ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ ‘ಅನ್ನಭಾಗ್ಯ’ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ, ಸುಮಾರು 29 ಕ್ವಿಂಟಾಲ್ಗೂ ಅಧಿಕ ಅಕ್ಕಿಯನ್ನು ಜಪ್ತಿ ಮಾಡಿದ ಘಟನೆ ತಾಲೂಕಿನ ಮಿರ್ಜಾನ ಗ್ರಾಮದ ತಾರೀಬಾಗಿಲಿನಲ್ಲಿ ನಡೆದಿದೆ.
ಮಿರ್ಜಾನ ಗ್ರಾಮದ ತಾರೀಬಾಗಿಲ ನಿವಾಸಿ ಮಹಮ್ಮದ್ ಗೌಸ್ ಮೈದಿನ್ ಸಾಬ ಆಗಾ ಎಂಬುವವರಿಗೆ ಸೇರಿದ ಗೋಡೌನ್ನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಶನಿವಾರ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ. ಕುಮಟಾ ತಹಶೀಲ್ದಾರ್ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಆಹಾರ ನಿರೀಕ್ಷಕರು, ಕಂದಾಯ ನಿರೀಕ್ಷಕರು, ಮಿರ್ಜಾನ ಗ್ರಾಮ ಆಡಳಿತ ಅಧಿಕಾರಿ ಹಾಗೂ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.
ಅಧಿಕಾರಿಗಳು ಗೋಡೌನ್ ಪರಿಶೀಲಿಸಿದಾಗ ಪ್ಲಾಸ್ಟಿಕ್ ಹಾಗೂ ಗೋಣಿ ಚೀಲಗಳಲ್ಲಿ ಅಕ್ಕಿಯನ್ನು ಸಂಗ್ರಹಿಸಿರುವುದು ಪತ್ತೆಯಾಗಿದೆ. ಇದರಲ್ಲಿ ಒಟ್ಟು 29 ಕ್ವಿಂಟಲ್, 28 ಕೆ.ಜಿ, 780 ಗ್ರಾಂ ಅಕ್ಕಿ ಇರುವುದು ಖಚಿತವಾಗಿದೆ. ಅನ್ನಭಾಗ್ಯ ಯೋಜನೆಯ ಅಕ್ಕಿ ಇರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಂಪೂರ್ಣ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
ಆರೋಪಿ ಮಹಮ್ಮದ್ ಗೌಸ್ ಮೈದಿನ್ ಸಾಬ ಆಗಾ,ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಅಕ್ಕಿ ಸಂಗ್ರಹಿಸಿಟ್ಟಿದ್ದ ಎಂಬುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕುಮಟಾ ಪೊಲೀಸ್ ನಿರೀಕ್ಷಕರಿಗೆ ಪತ್ರ ಬರೆಯಲಾಗಿದೆ. ಜಪ್ತಿ ಮಾಡಲಾದ ಅಕ್ಕಿಯನ್ನು ಮುಂದಿನ ಆದೇಶದವರೆಗೆ ಸುರಕ್ಷಿತವಾಗಿಡಲು ಬಾಡ ರೈತ ಸೇವಾ ಸಹಕಾರಿ ಸಂಘದ ಪಿ.ಡಿ.ಎಸ್ ಸಗಟು ಗೋದಾಮಿಗೆ ಹಸ್ತಾಂತರಿಸಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…
ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…
ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…