ಅಕ್ರಮ ಗೋಮಾಂಸ ಸಾಗಾಟ: 16 ಲಕ್ಷ ಮೌಲ್ಯದ 8 ಟನ್ ಗೋಮಾಂಸ ವಶ: ಜೋಳದ ಬೆಂಡಿನ ಮೂಟೆ ಹಾಗೂ ಟೊಮೆಟೊ ಬಾಕ್ಸ್ ಅಡ್ಡ ಇಟ್ಟು ಅಕ್ರಮವಾಗಿ ಸಾಗಾಟ

ಜೋಳದ ಬೆಂಡಿನ ಮೂಟೆ ಹಾಗೂ ಟೊಮೆಟೊ ಬಾಕ್ಸ್ ಗಳನ್ನು ಅಡ್ಡ ಇಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯ 8 ಟನ್ ಗೋಮಾಂಸವನ್ನು ಸೆನ್ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮಿನಕನಗುರ್ಕಿ ಗ್ರಾಮದ ಬಳಿ ನಡೆದಿದೆ.

ಆಂಧ್ರಪ್ರದೇಶದ ಹಿಂದೂಪುರದಿಂದ ಬೆಂಗಳೂರಿನ ಶಿವಾಜಿನಗರಕ್ಕೆ ರವಾನೆಯಾಗುತ್ತಿದ್ದ ಗೋಮಾಂಸದ ಬಗ್ಗೆ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಚಿಕ್ಕಬಳ್ಳಾಪುರ ಸೆನ್ ಪೊಲೀಸರು ಸುಮಾರು 16 ಕ್ಕೂ ಅಧಿಕ ಮೌಲ್ಯದ 8 ಟನ್ ಗೋಮಾಂಸವನ್ನು ತುಂಬಿದ ಮೂರು ವಾಹನಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಕುಶಾಲ್ ಚೌಕ್ಸೆ ಮಾಹಿತಿ ನೀಡಿದ್ದಾರೆ.

ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಿನಕನಗುರ್ಕಿ ಬಳಿ ಚಿಕ್ಕಬಳ್ಳಾಪುರ ಸೆನ್ ಪೊಲೀಸ್ ಅಧಿಕಾರಿಗಳು ಬೆಂಗಳೂರಿನ ಶಿವಾಜಿನಗರಕ್ಕೆ ರವಾನೆಯಾಗುತ್ತಿದ್ದ ಅಕ್ರಮ ಗೋಮಾಂಸ ಮೂರು ಬುಲೆರೋ ವಾಹನಗಳಲ್ಲಿ ಹಿಡಿದು ನಾಲ್ಕು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಹಿಂದೂಪುರ ಮೂಲದ ಆರೀಪ್, ಅಸೀಂ ಬಾಪಾ, ಶಿವಾಜಿನಗರ ಮೂಲದ ರನ್ ಮತ್ತು ನೂರುಲಾ ಶರೀಪ್ ಎಂದು ತಿಳದು ಬಂದಿದೆ.

ಸೆನ್ ಡಿವೈಎಸ್ಪಿ ರವಿಕುಮಾರ್, ಸೆನ್ ಇನ್ಸ್ಪೆಕ್ಟರ್ ಸೂರ್ಯಪ್ರಕಾಶ್, ಸೆನ್ ಪಿಎಸ್ಐ ಸರಸ್ವತಮ್ಮ, ಸೆನ್ ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡಸಿಲಾಗಿದೆ.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

6 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

17 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

18 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

19 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

21 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago