ಕೋಲಾರ: ತಾಲೂಕಿನ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರು 12 ನೇ ವರ್ಷದ ಅಕ್ಕ ಸಮ್ಮೇಳನದಲ್ಲಿ ಕೋಲಾರ ಜಿಲ್ಲೆಯಿಂದ ಭಾಗವಹಿಸುತ್ತಿದ್ದಾರೆ
ವಿಶ್ವ ಕನ್ನಡ ಅಕ್ಕ ಸಮ್ಮೇಳನವು ಅಮೆರಿಕ ದೇಶದ ವರ್ಜೀನಿಯಾ ರಾಜ್ಯದ ರಿಚ್ಮಂಡ್ ನಗರದಲ್ಲಿ ಆಗಸ್ಟ್ 30, 31 ಹಾಗೂ ಸೆಪ್ಟೆಂಬರ್ 1ರಂದು ಮೂರು ದಿನಗಳ ಕಾಲ ನಡೆಯಲಿದ್ದು ಅಮೆರಿಕದಲ್ಲಿರುವ ಸುಮಾರು 42 ಕನ್ನಡ ಸಂಘಗಳು ಸೇರಿ ಈ ಸಮ್ಮೇಳನವನ್ನು ಆಯೋಜಿಸುತ್ತಿದ್ದು ಜಿಲ್ಲೆಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರು ಆ.31ರಂದು ಜಾನಪದ ಗಾಯನ ನಡೆಸಿಕೊಡಲಿದ್ದಾರೆ ಇವರೊಂದಿಗೆ ಕರ್ನಾಟಕದಿಂದ ಹೃದಯವಾಹಿನಿ ಬಳಗದ ಜಾನಪದ ಕಲಾವಿದರು ಸೇರಿದಂತೆ ಬೊಂಬೆ ಕುಣಿತ, ಕವಿಗೋಷ್ಠಿ ಮುಂತಾದ ಕಾರ್ಯಕ್ರಮಗಳನ್ನು ಹೊತ್ತು12 ಜನರ ತಂಡವು ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ,
ಅಕ್ಕ ಸಮ್ಮೇಳನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಸ್ಪರ್ಧೆಗಳು, ಫ್ಯಾಶನ್ ಶೋ, ಸಾಹಿತ್ಯ ಗೋಷ್ಠಿ, ನಾಡಿನ ವಿಶಿಷ್ಟ ಖಾದ್ಯಗಳ ಭೋಜನ ಹೆಸರಾಂತ ಕಲಾವಿದರಿಂದ ಸಂಗೀತ ಕಾರ್ಯಕ್ರಮಗಳು, ನಾಡಿನ ಪಾರಂಪರಿಕ ನೃತ್ಯ ಶೈಲಿಗಳಾದ ಡೊಳ್ಳು ಕುಣಿತ, ಯಕ್ಷಗಾನ ಪ್ರದರ್ಶನ, ಕನ್ನಡ ನಾಟಕಗಳ ಪ್ರದರ್ಶನ ಹೀಗೆ ವಿವಿಧ ಕಾರ್ಯಕ್ರಮಗಳನ್ನು ಒಕ್ಕೂಟವು ಆಯೋಜಿಸಿದೆ ಅಕ್ಕ ಸಮ್ಮೇಳನಕ್ಕೆ ಕರ್ನಾಟಕದ ವಿವಿಧ ಇಲಾಖೆಗಳ ಸಚಿವರು ಆಧ್ಯಾತ್ಮಿಕ ಕ್ಷೇತ್ರದ ಪ್ರಮುಖರು, ಚಿತ್ರ ತಾರೆಯರು, ಸಾಹಿತಿಗಳು, ಉದ್ಯಮಿಗಳು ಭಾಗವಹಿಸಲಿದ್ದಾರೆ,
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…