ಕೋಲಾರ: ತಾಲೂಕಿನ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರು 12 ನೇ ವರ್ಷದ ಅಕ್ಕ ಸಮ್ಮೇಳನದಲ್ಲಿ ಕೋಲಾರ ಜಿಲ್ಲೆಯಿಂದ ಭಾಗವಹಿಸುತ್ತಿದ್ದಾರೆ
ವಿಶ್ವ ಕನ್ನಡ ಅಕ್ಕ ಸಮ್ಮೇಳನವು ಅಮೆರಿಕ ದೇಶದ ವರ್ಜೀನಿಯಾ ರಾಜ್ಯದ ರಿಚ್ಮಂಡ್ ನಗರದಲ್ಲಿ ಆಗಸ್ಟ್ 30, 31 ಹಾಗೂ ಸೆಪ್ಟೆಂಬರ್ 1ರಂದು ಮೂರು ದಿನಗಳ ಕಾಲ ನಡೆಯಲಿದ್ದು ಅಮೆರಿಕದಲ್ಲಿರುವ ಸುಮಾರು 42 ಕನ್ನಡ ಸಂಘಗಳು ಸೇರಿ ಈ ಸಮ್ಮೇಳನವನ್ನು ಆಯೋಜಿಸುತ್ತಿದ್ದು ಜಿಲ್ಲೆಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರು ಆ.31ರಂದು ಜಾನಪದ ಗಾಯನ ನಡೆಸಿಕೊಡಲಿದ್ದಾರೆ ಇವರೊಂದಿಗೆ ಕರ್ನಾಟಕದಿಂದ ಹೃದಯವಾಹಿನಿ ಬಳಗದ ಜಾನಪದ ಕಲಾವಿದರು ಸೇರಿದಂತೆ ಬೊಂಬೆ ಕುಣಿತ, ಕವಿಗೋಷ್ಠಿ ಮುಂತಾದ ಕಾರ್ಯಕ್ರಮಗಳನ್ನು ಹೊತ್ತು12 ಜನರ ತಂಡವು ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ,
ಅಕ್ಕ ಸಮ್ಮೇಳನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಸ್ಪರ್ಧೆಗಳು, ಫ್ಯಾಶನ್ ಶೋ, ಸಾಹಿತ್ಯ ಗೋಷ್ಠಿ, ನಾಡಿನ ವಿಶಿಷ್ಟ ಖಾದ್ಯಗಳ ಭೋಜನ ಹೆಸರಾಂತ ಕಲಾವಿದರಿಂದ ಸಂಗೀತ ಕಾರ್ಯಕ್ರಮಗಳು, ನಾಡಿನ ಪಾರಂಪರಿಕ ನೃತ್ಯ ಶೈಲಿಗಳಾದ ಡೊಳ್ಳು ಕುಣಿತ, ಯಕ್ಷಗಾನ ಪ್ರದರ್ಶನ, ಕನ್ನಡ ನಾಟಕಗಳ ಪ್ರದರ್ಶನ ಹೀಗೆ ವಿವಿಧ ಕಾರ್ಯಕ್ರಮಗಳನ್ನು ಒಕ್ಕೂಟವು ಆಯೋಜಿಸಿದೆ ಅಕ್ಕ ಸಮ್ಮೇಳನಕ್ಕೆ ಕರ್ನಾಟಕದ ವಿವಿಧ ಇಲಾಖೆಗಳ ಸಚಿವರು ಆಧ್ಯಾತ್ಮಿಕ ಕ್ಷೇತ್ರದ ಪ್ರಮುಖರು, ಚಿತ್ರ ತಾರೆಯರು, ಸಾಹಿತಿಗಳು, ಉದ್ಯಮಿಗಳು ಭಾಗವಹಿಸಲಿದ್ದಾರೆ,
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…