ಕೋಲಾರ: ತಾಲೂಕಿನ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರು 12 ನೇ ವರ್ಷದ ಅಕ್ಕ ಸಮ್ಮೇಳನದಲ್ಲಿ ಕೋಲಾರ ಜಿಲ್ಲೆಯಿಂದ ಭಾಗವಹಿಸುತ್ತಿದ್ದಾರೆ
ವಿಶ್ವ ಕನ್ನಡ ಅಕ್ಕ ಸಮ್ಮೇಳನವು ಅಮೆರಿಕ ದೇಶದ ವರ್ಜೀನಿಯಾ ರಾಜ್ಯದ ರಿಚ್ಮಂಡ್ ನಗರದಲ್ಲಿ ಆಗಸ್ಟ್ 30, 31 ಹಾಗೂ ಸೆಪ್ಟೆಂಬರ್ 1ರಂದು ಮೂರು ದಿನಗಳ ಕಾಲ ನಡೆಯಲಿದ್ದು ಅಮೆರಿಕದಲ್ಲಿರುವ ಸುಮಾರು 42 ಕನ್ನಡ ಸಂಘಗಳು ಸೇರಿ ಈ ಸಮ್ಮೇಳನವನ್ನು ಆಯೋಜಿಸುತ್ತಿದ್ದು ಜಿಲ್ಲೆಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರು ಆ.31ರಂದು ಜಾನಪದ ಗಾಯನ ನಡೆಸಿಕೊಡಲಿದ್ದಾರೆ ಇವರೊಂದಿಗೆ ಕರ್ನಾಟಕದಿಂದ ಹೃದಯವಾಹಿನಿ ಬಳಗದ ಜಾನಪದ ಕಲಾವಿದರು ಸೇರಿದಂತೆ ಬೊಂಬೆ ಕುಣಿತ, ಕವಿಗೋಷ್ಠಿ ಮುಂತಾದ ಕಾರ್ಯಕ್ರಮಗಳನ್ನು ಹೊತ್ತು12 ಜನರ ತಂಡವು ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ,
ಅಕ್ಕ ಸಮ್ಮೇಳನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಸ್ಪರ್ಧೆಗಳು, ಫ್ಯಾಶನ್ ಶೋ, ಸಾಹಿತ್ಯ ಗೋಷ್ಠಿ, ನಾಡಿನ ವಿಶಿಷ್ಟ ಖಾದ್ಯಗಳ ಭೋಜನ ಹೆಸರಾಂತ ಕಲಾವಿದರಿಂದ ಸಂಗೀತ ಕಾರ್ಯಕ್ರಮಗಳು, ನಾಡಿನ ಪಾರಂಪರಿಕ ನೃತ್ಯ ಶೈಲಿಗಳಾದ ಡೊಳ್ಳು ಕುಣಿತ, ಯಕ್ಷಗಾನ ಪ್ರದರ್ಶನ, ಕನ್ನಡ ನಾಟಕಗಳ ಪ್ರದರ್ಶನ ಹೀಗೆ ವಿವಿಧ ಕಾರ್ಯಕ್ರಮಗಳನ್ನು ಒಕ್ಕೂಟವು ಆಯೋಜಿಸಿದೆ ಅಕ್ಕ ಸಮ್ಮೇಳನಕ್ಕೆ ಕರ್ನಾಟಕದ ವಿವಿಧ ಇಲಾಖೆಗಳ ಸಚಿವರು ಆಧ್ಯಾತ್ಮಿಕ ಕ್ಷೇತ್ರದ ಪ್ರಮುಖರು, ಚಿತ್ರ ತಾರೆಯರು, ಸಾಹಿತಿಗಳು, ಉದ್ಯಮಿಗಳು ಭಾಗವಹಿಸಲಿದ್ದಾರೆ,
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, (ರಾಜ್ಯ ಪಠ್ಯಕ್ರಮ)…
ಹೆಂಡತಿಯ ಒಡವೆಯನ್ನು ಅಡವಿಟ್ಟು, ಹಗಲು ರಾತ್ರಿ ಕಷ್ಟಪಟ್ಟು ಬಾಳೆ ತೋಟ ಬೆಳೆಸಿದ್ದ ರೈತನಿಗೆ ಅದೇ ಜೀವನಕ್ಕೆ ಆಸರೆಯಾಗಿತ್ತು. ಸಾವಿರಕ್ಕೂ ಹೆಚ್ಚು…
‘ಸರ್ಕಾರದಿಂದ ಬಿಡುಗಡೆಯಾದ ಅನುದಾನ ಆಯಾ ಆರ್ಥಿಕ ವರ್ಷದಲ್ಲೇ ಬಳಕೆ ಮಾಡಬೇಕು ಅಮೃತ್ ನಗರೋತ್ಥಾನ- 04 ರಡಿ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ…
ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಶುಕ್ರವಾರ ಹುಂಡಿ ಕಾಣಿಕೆ ಎಣಿಕೆ ಕಾರ್ಯ ಮಾಡಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ…
ತಾಲ್ಲೂಕಿನ ರಾಜಕಾರಣದ ಇತಿಹಾಸದಲ್ಲಿ ಸಿದ್ದಲಿಂಗಯ್ಯ, ರಾಮೇಗೌಡ, ಆರ್.ಎಲ್ ಜಾಲಪ್ಪ, ನರಸಿಂಹಸ್ವಾಮಿ ಸೇರಿದಂತೆ ಘಟಾನುಘಟಿ ನಾಯಕರ ರಾಜಕಾರಣದಲ್ಲಿ ಈವರೆಗೆ ರಾಜಕೀಯದ ಎಲ್ಲೆ…
2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿಯನ್ನು ಖರೀದಿಸುವ ಕಾರ್ಯ ದೊಡ್ಡಬಳ್ಳಾಪುರದ ಎಂಪಿಎಂಸಿ ಆವರಣದಲ್ಲಿರುವ ರಾಗಿ…