ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ ‘ಅನ್ನಭಾಗ್ಯ’ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ, ಸುಮಾರು 29 ಕ್ವಿಂಟಾಲ್ಗೂ ಅಧಿಕ ಅಕ್ಕಿಯನ್ನು ಜಪ್ತಿ ಮಾಡಿದ ಘಟನೆ ತಾಲೂಕಿನ ಮಿರ್ಜಾನ ಗ್ರಾಮದ ತಾರೀಬಾಗಿಲಿನಲ್ಲಿ ನಡೆದಿದೆ.
ಮಿರ್ಜಾನ ಗ್ರಾಮದ ತಾರೀಬಾಗಿಲ ನಿವಾಸಿ ಮಹಮ್ಮದ್ ಗೌಸ್ ಮೈದಿನ್ ಸಾಬ ಆಗಾ ಎಂಬುವವರಿಗೆ ಸೇರಿದ ಗೋಡೌನ್ನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಶನಿವಾರ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ. ಕುಮಟಾ ತಹಶೀಲ್ದಾರ್ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಆಹಾರ ನಿರೀಕ್ಷಕರು, ಕಂದಾಯ ನಿರೀಕ್ಷಕರು, ಮಿರ್ಜಾನ ಗ್ರಾಮ ಆಡಳಿತ ಅಧಿಕಾರಿ ಹಾಗೂ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.
ಅಧಿಕಾರಿಗಳು ಗೋಡೌನ್ ಪರಿಶೀಲಿಸಿದಾಗ ಪ್ಲಾಸ್ಟಿಕ್ ಹಾಗೂ ಗೋಣಿ ಚೀಲಗಳಲ್ಲಿ ಅಕ್ಕಿಯನ್ನು ಸಂಗ್ರಹಿಸಿರುವುದು ಪತ್ತೆಯಾಗಿದೆ. ಇದರಲ್ಲಿ ಒಟ್ಟು 29 ಕ್ವಿಂಟಲ್, 28 ಕೆ.ಜಿ, 780 ಗ್ರಾಂ ಅಕ್ಕಿ ಇರುವುದು ಖಚಿತವಾಗಿದೆ. ಅನ್ನಭಾಗ್ಯ ಯೋಜನೆಯ ಅಕ್ಕಿ ಇರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಂಪೂರ್ಣ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
ಆರೋಪಿ ಮಹಮ್ಮದ್ ಗೌಸ್ ಮೈದಿನ್ ಸಾಬ ಆಗಾ,ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಅಕ್ಕಿ ಸಂಗ್ರಹಿಸಿಟ್ಟಿದ್ದ ಎಂಬುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕುಮಟಾ ಪೊಲೀಸ್ ನಿರೀಕ್ಷಕರಿಗೆ ಪತ್ರ ಬರೆಯಲಾಗಿದೆ. ಜಪ್ತಿ ಮಾಡಲಾದ ಅಕ್ಕಿಯನ್ನು ಮುಂದಿನ ಆದೇಶದವರೆಗೆ ಸುರಕ್ಷಿತವಾಗಿಡಲು ಬಾಡ ರೈತ ಸೇವಾ ಸಹಕಾರಿ ಸಂಘದ ಪಿ.ಡಿ.ಎಸ್ ಸಗಟು ಗೋದಾಮಿಗೆ ಹಸ್ತಾಂತರಿಸಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.
ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…
ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…