Categories: ಕೋಲಾರ

ಅಕ್ರಮವಾಗಿ ಎಸ್ಟಿ ಪ್ರಮಾಣಪತ್ರ ಹಾಗೂ ಅನ್ಯ ಸಮುದಾಯಗಳು ಎಸ್ಟಿ ಪಂಗಡಕ್ಕೆ ಸೇರ್ಪಡೆ ವಿರೋಧಿಸಿ ಡಿಸಿಗೆ ಮನವಿ

ಕೋಲಾರ: ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ಪ್ರವರ್ಗ-೧ ರಲ್ಲಿರುವ ಬೇರೆ ಸಮುದಾಯದವರು ಅಕ್ರಮವಾಗಿ ಎಸ್ಟಿ ಪಂಗಡದ ಜಾತಿ ಪ್ರಮಾಣ ಪತ್ರ ಮತ್ತು ಸಿಂಧುತ್ವ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ವಂಚನೆ ಹಾಗೂ ಅನ್ಯ ಸಮುದಾಯದವರನ್ನು ಎಸ್ಟಿ ಪಟ್ಟಿಗೆ ಸೇರಿಸಬಾರದು ಎಂದು ಒತ್ತಾಯಿಸಿ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗೆ ಮನವಿ ನೀಡಿ ಒತ್ತಾಯಿಸಲಾಯಿತು

ಈ ಸಂದರ್ಭದಲ್ಲಿ ವಾಲ್ಮೀಕಿ ಗುರುಪೀಠದ ಕೋಲಾರ ಜಿಲ್ಲೆಯ ಧರ್ಮದರ್ಶಿ ಮಾಲೂರು ಎನ್ ವೆಂಕಟರಾಮ್ ಮಾತನಾಡಿ ಹಿಂದುಳಿದ ವರ್ಗಗಳ ಪ್ರವರ್ಗ -೧ ರಲ್ಲಿನ ಜಾತಿ ಸಮುದಾಯಗಳು ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರ ನೀಡುವುದು ಕೂಡಲೇ ನಿಲ್ಲಿಸಬೇಕು ಪ್ರಮಾಣ ಪತ್ರ ಕೊಟ್ಟವರ ಮತ್ತು ಪಡೆದವರ ಮೇಲೆ ಹೈಕೋರ್ಟ್ ಆದೇಶದಂತೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು

ರಾಜ್ಯದಲ್ಲಿ ತಳವಾರ ಜಾತಿ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಲು ಹೊರಟಿದ್ದಾರೆ ಅದನ್ನು ಕೂಡಲೇ ನಿಲ್ಲಿಸಬೇಕು ಕಾಲೇಜು ಶಿಕ್ಷಣ ಮತ್ತು ಉನ್ನತ ಶಿಕ್ಷಣದಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಪಂಗಡದ ವಿಧ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠವನ್ನು ಸ್ಥಾಪಿಸಿ ವಾಲ್ಮೀಕಿ ಜನಾಂಗದ ಸಾಂಸ್ಕೃತಿಕ ಆರ್ಥಿಕ ಶೈಕ್ಷಣಿಕ ಹಾಗೂ ರಾಜಕೀಯ ವಿಷಯಗಳ ಅಧ್ಯಯನಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು

ಈ ಸಂದರ್ಭದಲ್ಲಿ ಜಿಲ್ಲಾ ವಾಲ್ಮೀಕಿ ಸಂಘದ ಅಧ್ಯಕ್ಷ ಎಂ ಬಾಲಗೋವಿಂದ್ ಮಾತನಾಡಿ ರಾಜ್ಯದಲ್ಲಿ ಅಪೂರ್ಣಗೊಂಡ ವಾಲ್ಮೀಕಿ ಭವನಗಳಿಗೆ ಹಣ ಬಿಡುಗಡೆ ಮಾಡಬೇಕು ಬ್ಯಾಕ್ ಲಾಕ್ ಹುದ್ದೆಗಳನ್ನು ನೇಮಕ ಮಾಡಬೇಕು ವಾಲ್ಮೀಕಿ ಜನಾಂಗದ ಮೇಲೆ ನಿರಂತರ ದೌರ್ಜನ್ಯ ಕೊಲೆ ಅತ್ಯಾಚಾರ ಘಟನೆಗಳನ್ನು ತಡೆಗಟ್ಟಲು ವಿಶೇಷ ಕಾನೂನು ರೂಪಿಸಬೇಕು ಸಮುದಾಯದ ಬೇಡಿಕೆಗಳು ಕಾಲಮೀತಿಯಲ್ಲಿ ಈಡೇರಿಸದೆ ಹೋದರೆ ವಾಲ್ಮೀಕಿ ಜಯಂತಿಯನ್ನು ಬಹಿಷ್ಕಾರ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು

ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೋಟೆ ಶ್ರೀನಿವಾಸ್, ಗ್ರಾಪಂ ಸದಸ್ಯ ಕುಡುವನಹಳ್ಳಿ ಆನಂದ್, ಬೈರಂಡಹಳ್ಳಿ ನಾಗೇಶ್, ಕಲ್ಲಂಡೂರು ನಾರಾಯಣಸ್ವಾಮಿ, ಮಂಜುಳಾ ಶ್ರೀನಿವಾಸ್, ರವಿ, ಪ್ರದೀಪ್ ಕುಮಾರ್, ನವೀನ್ ಕುಮಾರ್, ಕಲ್ವ ರವೀಂದ್ರ, ರಮೇಶ್, ಮಹೇಶ್ ಕುಮಾರ್, ನಾಗರಾಜ್ ಮುಂತಾದವರು ಇದ್ದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

15 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

21 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago