ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿರುವ ಪೊಲೀಸರು, ಈ ದಂಧೆಯಲ್ಲಿ ತೊಡಗಿದ್ದ ಕೇರಳ ಮೂಲದ ಓರ್ವ ಆರೋಪಿಯನ್ನು ಮತ್ತು ಈತನಿಂದ ಅಕ್ರಮ ನಾಡ ಬಂದೂಕುಗಳನ್ನು ಖರೀದಿಸಿದ್ದ ಮೂವರನ್ನು ಬಂಧಿಸಿದ್ದಾರೆ.
ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಸಣ್ಣಪುಲಿಕೋಟು ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಮಹೇಶ್ ಕುಮಾರ್, ಡಿಎಸ್ಪಿ, ಮಡಿಕೇರಿ ಉಪವಿಭಾಗ, ಅನೂಪ್ ಮಾದಪ್ಪ, ಸಿಪಿಐ, ಮಡಿಕೇರಿ ಗ್ರಾಮಾಂತರ ವೃತ್ತ, ಹಾಗೂ ಶೋಭಾ ಲಾಮಾಣಿ, ಪಿಎಸ್ಐ, ಭಾಗಮಂಡಲ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡವು ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಆ.15ರಂದು ಸಣ್ಣಪುಲಿಕೋಟು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇರಳ ರಾಜ್ಯ ಇಡುಕ್ಕಿ ಜಿಲ್ಲೆ ಮೂಲದ ಸುರೇಶ್ ಎಂಬಾತನ ಮನೆಯ ಮೇಲೆ ದಾಳಿ ನಡೆಸಿದೆ.
ಅಕ್ರಮವಾಗಿ ನಾಡ ಬಂದೂಕು ತಯಾರಿಸಲು ಬಳಸುತ್ತಿದ್ದ ಸಾಮಾಗ್ರಿಗಳು ಮತ್ತು 02 – ನಾಡ ಬಂದೂಕು (ಎಸ್.ಬಿ.ಬಿ.ಎಲ್) ಹಾಗೂ 01 ನಾಡ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಕಲಂ: 3, 25 Indian Arms Act ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಸುರೇಶ್, 52 ವರ್ಷ ಎಂಬಾತನನ್ನು ಬಂಧಿಸಲಾಗಿದೆ.
ಅಲ್ಲದೇ ಆರೋಪಿ ಸುರೇಶ್ ಅಕ್ರಮವಾಗಿ ತಯಾರಿಸಿರುವ ನಾಡ ಬಂದೂಕುಗಳನ್ನು ಖರೀದಿ ಮಾಡಿದ್ದ 1)ಎನ್.ಜೆ.ಶಿವರಾಮ, 45 ವರ್ಷ, ಚೇತುಕಾಯ ಗ್ರಾಮ, ಕರಿಕೆ, 2) ಎಸ್.ರವಿ, 35 ವರ್ಷ, ಮಾಗಳಿ ಗ್ರಾಮ, ಪಿರಿಯಾಪಟ್ಟಣ, ಮತ್ತು 3) ಕೋಟಿ, 55 ವರ್ಷ, ದೊಡ್ಡಪುಲಿಕೋಟು, ಭಾಗಮಂಡಲ ಇವರುಗಳಿಂದ ತಲಾ ಒಂದು ನಾಡ ಬಂದೂಕು (ಎಸ್.ಬಿ.ಬಿ.ಎಲ್) ಅನ್ನು ವಶಪಡಿಸಿಕೊಂಡು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಒಟ್ಟು 05 – ನಾಡ ಬಂದೂಕು (ಎಸ್.ಬಿ.ಬಿ.ಎಲ್) ಹಾಗೂ 01 – ನಾಡ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಸದರಿ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅಭಿನಂದಿಸಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…