ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ ‘ಅನ್ನಭಾಗ್ಯ’ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ, ಸುಮಾರು 29 ಕ್ವಿಂಟಾಲ್ಗೂ ಅಧಿಕ ಅಕ್ಕಿಯನ್ನು ಜಪ್ತಿ ಮಾಡಿದ ಘಟನೆ ತಾಲೂಕಿನ ಮಿರ್ಜಾನ ಗ್ರಾಮದ ತಾರೀಬಾಗಿಲಿನಲ್ಲಿ ನಡೆದಿದೆ.
ಮಿರ್ಜಾನ ಗ್ರಾಮದ ತಾರೀಬಾಗಿಲ ನಿವಾಸಿ ಮಹಮ್ಮದ್ ಗೌಸ್ ಮೈದಿನ್ ಸಾಬ ಆಗಾ ಎಂಬುವವರಿಗೆ ಸೇರಿದ ಗೋಡೌನ್ನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಶನಿವಾರ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ. ಕುಮಟಾ ತಹಶೀಲ್ದಾರ್ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಆಹಾರ ನಿರೀಕ್ಷಕರು, ಕಂದಾಯ ನಿರೀಕ್ಷಕರು, ಮಿರ್ಜಾನ ಗ್ರಾಮ ಆಡಳಿತ ಅಧಿಕಾರಿ ಹಾಗೂ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.
ಅಧಿಕಾರಿಗಳು ಗೋಡೌನ್ ಪರಿಶೀಲಿಸಿದಾಗ ಪ್ಲಾಸ್ಟಿಕ್ ಹಾಗೂ ಗೋಣಿ ಚೀಲಗಳಲ್ಲಿ ಅಕ್ಕಿಯನ್ನು ಸಂಗ್ರಹಿಸಿರುವುದು ಪತ್ತೆಯಾಗಿದೆ. ಇದರಲ್ಲಿ ಒಟ್ಟು 29 ಕ್ವಿಂಟಲ್, 28 ಕೆ.ಜಿ, 780 ಗ್ರಾಂ ಅಕ್ಕಿ ಇರುವುದು ಖಚಿತವಾಗಿದೆ. ಅನ್ನಭಾಗ್ಯ ಯೋಜನೆಯ ಅಕ್ಕಿ ಇರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಂಪೂರ್ಣ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
ಆರೋಪಿ ಮಹಮ್ಮದ್ ಗೌಸ್ ಮೈದಿನ್ ಸಾಬ ಆಗಾ,ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಅಕ್ಕಿ ಸಂಗ್ರಹಿಸಿಟ್ಟಿದ್ದ ಎಂಬುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕುಮಟಾ ಪೊಲೀಸ್ ನಿರೀಕ್ಷಕರಿಗೆ ಪತ್ರ ಬರೆಯಲಾಗಿದೆ. ಜಪ್ತಿ ಮಾಡಲಾದ ಅಕ್ಕಿಯನ್ನು ಮುಂದಿನ ಆದೇಶದವರೆಗೆ ಸುರಕ್ಷಿತವಾಗಿಡಲು ಬಾಡ ರೈತ ಸೇವಾ ಸಹಕಾರಿ ಸಂಘದ ಪಿ.ಡಿ.ಎಸ್ ಸಗಟು ಗೋದಾಮಿಗೆ ಹಸ್ತಾಂತರಿಸಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…