Categories: ಕೋಲಾರ

ಅಕ್ರಮವಾಗಿ ಎಸ್ಟಿ ಪ್ರಮಾಣಪತ್ರ ಹಾಗೂ ಅನ್ಯ ಸಮುದಾಯಗಳು ಎಸ್ಟಿ ಪಂಗಡಕ್ಕೆ ಸೇರ್ಪಡೆ ವಿರೋಧಿಸಿ ಡಿಸಿಗೆ ಮನವಿ

ಕೋಲಾರ: ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ಪ್ರವರ್ಗ-೧ ರಲ್ಲಿರುವ ಬೇರೆ ಸಮುದಾಯದವರು ಅಕ್ರಮವಾಗಿ ಎಸ್ಟಿ ಪಂಗಡದ ಜಾತಿ ಪ್ರಮಾಣ ಪತ್ರ ಮತ್ತು ಸಿಂಧುತ್ವ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ವಂಚನೆ ಹಾಗೂ ಅನ್ಯ ಸಮುದಾಯದವರನ್ನು ಎಸ್ಟಿ ಪಟ್ಟಿಗೆ ಸೇರಿಸಬಾರದು ಎಂದು ಒತ್ತಾಯಿಸಿ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗೆ ಮನವಿ ನೀಡಿ ಒತ್ತಾಯಿಸಲಾಯಿತು

ಈ ಸಂದರ್ಭದಲ್ಲಿ ವಾಲ್ಮೀಕಿ ಗುರುಪೀಠದ ಕೋಲಾರ ಜಿಲ್ಲೆಯ ಧರ್ಮದರ್ಶಿ ಮಾಲೂರು ಎನ್ ವೆಂಕಟರಾಮ್ ಮಾತನಾಡಿ ಹಿಂದುಳಿದ ವರ್ಗಗಳ ಪ್ರವರ್ಗ -೧ ರಲ್ಲಿನ ಜಾತಿ ಸಮುದಾಯಗಳು ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರ ನೀಡುವುದು ಕೂಡಲೇ ನಿಲ್ಲಿಸಬೇಕು ಪ್ರಮಾಣ ಪತ್ರ ಕೊಟ್ಟವರ ಮತ್ತು ಪಡೆದವರ ಮೇಲೆ ಹೈಕೋರ್ಟ್ ಆದೇಶದಂತೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು

ರಾಜ್ಯದಲ್ಲಿ ತಳವಾರ ಜಾತಿ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಲು ಹೊರಟಿದ್ದಾರೆ ಅದನ್ನು ಕೂಡಲೇ ನಿಲ್ಲಿಸಬೇಕು ಕಾಲೇಜು ಶಿಕ್ಷಣ ಮತ್ತು ಉನ್ನತ ಶಿಕ್ಷಣದಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಪಂಗಡದ ವಿಧ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠವನ್ನು ಸ್ಥಾಪಿಸಿ ವಾಲ್ಮೀಕಿ ಜನಾಂಗದ ಸಾಂಸ್ಕೃತಿಕ ಆರ್ಥಿಕ ಶೈಕ್ಷಣಿಕ ಹಾಗೂ ರಾಜಕೀಯ ವಿಷಯಗಳ ಅಧ್ಯಯನಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು

ಈ ಸಂದರ್ಭದಲ್ಲಿ ಜಿಲ್ಲಾ ವಾಲ್ಮೀಕಿ ಸಂಘದ ಅಧ್ಯಕ್ಷ ಎಂ ಬಾಲಗೋವಿಂದ್ ಮಾತನಾಡಿ ರಾಜ್ಯದಲ್ಲಿ ಅಪೂರ್ಣಗೊಂಡ ವಾಲ್ಮೀಕಿ ಭವನಗಳಿಗೆ ಹಣ ಬಿಡುಗಡೆ ಮಾಡಬೇಕು ಬ್ಯಾಕ್ ಲಾಕ್ ಹುದ್ದೆಗಳನ್ನು ನೇಮಕ ಮಾಡಬೇಕು ವಾಲ್ಮೀಕಿ ಜನಾಂಗದ ಮೇಲೆ ನಿರಂತರ ದೌರ್ಜನ್ಯ ಕೊಲೆ ಅತ್ಯಾಚಾರ ಘಟನೆಗಳನ್ನು ತಡೆಗಟ್ಟಲು ವಿಶೇಷ ಕಾನೂನು ರೂಪಿಸಬೇಕು ಸಮುದಾಯದ ಬೇಡಿಕೆಗಳು ಕಾಲಮೀತಿಯಲ್ಲಿ ಈಡೇರಿಸದೆ ಹೋದರೆ ವಾಲ್ಮೀಕಿ ಜಯಂತಿಯನ್ನು ಬಹಿಷ್ಕಾರ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು

ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೋಟೆ ಶ್ರೀನಿವಾಸ್, ಗ್ರಾಪಂ ಸದಸ್ಯ ಕುಡುವನಹಳ್ಳಿ ಆನಂದ್, ಬೈರಂಡಹಳ್ಳಿ ನಾಗೇಶ್, ಕಲ್ಲಂಡೂರು ನಾರಾಯಣಸ್ವಾಮಿ, ಮಂಜುಳಾ ಶ್ರೀನಿವಾಸ್, ರವಿ, ಪ್ರದೀಪ್ ಕುಮಾರ್, ನವೀನ್ ಕುಮಾರ್, ಕಲ್ವ ರವೀಂದ್ರ, ರಮೇಶ್, ಮಹೇಶ್ ಕುಮಾರ್, ನಾಗರಾಜ್ ಮುಂತಾದವರು ಇದ್ದರು.

Ramesh Babu

Journalist

Recent Posts

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

1 hour ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

12 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

13 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

17 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

1 day ago