ಹಿಂದೂಪುರದಿಂದ ಬೆಂಗಳೂರಿಗೆ ಅಕ್ರಮವಾಗಿ ಸರಕು ಸಾಗಾಟ ವಾಹನಗಳಲ್ಲಿ ಸಾಗಿಸುತ್ತಿದ್ದ ಗೋಮಾಂಸವನ್ನ ನಗರದ ಟಿ.ಬಿ.ವೃತ್ತದ ಬಳಿ ಶ್ರೀರಾಮ ಸೇನೆ ಕಾರ್ಯಕರ್ತರು ಇಂದು ಮುಂಜಾನೆ 4ರ ಸಮಯದಲ್ಲಿ ಖಚಿತ ಮಾಹಿತಿ ಮೇರೆಗೆ ಮಿಂಚಿನ ದಾಳಿ ಸಾಗಾಟವನ್ನ ತಡೆದಿದ್ದಾರೆ.
ಗೋಮಾಂಸ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ, ಸಾಗಾಟ ಮಾಡುತ್ತಿದ್ದ ಏಳು ಮಂದಿಯನ್ನ ನಗರ ಠಾಣಾ ಪೊಲೀಸರಿಗೆ ಒಪ್ಪಿಸಿದ್ದಾರೆ. ತೀವ್ರ ಆಕ್ರೋಶದಿಂದ ಒಂದು ಕಾರಿಗೆ ಬೆಂಕಿ ಇಡಲಾಗಿದೆ ಎನ್ನಲಾಗಿದೆ.
ಈ ಹಿನ್ನೆಲೆ ಸಾಕಾಷ್ಟು ಶ್ರೀರಾಮ ಸೇನೆ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದರು. ಕೆಲಕಾಲ ಟಿ.ಬಿ.ವೃತ್ತದಲ್ಲಿ ಉದ್ವಿಗ್ನ ವಾತಾವರಣ ಏರ್ಪಟ್ಟಿತ್ತು.
ಸ್ಥಳಕ್ಕೆ ನಗರ ಠಾಣಾ ಪೊಲೀಸರು ದೌಡಾಯಿಸಿ ಉದ್ವಿಗ್ನ ವಾತಾವರಣವನ್ನ ತಿಳಿಗೊಳಿಸಿದರು.
ಸುಮಾರು 25-30ಲಕ್ಷ ಮೌಲ್ಯದ 15ಟನ್ ಗೋಮಾಂಸವನ್ನ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.