ಅಕ್ಟೋಬರ್ 01 ರಿಂದ ರಾಗಿ ಖರೀದಿ ನೋಂದಣಿ ಪ್ರಕ್ರಿಯೆ ಆರಂಭ:ಪ್ರತಿ ಕ್ವಿಂಟಾಲ್ ರಾಗಿಗೆ 4886 ರೂ. ಬೆಂಬಲ ಬೆಲೆ ನಿಗದಿ

ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಅಕ್ಟೋಬರ್ 01 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ರೈತರು ಹತ್ತಿರದ ನೋಂದಣಿ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಇಲಾಖೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರವು 2025-26 ನೇ ಸಾಲಿಗೆ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಪ್ರತಿ ಕ್ವಿಂಟಾಲ್ ರಾಗಿಗೆ 4886 ರೂ.ಗಳ ಬೆಲೆ ನಿಗದಿ ಪಡಿಸಿದೆ. ಅಕ್ಟೋಬರ್ 01 ರಿಂದ ಡಿಸೆಂಬರ್ 15 ರವರೆಗೆ ನೋಂದಣಿ ಪ್ರಕ್ರಿಯೆ ನಡೆಯಲಿದೆ. 2026 ಜನವರಿ 01 ರಿಂದ ಮಾರ್ಚ್ 31 ರ ಅವಧಿಯವರೆಗೆ ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದರು.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಏಜೆನ್ಸಿ ಆಗಿ ನೇಮಿಸಲಾಗಿದೆ. ನಿಗಮದ ಉಪ ಏಜೆನ್ಸಿಗಳು ಸಹಯೋಗದಲ್ಲಿ ನೋಂದಣಿ ಪ್ರಕ್ರಿಯೆ ಬಯೋಮೆಟ್ರಿಕ್ ಆಧಾರದಲ್ಲಿ ನಡೆಯುವುದರಿಂದ ಅವಶ್ಯಕತೆ ಇರುವ ಟೇಬಲ್, ಚೇರ್, ಕಂಪ್ಯೂಟರ್, ಸಿಬ್ಬಂದಿ, ವಿದ್ಯುತ್ ಸಂಪರ್ಕ, ಇಂಟರ್ನೆಟ್, ತೂಕದ ಯಂತ್ರ ವ್ಯವಸ್ಥೆ ಮಾಡಿ ಜೊತೆಗೆ ರೈತರಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಿ ಸ್ಥಳದಲ್ಲಿ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ರೈತರು ಬೆಳೆದಿರುವ ಆಹಾರ ಧಾನ್ಯಗಳಿಗೆ ಸಂಬಂಧಿಸಿದಂತೆ ಕೃಷಿ ಇಲಾಖೆಯ ಫ್ರೂಟ್ಸ್ ದತ್ತಾಂಶದಿಂದ ಮಾಹಿತಿಯನ್ನು ಪಡೆಯಲಾಗುತ್ತದೆ ಹಾಗಾಗಿ ನೋಂದಣಿಗೆ ಫ್ರೂಟ್ಸ್ ಐಡಿ ಕಡ್ಡಾಯವಾಗಿದ್ದು ಐಡಿ ಇಲ್ಲದ ರೈತರು ಕೃಷಿ ಇಲಾಖೆಯ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪ್ರೂಟ್ಸ್ ಐಡಿ ಪಡೆದು ನೋಂದಣಿ ಮಾಡಿಕೊಳ್ಳಿ ಎಂದರು.

ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುಳಾ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕಲಾವತಿ, ಸಹಕಾರ ಸಂಘಗಳ ಉಪ ನಿಬಂಧಕರಾದ ಚಂದ್ರಶೇಖರ್, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ತನ್ವೀರ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಅಬಿದಾ ಅಜುಂ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ಗೋಪಾಲ ಕೃಷ್ಣ, ಜಿಲ್ಲಾ ಉಗ್ರಾಣ ಕೇಂದ್ರಗಳ ವ್ಯವಸ್ಥಾಪಕರು, ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

*ರಾಗಿ ನೋಂದಣಿ ಕೇಂದ್ರಗಳು ತೆರೆಯುವ ಸ್ಥಳ*

*ನೆಲಮಂಗಲ*
1)ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ಕೆಂಪಲಿಂಗನಹಳ್ಳಿ ಕ್ರಾಸ್, ಕುಣಿಗಲ್ ರಸ್ತೆ, ನೆಲಮಂಗಲ ತಾಲ್ಲೂಕು.
2) ವ್ಯವಸಾಯ ಸೇವಾ ಸಹಕಾರ ಸಂಘ, ಕಲಾಲು ಘಟ್ಟ, ತ್ಯಾಮಗೊಂಡ್ಲು ಹೋಬಳಿ.
3)ವ್ಯವಸಾಯ ಸೇವಾ ಸಹಕಾರ ಸಂಘ, ದಾಬಾಸ್ ಪೇಟೆ, ಸೋಂಪುರ ಹೋಬಳಿ.

*ದೊಡ್ಡಬಳ್ಳಾಪುರ*
1)ರೈತ ಭವನ ಕೇಂದ್ರ, ಎಂಪಿಎಂಸಿ ಯಾರ್ಡ್, ದೊಡ್ಡಬಳ್ಳಾಪುರ.
2)ರೈತ ಸಂಪರ್ಕ ಕೇಂದ್ರ, ಸಾಸಲು ಹೋಬಳಿ.

*ದೇವನಹಳ್ಳಿ*
ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ಕುರುಬರ ದೊಡ್ಡಿ ರಸ್ತೆ, ಚಿಕ್ಕಬಳ್ಳಾಪುರ ರಸ್ತೆ, ದೇವನಹಳ್ಳಿ.

*ಹೊಸಕೋಟೆ*
ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ವೀರಭದ್ರೇಶ್ವರ ರೈಸ್ ಮಿಲ್ ಕಾಂಪೌಂಡ್, ಮಾಲೂರು ರಸ್ತೆ, ಹೊಸಕೋಟೆ.

Ramesh Babu

Journalist

Recent Posts

ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ……. ಇವು ಆತ್ಮಸಾಕ್ಷಿಯ ನುಡಿಗಳೇ – ಸಂವಿಧಾನಾತ್ಮಕ ಕರ್ತವ್ಯವೇ – ಒಂದು ಒಣ ವಿಧಿ ವಿಧಾನವೇ…….

ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…

2 hours ago

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

16 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

16 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

16 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

16 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

19 hours ago