ಭಟ್ಕಳ: ಬಡವರ ಹಸಿವು ನೀಗಿಸಲು ಸರಕಾರ ನೀಡುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದ ಜಾಲವೊಂದನ್ನು ಭೇದಿಸುವಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಶನಿವಾರ ಮಧ್ಯಾಹ್ನ ನಡೆದ ಕಾರ್ಯಾಚರಣೆಯಲ್ಲಿ ಆಹಾರ ನಿರೀಕ್ಷಕರ ತಂಡವು ದಾಳಿ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿ, ಅಕ್ಕಿ ಸಾಗಾಟಕ್ಕೆ ಬಳಸಿದ್ದ ಓಮಿನಿ ವಾಹನ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಂಡಿದೆ.
ಭಟ್ಕಳ ತಹಸಿಲ್ದಾರ್ ಕಚೇರಿಯ ಆಹಾರ ನಿರೀಕ್ಷಕ ಉದಯ ದ್ಯಾಮಪ್ಪ ತಳವಾರ ಅವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ, ರಂಗಿನಕಟ್ಟೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನ ತಪಾಸಣೆ ನಡೆಸಲಾಯಿತು. ಈ ವೇಳೆ ಮಾರುತಿ ಸುಜುಕಿ ಓಮಿನಿ ಕಾರಿನಲ್ಲಿ ಯಾವುದೇ ಅಧಿಕೃತ ಬಿಲ್ ಅಥವಾ ದಾಖಲೆಗಳಿಲ್ಲದೆ ಸುಮಾರು 1,150 ಕೆ.ಜಿ (ಅಂದಾಜು ಮೌಲ್ಯ ₹39,100) ಪಡಿತರ ಅಕ್ಕಿಯನ್ನು ಸಾಗಿಸುತ್ತಿರುವುದು ಕಂಡುಬಂದಿದೆ.
ಅಕ್ಕಿ ಸಾಗಿಸುತ್ತಿದ್ದ ಮುಗ್ಧಂ ಕಾಲೋನಿ ನಿವಾಸಿ ಆಸೀಫ್ ಉಲ್ಲಾ ಅಬ್ದುಲ್ ರಹೀಮ್ ಸಾಬ (38) ನನ್ನು ಸ್ಥಳದಲ್ಲೇ ವಶಕ್ಕೆ ಪಡೆಯಲಾಗಿದೆ. ವಿಚಾರಣೆಯ ವೇಳೆ ಈ ಅಕ್ಕಿಯನ್ನು ಶಿರಾಲಿಯ ಮೊಹಮ್ಮದ್ ಸಮೀರ ಅವರಿಗೆ ನೀಡಲು ಹನುಮಾನನಗರದ ಆಟೋ ಚಾಲಕ ರಾಮಚಂದ್ರ ಮಾಸ್ತಪ್ಪ ನಾಯ್ಕ ಕೊಂಡೊಯ್ಯಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಈ ಹಿನ್ನೆಲೆಯಲ್ಲಿ ಮೂವರು ಆರೋಪಿಗಳ ವಿರುದ್ಧ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…