ಕೋಲಾರ: ತಾಲೂಕಿನ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರು 12 ನೇ ವರ್ಷದ ಅಕ್ಕ ಸಮ್ಮೇಳನದಲ್ಲಿ ಕೋಲಾರ ಜಿಲ್ಲೆಯಿಂದ ಭಾಗವಹಿಸುತ್ತಿದ್ದಾರೆ
ವಿಶ್ವ ಕನ್ನಡ ಅಕ್ಕ ಸಮ್ಮೇಳನವು ಅಮೆರಿಕ ದೇಶದ ವರ್ಜೀನಿಯಾ ರಾಜ್ಯದ ರಿಚ್ಮಂಡ್ ನಗರದಲ್ಲಿ ಆಗಸ್ಟ್ 30, 31 ಹಾಗೂ ಸೆಪ್ಟೆಂಬರ್ 1ರಂದು ಮೂರು ದಿನಗಳ ಕಾಲ ನಡೆಯಲಿದ್ದು ಅಮೆರಿಕದಲ್ಲಿರುವ ಸುಮಾರು 42 ಕನ್ನಡ ಸಂಘಗಳು ಸೇರಿ ಈ ಸಮ್ಮೇಳನವನ್ನು ಆಯೋಜಿಸುತ್ತಿದ್ದು ಜಿಲ್ಲೆಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರು ಆ.31ರಂದು ಜಾನಪದ ಗಾಯನ ನಡೆಸಿಕೊಡಲಿದ್ದಾರೆ ಇವರೊಂದಿಗೆ ಕರ್ನಾಟಕದಿಂದ ಹೃದಯವಾಹಿನಿ ಬಳಗದ ಜಾನಪದ ಕಲಾವಿದರು ಸೇರಿದಂತೆ ಬೊಂಬೆ ಕುಣಿತ, ಕವಿಗೋಷ್ಠಿ ಮುಂತಾದ ಕಾರ್ಯಕ್ರಮಗಳನ್ನು ಹೊತ್ತು12 ಜನರ ತಂಡವು ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ,
ಅಕ್ಕ ಸಮ್ಮೇಳನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಸ್ಪರ್ಧೆಗಳು, ಫ್ಯಾಶನ್ ಶೋ, ಸಾಹಿತ್ಯ ಗೋಷ್ಠಿ, ನಾಡಿನ ವಿಶಿಷ್ಟ ಖಾದ್ಯಗಳ ಭೋಜನ ಹೆಸರಾಂತ ಕಲಾವಿದರಿಂದ ಸಂಗೀತ ಕಾರ್ಯಕ್ರಮಗಳು, ನಾಡಿನ ಪಾರಂಪರಿಕ ನೃತ್ಯ ಶೈಲಿಗಳಾದ ಡೊಳ್ಳು ಕುಣಿತ, ಯಕ್ಷಗಾನ ಪ್ರದರ್ಶನ, ಕನ್ನಡ ನಾಟಕಗಳ ಪ್ರದರ್ಶನ ಹೀಗೆ ವಿವಿಧ ಕಾರ್ಯಕ್ರಮಗಳನ್ನು ಒಕ್ಕೂಟವು ಆಯೋಜಿಸಿದೆ ಅಕ್ಕ ಸಮ್ಮೇಳನಕ್ಕೆ ಕರ್ನಾಟಕದ ವಿವಿಧ ಇಲಾಖೆಗಳ ಸಚಿವರು ಆಧ್ಯಾತ್ಮಿಕ ಕ್ಷೇತ್ರದ ಪ್ರಮುಖರು, ಚಿತ್ರ ತಾರೆಯರು, ಸಾಹಿತಿಗಳು, ಉದ್ಯಮಿಗಳು ಭಾಗವಹಿಸಲಿದ್ದಾರೆ,
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…