ಬರ ನಿರೋಧಕ ಬಿತ್ತನೆ ಬೀಜದ ತಳಿಗಳನ್ನು ಅಭಿವೃದ್ಧಿಪಡಿಸುವುದು.

◆ ಜಲಾಶಯದ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಆದ್ಯತೆಯ ಮೇರೆಗೆ ಕಾಯ್ದಿರಿಸುವುದು.

◆ ನರೇಗಾ ಯೋಜನೆಯಡಿ ಜಲ ಸಂರಕ್ಷಣಾ ಕಾಮಗಾರಿಗಳಿಗೆ ಆದ್ಯತೆ ನೀಡುವುದು.

◆ ಮೇವು ಲಭ್ಯತೆ ಬಗ್ಗೆ ನಿರಂತರ ಮೇಲ್ವಿಚಾರಣೆ ನಡೆಸುವುದು ಮತ್ತು ಮೇವಿನ ಕೊರತೆ ನೀಗಿಸಲು ಯೋಜನೆಗಳನ್ನು ಸಿದ್ಧಪಡಿಸುವುದು.

2026ರ ಮಾರ್ಚ್ 15ರಿಂದ 23ನೇ ತಾರೀಖಿನವರೆಗೆ ಸಿಡಿಲು ಮತ್ತು ಗೋಡೆ ಕುಸಿತದಿಂದ ರಾಜ್ಯದಲ್ಲಿ 6 ಜನರು ಬಲಿಯಾಗಿದ್ದು, ₹30 ಲಕ್ಷ ಪರಿಹಾರ ಪಾವತಿಸಲಾಗಿದೆ. 16 ದೊಡ್ಡ ಜಾನುವಾರುಗಳು ಮತ್ತು 116 ಸಣ್ಣ ಜಾನುವಾರುಗಳು ಬಲಿಯಾಗಿದ್ದು, ಅವುಗಳ ಮಾಲೀಕರಿಗೆ ₹10 ಲಕ್ಷ ಪರಿಹಾರ ಒದಗಿಸಲಾಗಿದೆ ಎಂದರು.

ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆಯಿಂದಾಗಿ ಪ್ರಾಥಮಿಕ ವರದಿ ಪ್ರಕಾರ 3,196 ಹೆಕ್ಟೇರ್ ಕೃಷಿ ಬೆಳೆ, 3697.96 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿರುವುದು ಕಂಡುಬಂದಿದೆ. ಶೀಘ್ರವೇ ಬೆಳೆ ಹಾನಿ ಸಮೀಕ್ಷೆ ನಡೆಸಿ, ಪರಿಹಾರ ಒದಗಿಸಲು ನಿರ್ದೇಶಿಸಲಾಗಿದೆ ಎಂದು ತಿಳಿಸಿದರು..

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

6 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

7 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

22 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago