ಅಕ್ಟೋಬರ್ 21 ರಿಂದ ನವೆಂಬರ್ 20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ

ಅಕ್ಟೋಬರ್ 21 ರಿಂದ ನವೆಂಬರ್ 20 ರವರೆಗೆ ನಡೆಯಲಿರುವ 6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರತಿ ಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ರೋಗ ನಿರೋಧಕ ಲಸಿಕೆ ಹಾಕುವ ಮೂಲಕ ಶೇಕಡ 100 ರಷ್ಟು ಪ್ರಗತಿ ಸಾಧಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪಶು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿದಯಾ ಸಂಘದ ಸಭೆ ಹಾಗೂ 6 ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 20ನೇ ಜಾನುವಾರು ಗಣತಿಯಂತೆ 1,70,722 ದನಗಳು ಹಾಗೂ 16,924 ಎಮ್ಮೆಗಳಿದ್ದು, ಒಟ್ಟು 1,87, 646 ಜಾನುವಾರುಗಳಿಗೆ ಅಕ್ಟೋಬರ್ 21ರಿಂದ ನವೆಂಬರ್ 20ರವರೆಗೆ ಆರನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ಬಮೂಲ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.

ಒಟ್ಟು ಸಾವಿರ 1725 ಬ್ಲಾಕ್ ಗಳನ್ನಾಗಿ ವಿಂಗಡಿಸಿದ್ದು, ಒಟ್ಟು 130 ತಂಡಗಳಲ್ಲಿ ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಬಮೂಲ್ ಸಿಬ್ಬಂದಿಗಳು ಸೇರಿ ಒಟ್ಟು 312 ಲಸಿಕೆದಾರರು ಪ್ರತಿ ದಿನ ಬೆಳಿಗ್ಗೆ 6:30 ರಿಂದ ಬೆಳಿಗ್ಗೆ 11:00 ಗಂಟೆಯವರೆಗೆ ನಿಗದಿತ ವೇಳಾಪಟ್ಟಿಯಂತೆ ಗ್ರಾಮಗಳಿಗೆ ಭೇಟಿ ನೀಡಿ ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕೆಯನ್ನು ಉಚಿತವಾಗಿ ನೀಡಲಿದ್ದಾರೆ.

ಈ ಲಸಿಕಾ ಕಾರ್ಯಕ್ರಮದಲ್ಲಿ ರೇಬಿಸ್ ಅಭಿಯಾನದ ಅಂಗವಾಗಿ ನಾಯಿಗಳಿಗೆ ರೇಬಿಸ್ ಲಸಿಕೆಯನ್ನು ಉಚಿತವಾಗಿ ನೀಡಲಿದ್ದಾರೆ. ಈಗಾಗಲೇ ಪ್ರತಿ ಗ್ರಾಮವಾರು ಮೈಕ್ರೋ ಪ್ಲಾನ್ ಮಾಡಲಾಗಿದ್ದು, ಅದರ ಅನ್ವಯ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಈ ಲಸಿಕ ಕಾರ್ಯಕ್ರಮದ ಕುರಿತು ರೈತರಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಜಿಲ್ಲೆಯ ಪ್ರತಿ ಪಶು ವೈದ್ಯಕೀಯ ಸಂಸ್ಥೆ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಆವರಣದಲ್ಲಿ ಪೋಸ್ಟರ್, ಬ್ಯಾನರ್ ಪ್ರದರ್ಶಿಸಲಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 1,55,000 ಡೋಸಸ್ ಕಾಲುಬಾಯಿ ರೋಗ ಲಸಿಕೆ ಲಭ್ಯವಿದ್ದು, ಲಸಿಕೆ ಕಾರ್ಯಕ್ರಮಕ್ಕೆ ಅಗತ್ಯವಿರುವ ಸಿರಂಜುಗಳ ಸರಬರಾಜು ಆಗಿದೆ‌. ಪ್ರತಿ ರಾಸುಗೆ ಒಂದರಂತೆ ಸಿರಿಂಜ್ ಮತ್ತು ನೀಡಲ್ ಗಳನ್ನು ಬಳಸಿ ಲಸಿಕೆ ಹಾಕಲಾಗುವುದು.

ಎಲ್ಲಾ ರೈತ ಬಾಂಧವರು ತಮ್ಮ ಮೂರು ತಿಂಗಳ ಮೇಲ್ಪಟ್ಟ ಎಲ್ಲ ಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ರೋಗ ಲಸಿಕೆ ಹಾಕಿಸಿ ಹಾಗೂ ಕರುಗಳಿಗೆ 21 ದಿನಗಳ ನಂತರ ಬೂಸ್ಟರ್ ಡೋಸ್ ಲೆಸ್ ಗೆ ಹಾಕಿಸಿ ಎಂದು ಜಿಲ್ಲಾಧಿಕಾರಿ
ಹೇಳಿದರು.

ಲಸಿಕಾ ಕಾರ್ಯಕ್ರಮ ಅಗತ್ಯ ಸಿದ್ಧತೆ ಕೈಗೊಂಡು ಜಿಲ್ಲೇಯ ಪ್ರತಿ ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಬೇಕು. ಲಸಿಕೆ ಹಾಕಿದ ನಂತರ ಸಿರಿಂಜ್ ಹಾಗೂ ನೀಡಲ್ ಗಳನ್ನು ಸೂಕ್ತ ಮುಂಜಾಗ್ರತಾ ಕ್ರಮಗಳ ಮೂಲಕ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಜಗದೀಶ್, ತಾಲ್ಲೂಕು ಸಹಾಯಕ ನಿರ್ದೇಶಕರು, ಕೆ.ಎಂ.ಎಫ್, ಬಮೂಲ್ ಮುಖ್ಯಸ್ಥರು ಸೇರಿದಂತೆ ಇತರೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

15 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

16 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

17 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

17 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago