ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶ: ಮೂವರ ವಿರುದ್ಧ ಪ್ರಕರಣ ದಾಖಲು

​ಭಟ್ಕಳ: ಬಡವರ ಹಸಿವು ನೀಗಿಸಲು ಸರಕಾರ ನೀಡುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದ ಜಾಲವೊಂದನ್ನು ಭೇದಿಸುವಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

​ಶನಿವಾರ ಮಧ್ಯಾಹ್ನ ನಡೆದ ಕಾರ್ಯಾಚರಣೆಯಲ್ಲಿ ಆಹಾರ ನಿರೀಕ್ಷಕರ ತಂಡವು ದಾಳಿ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿ, ಅಕ್ಕಿ ಸಾಗಾಟಕ್ಕೆ ಬಳಸಿದ್ದ ಓಮಿನಿ ವಾಹನ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಂಡಿದೆ.

ಭಟ್ಕಳ ತಹಸಿಲ್ದಾರ್ ಕಚೇರಿಯ ಆಹಾರ ನಿರೀಕ್ಷಕ ಉದಯ ದ್ಯಾಮಪ್ಪ ತಳವಾರ ಅವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ, ರಂಗಿನಕಟ್ಟೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನ ತಪಾಸಣೆ ನಡೆಸಲಾಯಿತು. ಈ ವೇಳೆ ಮಾರುತಿ ಸುಜುಕಿ ಓಮಿನಿ ಕಾರಿನಲ್ಲಿ ಯಾವುದೇ ಅಧಿಕೃತ ಬಿಲ್ ಅಥವಾ ದಾಖಲೆಗಳಿಲ್ಲದೆ ಸುಮಾರು 1,150 ಕೆ.ಜಿ (ಅಂದಾಜು ಮೌಲ್ಯ ₹39,100) ಪಡಿತರ ಅಕ್ಕಿಯನ್ನು ಸಾಗಿಸುತ್ತಿರುವುದು ಕಂಡುಬಂದಿದೆ.

ಅಕ್ಕಿ ಸಾಗಿಸುತ್ತಿದ್ದ ಮುಗ್ಧಂ ಕಾಲೋನಿ ನಿವಾಸಿ ಆಸೀಫ್ ಉಲ್ಲಾ ಅಬ್ದುಲ್ ರಹೀಮ್ ಸಾಬ (38) ನನ್ನು ಸ್ಥಳದಲ್ಲೇ ವಶಕ್ಕೆ ಪಡೆಯಲಾಗಿದೆ. ವಿಚಾರಣೆಯ ವೇಳೆ ಈ ಅಕ್ಕಿಯನ್ನು ಶಿರಾಲಿಯ ಮೊಹಮ್ಮದ್ ಸಮೀರ ಅವರಿಗೆ ನೀಡಲು ಹನುಮಾನನಗರದ ಆಟೋ ಚಾಲಕ ರಾಮಚಂದ್ರ ಮಾಸ್ತಪ್ಪ ನಾಯ್ಕ ಕೊಂಡೊಯ್ಯಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

​ಈ ಹಿನ್ನೆಲೆಯಲ್ಲಿ ಮೂವರು ಆರೋಪಿಗಳ ವಿರುದ್ಧ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

12 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

14 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

14 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

14 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

19 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

20 hours ago