ಜೋಳದ ಬೆಂಡಿನ ಮೂಟೆ ಹಾಗೂ ಟೊಮೆಟೊ ಬಾಕ್ಸ್ ಗಳನ್ನು ಅಡ್ಡ ಇಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯ 8 ಟನ್ ಗೋಮಾಂಸವನ್ನು ಸೆನ್ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮಿನಕನಗುರ್ಕಿ ಗ್ರಾಮದ ಬಳಿ ನಡೆದಿದೆ.
ಆಂಧ್ರಪ್ರದೇಶದ ಹಿಂದೂಪುರದಿಂದ ಬೆಂಗಳೂರಿನ ಶಿವಾಜಿನಗರಕ್ಕೆ ರವಾನೆಯಾಗುತ್ತಿದ್ದ ಗೋಮಾಂಸದ ಬಗ್ಗೆ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಚಿಕ್ಕಬಳ್ಳಾಪುರ ಸೆನ್ ಪೊಲೀಸರು ಸುಮಾರು 16 ಕ್ಕೂ ಅಧಿಕ ಮೌಲ್ಯದ 8 ಟನ್ ಗೋಮಾಂಸವನ್ನು ತುಂಬಿದ ಮೂರು ವಾಹನಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಕುಶಾಲ್ ಚೌಕ್ಸೆ ಮಾಹಿತಿ ನೀಡಿದ್ದಾರೆ.
ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಿನಕನಗುರ್ಕಿ ಬಳಿ ಚಿಕ್ಕಬಳ್ಳಾಪುರ ಸೆನ್ ಪೊಲೀಸ್ ಅಧಿಕಾರಿಗಳು ಬೆಂಗಳೂರಿನ ಶಿವಾಜಿನಗರಕ್ಕೆ ರವಾನೆಯಾಗುತ್ತಿದ್ದ ಅಕ್ರಮ ಗೋಮಾಂಸ ಮೂರು ಬುಲೆರೋ ವಾಹನಗಳಲ್ಲಿ ಹಿಡಿದು ನಾಲ್ಕು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಹಿಂದೂಪುರ ಮೂಲದ ಆರೀಪ್, ಅಸೀಂ ಬಾಪಾ, ಶಿವಾಜಿನಗರ ಮೂಲದ ರನ್ ಮತ್ತು ನೂರುಲಾ ಶರೀಪ್ ಎಂದು ತಿಳದು ಬಂದಿದೆ.
ಸೆನ್ ಡಿವೈಎಸ್ಪಿ ರವಿಕುಮಾರ್, ಸೆನ್ ಇನ್ಸ್ಪೆಕ್ಟರ್ ಸೂರ್ಯಪ್ರಕಾಶ್, ಸೆನ್ ಪಿಎಸ್ಐ ಸರಸ್ವತಮ್ಮ, ಸೆನ್ ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡಸಿಲಾಗಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…