ಅಕ್ರಮ ಗೋಮಾಂಸ ಸಾಗಾಟ: 16 ಲಕ್ಷ ಮೌಲ್ಯದ 8 ಟನ್ ಗೋಮಾಂಸ ವಶ: ಜೋಳದ ಬೆಂಡಿನ ಮೂಟೆ ಹಾಗೂ ಟೊಮೆಟೊ ಬಾಕ್ಸ್ ಅಡ್ಡ ಇಟ್ಟು ಅಕ್ರಮವಾಗಿ ಸಾಗಾಟ

ಜೋಳದ ಬೆಂಡಿನ ಮೂಟೆ ಹಾಗೂ ಟೊಮೆಟೊ ಬಾಕ್ಸ್ ಗಳನ್ನು ಅಡ್ಡ ಇಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯ 8 ಟನ್ ಗೋಮಾಂಸವನ್ನು ಸೆನ್ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮಿನಕನಗುರ್ಕಿ ಗ್ರಾಮದ ಬಳಿ ನಡೆದಿದೆ.

ಆಂಧ್ರಪ್ರದೇಶದ ಹಿಂದೂಪುರದಿಂದ ಬೆಂಗಳೂರಿನ ಶಿವಾಜಿನಗರಕ್ಕೆ ರವಾನೆಯಾಗುತ್ತಿದ್ದ ಗೋಮಾಂಸದ ಬಗ್ಗೆ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಚಿಕ್ಕಬಳ್ಳಾಪುರ ಸೆನ್ ಪೊಲೀಸರು ಸುಮಾರು 16 ಕ್ಕೂ ಅಧಿಕ ಮೌಲ್ಯದ 8 ಟನ್ ಗೋಮಾಂಸವನ್ನು ತುಂಬಿದ ಮೂರು ವಾಹನಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಕುಶಾಲ್ ಚೌಕ್ಸೆ ಮಾಹಿತಿ ನೀಡಿದ್ದಾರೆ.

ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಿನಕನಗುರ್ಕಿ ಬಳಿ ಚಿಕ್ಕಬಳ್ಳಾಪುರ ಸೆನ್ ಪೊಲೀಸ್ ಅಧಿಕಾರಿಗಳು ಬೆಂಗಳೂರಿನ ಶಿವಾಜಿನಗರಕ್ಕೆ ರವಾನೆಯಾಗುತ್ತಿದ್ದ ಅಕ್ರಮ ಗೋಮಾಂಸ ಮೂರು ಬುಲೆರೋ ವಾಹನಗಳಲ್ಲಿ ಹಿಡಿದು ನಾಲ್ಕು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಹಿಂದೂಪುರ ಮೂಲದ ಆರೀಪ್, ಅಸೀಂ ಬಾಪಾ, ಶಿವಾಜಿನಗರ ಮೂಲದ ರನ್ ಮತ್ತು ನೂರುಲಾ ಶರೀಪ್ ಎಂದು ತಿಳದು ಬಂದಿದೆ.

ಸೆನ್ ಡಿವೈಎಸ್ಪಿ ರವಿಕುಮಾರ್, ಸೆನ್ ಇನ್ಸ್ಪೆಕ್ಟರ್ ಸೂರ್ಯಪ್ರಕಾಶ್, ಸೆನ್ ಪಿಎಸ್ಐ ಸರಸ್ವತಮ್ಮ, ಸೆನ್ ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡಸಿಲಾಗಿದೆ.

Ramesh Babu

Journalist

Recent Posts

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

5 hours ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

5 hours ago

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

11 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

20 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

1 day ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago