ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿರುವ ಪೊಲೀಸರು, ಈ ದಂಧೆಯಲ್ಲಿ ತೊಡಗಿದ್ದ ಕೇರಳ ಮೂಲದ ಓರ್ವ ಆರೋಪಿಯನ್ನು ಮತ್ತು ಈತನಿಂದ ಅಕ್ರಮ ನಾಡ ಬಂದೂಕುಗಳನ್ನು ಖರೀದಿಸಿದ್ದ ಮೂವರನ್ನು ಬಂಧಿಸಿದ್ದಾರೆ.
ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಸಣ್ಣಪುಲಿಕೋಟು ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಮಹೇಶ್ ಕುಮಾರ್, ಡಿಎಸ್ಪಿ, ಮಡಿಕೇರಿ ಉಪವಿಭಾಗ, ಅನೂಪ್ ಮಾದಪ್ಪ, ಸಿಪಿಐ, ಮಡಿಕೇರಿ ಗ್ರಾಮಾಂತರ ವೃತ್ತ, ಹಾಗೂ ಶೋಭಾ ಲಾಮಾಣಿ, ಪಿಎಸ್ಐ, ಭಾಗಮಂಡಲ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡವು ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಆ.15ರಂದು ಸಣ್ಣಪುಲಿಕೋಟು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇರಳ ರಾಜ್ಯ ಇಡುಕ್ಕಿ ಜಿಲ್ಲೆ ಮೂಲದ ಸುರೇಶ್ ಎಂಬಾತನ ಮನೆಯ ಮೇಲೆ ದಾಳಿ ನಡೆಸಿದೆ.
ಅಕ್ರಮವಾಗಿ ನಾಡ ಬಂದೂಕು ತಯಾರಿಸಲು ಬಳಸುತ್ತಿದ್ದ ಸಾಮಾಗ್ರಿಗಳು ಮತ್ತು 02 – ನಾಡ ಬಂದೂಕು (ಎಸ್.ಬಿ.ಬಿ.ಎಲ್) ಹಾಗೂ 01 ನಾಡ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಕಲಂ: 3, 25 Indian Arms Act ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಸುರೇಶ್, 52 ವರ್ಷ ಎಂಬಾತನನ್ನು ಬಂಧಿಸಲಾಗಿದೆ.
ಅಲ್ಲದೇ ಆರೋಪಿ ಸುರೇಶ್ ಅಕ್ರಮವಾಗಿ ತಯಾರಿಸಿರುವ ನಾಡ ಬಂದೂಕುಗಳನ್ನು ಖರೀದಿ ಮಾಡಿದ್ದ 1)ಎನ್.ಜೆ.ಶಿವರಾಮ, 45 ವರ್ಷ, ಚೇತುಕಾಯ ಗ್ರಾಮ, ಕರಿಕೆ, 2) ಎಸ್.ರವಿ, 35 ವರ್ಷ, ಮಾಗಳಿ ಗ್ರಾಮ, ಪಿರಿಯಾಪಟ್ಟಣ, ಮತ್ತು 3) ಕೋಟಿ, 55 ವರ್ಷ, ದೊಡ್ಡಪುಲಿಕೋಟು, ಭಾಗಮಂಡಲ ಇವರುಗಳಿಂದ ತಲಾ ಒಂದು ನಾಡ ಬಂದೂಕು (ಎಸ್.ಬಿ.ಬಿ.ಎಲ್) ಅನ್ನು ವಶಪಡಿಸಿಕೊಂಡು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಒಟ್ಟು 05 – ನಾಡ ಬಂದೂಕು (ಎಸ್.ಬಿ.ಬಿ.ಎಲ್) ಹಾಗೂ 01 – ನಾಡ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಸದರಿ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅಭಿನಂದಿಸಿದ್ದಾರೆ.
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…