Categories: ಕೋಲಾರ

ಅಕ್ರಮವಾಗಿ ಎಸ್ಟಿ ಪ್ರಮಾಣಪತ್ರ ಹಾಗೂ ಅನ್ಯ ಸಮುದಾಯಗಳು ಎಸ್ಟಿ ಪಂಗಡಕ್ಕೆ ಸೇರ್ಪಡೆ ವಿರೋಧಿಸಿ ಡಿಸಿಗೆ ಮನವಿ

ಕೋಲಾರ: ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ಪ್ರವರ್ಗ-೧ ರಲ್ಲಿರುವ ಬೇರೆ ಸಮುದಾಯದವರು ಅಕ್ರಮವಾಗಿ ಎಸ್ಟಿ ಪಂಗಡದ ಜಾತಿ ಪ್ರಮಾಣ ಪತ್ರ ಮತ್ತು ಸಿಂಧುತ್ವ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ವಂಚನೆ ಹಾಗೂ ಅನ್ಯ ಸಮುದಾಯದವರನ್ನು ಎಸ್ಟಿ ಪಟ್ಟಿಗೆ ಸೇರಿಸಬಾರದು ಎಂದು ಒತ್ತಾಯಿಸಿ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗೆ ಮನವಿ ನೀಡಿ ಒತ್ತಾಯಿಸಲಾಯಿತು

ಈ ಸಂದರ್ಭದಲ್ಲಿ ವಾಲ್ಮೀಕಿ ಗುರುಪೀಠದ ಕೋಲಾರ ಜಿಲ್ಲೆಯ ಧರ್ಮದರ್ಶಿ ಮಾಲೂರು ಎನ್ ವೆಂಕಟರಾಮ್ ಮಾತನಾಡಿ ಹಿಂದುಳಿದ ವರ್ಗಗಳ ಪ್ರವರ್ಗ -೧ ರಲ್ಲಿನ ಜಾತಿ ಸಮುದಾಯಗಳು ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರ ನೀಡುವುದು ಕೂಡಲೇ ನಿಲ್ಲಿಸಬೇಕು ಪ್ರಮಾಣ ಪತ್ರ ಕೊಟ್ಟವರ ಮತ್ತು ಪಡೆದವರ ಮೇಲೆ ಹೈಕೋರ್ಟ್ ಆದೇಶದಂತೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು

ರಾಜ್ಯದಲ್ಲಿ ತಳವಾರ ಜಾತಿ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಲು ಹೊರಟಿದ್ದಾರೆ ಅದನ್ನು ಕೂಡಲೇ ನಿಲ್ಲಿಸಬೇಕು ಕಾಲೇಜು ಶಿಕ್ಷಣ ಮತ್ತು ಉನ್ನತ ಶಿಕ್ಷಣದಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಪಂಗಡದ ವಿಧ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠವನ್ನು ಸ್ಥಾಪಿಸಿ ವಾಲ್ಮೀಕಿ ಜನಾಂಗದ ಸಾಂಸ್ಕೃತಿಕ ಆರ್ಥಿಕ ಶೈಕ್ಷಣಿಕ ಹಾಗೂ ರಾಜಕೀಯ ವಿಷಯಗಳ ಅಧ್ಯಯನಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು

ಈ ಸಂದರ್ಭದಲ್ಲಿ ಜಿಲ್ಲಾ ವಾಲ್ಮೀಕಿ ಸಂಘದ ಅಧ್ಯಕ್ಷ ಎಂ ಬಾಲಗೋವಿಂದ್ ಮಾತನಾಡಿ ರಾಜ್ಯದಲ್ಲಿ ಅಪೂರ್ಣಗೊಂಡ ವಾಲ್ಮೀಕಿ ಭವನಗಳಿಗೆ ಹಣ ಬಿಡುಗಡೆ ಮಾಡಬೇಕು ಬ್ಯಾಕ್ ಲಾಕ್ ಹುದ್ದೆಗಳನ್ನು ನೇಮಕ ಮಾಡಬೇಕು ವಾಲ್ಮೀಕಿ ಜನಾಂಗದ ಮೇಲೆ ನಿರಂತರ ದೌರ್ಜನ್ಯ ಕೊಲೆ ಅತ್ಯಾಚಾರ ಘಟನೆಗಳನ್ನು ತಡೆಗಟ್ಟಲು ವಿಶೇಷ ಕಾನೂನು ರೂಪಿಸಬೇಕು ಸಮುದಾಯದ ಬೇಡಿಕೆಗಳು ಕಾಲಮೀತಿಯಲ್ಲಿ ಈಡೇರಿಸದೆ ಹೋದರೆ ವಾಲ್ಮೀಕಿ ಜಯಂತಿಯನ್ನು ಬಹಿಷ್ಕಾರ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು

ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೋಟೆ ಶ್ರೀನಿವಾಸ್, ಗ್ರಾಪಂ ಸದಸ್ಯ ಕುಡುವನಹಳ್ಳಿ ಆನಂದ್, ಬೈರಂಡಹಳ್ಳಿ ನಾಗೇಶ್, ಕಲ್ಲಂಡೂರು ನಾರಾಯಣಸ್ವಾಮಿ, ಮಂಜುಳಾ ಶ್ರೀನಿವಾಸ್, ರವಿ, ಪ್ರದೀಪ್ ಕುಮಾರ್, ನವೀನ್ ಕುಮಾರ್, ಕಲ್ವ ರವೀಂದ್ರ, ರಮೇಶ್, ಮಹೇಶ್ ಕುಮಾರ್, ನಾಗರಾಜ್ ಮುಂತಾದವರು ಇದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

47 minutes ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

12 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

13 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

13 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

15 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

18 hours ago