Categories: ಕೊಡಗು

ಅಕ್ರಮ ನಾಡ ಬಂದೂಕು ತಯಾರಿಸಿ ಮಾರಾಟ..: ಕೇರಳ ಮೂಲದ ಓರ್ವ ತಯಾರಕ, ಮೂವರು ಖರೀದಿದಾರರ ಬಂಧನ

ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿರುವ ಪೊಲೀಸರು, ಈ ದಂಧೆಯಲ್ಲಿ ತೊಡಗಿದ್ದ ಕೇರಳ ಮೂಲದ ಓರ್ವ ಆರೋಪಿಯನ್ನು ಮತ್ತು ಈತನಿಂದ ಅಕ್ರಮ ನಾಡ ಬಂದೂಕುಗಳನ್ನು ಖರೀದಿಸಿದ್ದ ಮೂವರನ್ನು ಬಂಧಿಸಿದ್ದಾರೆ.

ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಸಣ್ಣಪುಲಿಕೋಟು ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಮಹೇಶ್ ಕುಮಾರ್, ಡಿಎಸ್‌ಪಿ, ಮಡಿಕೇರಿ ಉಪವಿಭಾಗ, ಅನೂಪ್ ಮಾದಪ್ಪ, ಸಿಪಿಐ, ಮಡಿಕೇರಿ ಗ್ರಾಮಾಂತರ ವೃತ್ತ, ಹಾಗೂ ಶೋಭಾ ಲಾಮಾಣಿ, ಪಿಎಸ್‌ಐ, ಭಾಗಮಂಡಲ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡವು ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಆ.15ರಂದು ಸಣ್ಣಪುಲಿಕೋಟು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇರಳ ರಾಜ್ಯ ಇಡುಕ್ಕಿ ಜಿಲ್ಲೆ ಮೂಲದ ಸುರೇಶ್ ಎಂಬಾತನ ಮನೆಯ ಮೇಲೆ ದಾಳಿ ನಡೆಸಿದೆ.

ಅಕ್ರಮವಾಗಿ ನಾಡ ಬಂದೂಕು ತಯಾರಿಸಲು ಬಳಸುತ್ತಿದ್ದ ಸಾಮಾಗ್ರಿಗಳು ಮತ್ತು 02 – ನಾಡ ಬಂದೂಕು (ಎಸ್.ಬಿ.ಬಿ.ಎಲ್) ಹಾಗೂ 01 ನಾಡ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ.  ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಕಲಂ: 3, 25 Indian Arms Act ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಸುರೇಶ್, 52 ವರ್ಷ ಎಂಬಾತನನ್ನು ಬಂಧಿಸಲಾಗಿದೆ.

ಅಲ್ಲದೇ ಆರೋಪಿ ಸುರೇಶ್ ಅಕ್ರಮವಾಗಿ ತಯಾರಿಸಿರುವ ನಾಡ ಬಂದೂಕುಗಳನ್ನು ಖರೀದಿ ಮಾಡಿದ್ದ 1)ಎನ್.ಜೆ.ಶಿವರಾಮ, 45 ವರ್ಷ, ಚೇತುಕಾಯ ಗ್ರಾಮ, ಕರಿಕೆ, 2) ಎಸ್.ರವಿ, 35 ವರ್ಷ, ಮಾಗಳಿ ಗ್ರಾಮ, ಪಿರಿಯಾಪಟ್ಟಣ, ಮತ್ತು 3) ಕೋಟಿ, 55 ವರ್ಷ, ದೊಡ್ಡಪುಲಿಕೋಟು, ಭಾಗಮಂಡಲ ಇವರುಗಳಿಂದ ತಲಾ ಒಂದು ನಾಡ ಬಂದೂಕು (ಎಸ್.ಬಿ.ಬಿ.ಎಲ್) ಅನ್ನು ವಶಪಡಿಸಿಕೊಂಡು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಒಟ್ಟು 05 – ನಾಡ ಬಂದೂಕು (ಎಸ್.ಬಿ.ಬಿ.ಎಲ್) ಹಾಗೂ 01 – ನಾಡ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಸದರಿ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅಭಿನಂದಿಸಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ನಟ ಪ್ರಥಮ್ ವ್ಯಂಗ್ಯ ಆರೋಪ: ದಲಿತ ಸಂಘಟನೆ ಆಕ್ರೋಶ: ಠಾಣೆ ಮುಂದೆ ಪ್ರಥಮ್ ಗೆ ಮಸಿ ಬಳಿಯುವ ಯತ್ನ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪ್ರಥಮ್ ಗೆ ಅಂಬೇಡ್ಕರ್ ಸೇನೆ ಹೋರಾಟಗಾರರು ದೊಡ್ಡಬಳ್ಳಾಪುರ…

6 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಸ್ಥಳ ಮಹಜರಿನಲ್ಲಿ ಘಟನೆ ಬಗ್ಗೆ ಪೊಲೀಸರಿಗೆ ಇಂಚಿಂಚು ಮಾಹಿತಿ ನೀಡಿದ ಪ್ರಥಮ್

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ರೇಣುಕಾ ಯಲ್ಲಮ್ಮ ದೇವಾಲಯದ…

9 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಟ ಪ್ರಥಮ್

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ನಟ ಪ್ರಥಮ್…

11 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ ಜಾಮೀನು ಮಂಜೂರು

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ, ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದ ವತಿಯಿಂದ ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ…

11 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಆರೋಪಿಗಳಾದ ಯಶಸ್ವಿನಿ, ಬೇಕರಿ ರಘು ದೊಡ್ಡಬಳ್ಳಾಪುರ ಕೋರ್ಟ್ ಗೆ ಶರಣು

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು…

15 hours ago

ನಮ್ಮ ನಿಷ್ಠೆ ಪ್ರಕೃತಿಯೆಡೆಗೆ ಇರಲಿ……..

ನಮ್ಮ ನಿಷ್ಠೆ ಪ್ರಕೃತಿಗೆ....... ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ...... ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು.......…

19 hours ago