ಕೋಲಾರ: ತಾಲೂಕಿನ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರು 12 ನೇ ವರ್ಷದ ಅಕ್ಕ ಸಮ್ಮೇಳನದಲ್ಲಿ ಕೋಲಾರ ಜಿಲ್ಲೆಯಿಂದ ಭಾಗವಹಿಸುತ್ತಿದ್ದಾರೆ
ವಿಶ್ವ ಕನ್ನಡ ಅಕ್ಕ ಸಮ್ಮೇಳನವು ಅಮೆರಿಕ ದೇಶದ ವರ್ಜೀನಿಯಾ ರಾಜ್ಯದ ರಿಚ್ಮಂಡ್ ನಗರದಲ್ಲಿ ಆಗಸ್ಟ್ 30, 31 ಹಾಗೂ ಸೆಪ್ಟೆಂಬರ್ 1ರಂದು ಮೂರು ದಿನಗಳ ಕಾಲ ನಡೆಯಲಿದ್ದು ಅಮೆರಿಕದಲ್ಲಿರುವ ಸುಮಾರು 42 ಕನ್ನಡ ಸಂಘಗಳು ಸೇರಿ ಈ ಸಮ್ಮೇಳನವನ್ನು ಆಯೋಜಿಸುತ್ತಿದ್ದು ಜಿಲ್ಲೆಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರು ಆ.31ರಂದು ಜಾನಪದ ಗಾಯನ ನಡೆಸಿಕೊಡಲಿದ್ದಾರೆ ಇವರೊಂದಿಗೆ ಕರ್ನಾಟಕದಿಂದ ಹೃದಯವಾಹಿನಿ ಬಳಗದ ಜಾನಪದ ಕಲಾವಿದರು ಸೇರಿದಂತೆ ಬೊಂಬೆ ಕುಣಿತ, ಕವಿಗೋಷ್ಠಿ ಮುಂತಾದ ಕಾರ್ಯಕ್ರಮಗಳನ್ನು ಹೊತ್ತು12 ಜನರ ತಂಡವು ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ,
ಅಕ್ಕ ಸಮ್ಮೇಳನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಸ್ಪರ್ಧೆಗಳು, ಫ್ಯಾಶನ್ ಶೋ, ಸಾಹಿತ್ಯ ಗೋಷ್ಠಿ, ನಾಡಿನ ವಿಶಿಷ್ಟ ಖಾದ್ಯಗಳ ಭೋಜನ ಹೆಸರಾಂತ ಕಲಾವಿದರಿಂದ ಸಂಗೀತ ಕಾರ್ಯಕ್ರಮಗಳು, ನಾಡಿನ ಪಾರಂಪರಿಕ ನೃತ್ಯ ಶೈಲಿಗಳಾದ ಡೊಳ್ಳು ಕುಣಿತ, ಯಕ್ಷಗಾನ ಪ್ರದರ್ಶನ, ಕನ್ನಡ ನಾಟಕಗಳ ಪ್ರದರ್ಶನ ಹೀಗೆ ವಿವಿಧ ಕಾರ್ಯಕ್ರಮಗಳನ್ನು ಒಕ್ಕೂಟವು ಆಯೋಜಿಸಿದೆ ಅಕ್ಕ ಸಮ್ಮೇಳನಕ್ಕೆ ಕರ್ನಾಟಕದ ವಿವಿಧ ಇಲಾಖೆಗಳ ಸಚಿವರು ಆಧ್ಯಾತ್ಮಿಕ ಕ್ಷೇತ್ರದ ಪ್ರಮುಖರು, ಚಿತ್ರ ತಾರೆಯರು, ಸಾಹಿತಿಗಳು, ಉದ್ಯಮಿಗಳು ಭಾಗವಹಿಸಲಿದ್ದಾರೆ,
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…