ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ ‘ಅನ್ನಭಾಗ್ಯ’ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ, ಸುಮಾರು 29 ಕ್ವಿಂಟಾಲ್ಗೂ ಅಧಿಕ ಅಕ್ಕಿಯನ್ನು ಜಪ್ತಿ ಮಾಡಿದ ಘಟನೆ ತಾಲೂಕಿನ ಮಿರ್ಜಾನ ಗ್ರಾಮದ ತಾರೀಬಾಗಿಲಿನಲ್ಲಿ ನಡೆದಿದೆ.
ಮಿರ್ಜಾನ ಗ್ರಾಮದ ತಾರೀಬಾಗಿಲ ನಿವಾಸಿ ಮಹಮ್ಮದ್ ಗೌಸ್ ಮೈದಿನ್ ಸಾಬ ಆಗಾ ಎಂಬುವವರಿಗೆ ಸೇರಿದ ಗೋಡೌನ್ನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಶನಿವಾರ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ. ಕುಮಟಾ ತಹಶೀಲ್ದಾರ್ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಆಹಾರ ನಿರೀಕ್ಷಕರು, ಕಂದಾಯ ನಿರೀಕ್ಷಕರು, ಮಿರ್ಜಾನ ಗ್ರಾಮ ಆಡಳಿತ ಅಧಿಕಾರಿ ಹಾಗೂ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.
ಅಧಿಕಾರಿಗಳು ಗೋಡೌನ್ ಪರಿಶೀಲಿಸಿದಾಗ ಪ್ಲಾಸ್ಟಿಕ್ ಹಾಗೂ ಗೋಣಿ ಚೀಲಗಳಲ್ಲಿ ಅಕ್ಕಿಯನ್ನು ಸಂಗ್ರಹಿಸಿರುವುದು ಪತ್ತೆಯಾಗಿದೆ. ಇದರಲ್ಲಿ ಒಟ್ಟು 29 ಕ್ವಿಂಟಲ್, 28 ಕೆ.ಜಿ, 780 ಗ್ರಾಂ ಅಕ್ಕಿ ಇರುವುದು ಖಚಿತವಾಗಿದೆ. ಅನ್ನಭಾಗ್ಯ ಯೋಜನೆಯ ಅಕ್ಕಿ ಇರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಂಪೂರ್ಣ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
ಆರೋಪಿ ಮಹಮ್ಮದ್ ಗೌಸ್ ಮೈದಿನ್ ಸಾಬ ಆಗಾ,ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಅಕ್ಕಿ ಸಂಗ್ರಹಿಸಿಟ್ಟಿದ್ದ ಎಂಬುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕುಮಟಾ ಪೊಲೀಸ್ ನಿರೀಕ್ಷಕರಿಗೆ ಪತ್ರ ಬರೆಯಲಾಗಿದೆ. ಜಪ್ತಿ ಮಾಡಲಾದ ಅಕ್ಕಿಯನ್ನು ಮುಂದಿನ ಆದೇಶದವರೆಗೆ ಸುರಕ್ಷಿತವಾಗಿಡಲು ಬಾಡ ರೈತ ಸೇವಾ ಸಹಕಾರಿ ಸಂಘದ ಪಿ.ಡಿ.ಎಸ್ ಸಗಟು ಗೋದಾಮಿಗೆ ಹಸ್ತಾಂತರಿಸಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…