ಅಕ್ರಮ ಗೋಮಾಂಸ ಸಾಗಾಟ: 16 ಲಕ್ಷ ಮೌಲ್ಯದ 8 ಟನ್ ಗೋಮಾಂಸ ವಶ: ಜೋಳದ ಬೆಂಡಿನ ಮೂಟೆ ಹಾಗೂ ಟೊಮೆಟೊ ಬಾಕ್ಸ್ ಅಡ್ಡ ಇಟ್ಟು ಅಕ್ರಮವಾಗಿ ಸಾಗಾಟ

ಜೋಳದ ಬೆಂಡಿನ ಮೂಟೆ ಹಾಗೂ ಟೊಮೆಟೊ ಬಾಕ್ಸ್ ಗಳನ್ನು ಅಡ್ಡ ಇಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯ 8 ಟನ್ ಗೋಮಾಂಸವನ್ನು ಸೆನ್ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮಿನಕನಗುರ್ಕಿ ಗ್ರಾಮದ ಬಳಿ ನಡೆದಿದೆ.

ಆಂಧ್ರಪ್ರದೇಶದ ಹಿಂದೂಪುರದಿಂದ ಬೆಂಗಳೂರಿನ ಶಿವಾಜಿನಗರಕ್ಕೆ ರವಾನೆಯಾಗುತ್ತಿದ್ದ ಗೋಮಾಂಸದ ಬಗ್ಗೆ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಚಿಕ್ಕಬಳ್ಳಾಪುರ ಸೆನ್ ಪೊಲೀಸರು ಸುಮಾರು 16 ಕ್ಕೂ ಅಧಿಕ ಮೌಲ್ಯದ 8 ಟನ್ ಗೋಮಾಂಸವನ್ನು ತುಂಬಿದ ಮೂರು ವಾಹನಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಕುಶಾಲ್ ಚೌಕ್ಸೆ ಮಾಹಿತಿ ನೀಡಿದ್ದಾರೆ.

ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಿನಕನಗುರ್ಕಿ ಬಳಿ ಚಿಕ್ಕಬಳ್ಳಾಪುರ ಸೆನ್ ಪೊಲೀಸ್ ಅಧಿಕಾರಿಗಳು ಬೆಂಗಳೂರಿನ ಶಿವಾಜಿನಗರಕ್ಕೆ ರವಾನೆಯಾಗುತ್ತಿದ್ದ ಅಕ್ರಮ ಗೋಮಾಂಸ ಮೂರು ಬುಲೆರೋ ವಾಹನಗಳಲ್ಲಿ ಹಿಡಿದು ನಾಲ್ಕು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಹಿಂದೂಪುರ ಮೂಲದ ಆರೀಪ್, ಅಸೀಂ ಬಾಪಾ, ಶಿವಾಜಿನಗರ ಮೂಲದ ರನ್ ಮತ್ತು ನೂರುಲಾ ಶರೀಪ್ ಎಂದು ತಿಳದು ಬಂದಿದೆ.

ಸೆನ್ ಡಿವೈಎಸ್ಪಿ ರವಿಕುಮಾರ್, ಸೆನ್ ಇನ್ಸ್ಪೆಕ್ಟರ್ ಸೂರ್ಯಪ್ರಕಾಶ್, ಸೆನ್ ಪಿಎಸ್ಐ ಸರಸ್ವತಮ್ಮ, ಸೆನ್ ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡಸಿಲಾಗಿದೆ.

Ramesh Babu

Journalist

Recent Posts

ಮಳೆ, ಗಾಳಿ ಅವಾಂತರ: ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಕುಂಟನಹಳ್ಳಿ, ಹುಸ್ಕೂರು ದಾರಿ ಬಂದ್

ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…

2 hours ago

ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ

ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್‌ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…

3 hours ago

ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…

4 hours ago

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

7 hours ago

ಮಳೆ, ಗಾಳಿ ಅವಾಂತರ: ವಿದ್ಯುತ್ ತಂತಿ ಮೇಲೆ ಬಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಭಾರೀ ಗಾತ್ರದ ಝಿಂಕ್ ಅಲ್ಯೂಮಿನಿಯಮ್ ಶೀಟ್‌: ರಸ್ತೆಗೆ ಅಡ್ಡಲಾಗಿ ಬಿದ್ದ 7 ವಿದ್ಯುತ್ ಕಂಬಗಳು

ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…

7 hours ago

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

18 hours ago