Categories: ಕೊಡಗು

ಅಕ್ರಮ ನಾಡ ಬಂದೂಕು ತಯಾರಿಸಿ ಮಾರಾಟ..: ಕೇರಳ ಮೂಲದ ಓರ್ವ ತಯಾರಕ, ಮೂವರು ಖರೀದಿದಾರರ ಬಂಧನ

ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿರುವ ಪೊಲೀಸರು, ಈ ದಂಧೆಯಲ್ಲಿ ತೊಡಗಿದ್ದ ಕೇರಳ ಮೂಲದ ಓರ್ವ ಆರೋಪಿಯನ್ನು ಮತ್ತು ಈತನಿಂದ ಅಕ್ರಮ ನಾಡ ಬಂದೂಕುಗಳನ್ನು ಖರೀದಿಸಿದ್ದ ಮೂವರನ್ನು ಬಂಧಿಸಿದ್ದಾರೆ.

ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಸಣ್ಣಪುಲಿಕೋಟು ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಮಹೇಶ್ ಕುಮಾರ್, ಡಿಎಸ್‌ಪಿ, ಮಡಿಕೇರಿ ಉಪವಿಭಾಗ, ಅನೂಪ್ ಮಾದಪ್ಪ, ಸಿಪಿಐ, ಮಡಿಕೇರಿ ಗ್ರಾಮಾಂತರ ವೃತ್ತ, ಹಾಗೂ ಶೋಭಾ ಲಾಮಾಣಿ, ಪಿಎಸ್‌ಐ, ಭಾಗಮಂಡಲ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡವು ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಆ.15ರಂದು ಸಣ್ಣಪುಲಿಕೋಟು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇರಳ ರಾಜ್ಯ ಇಡುಕ್ಕಿ ಜಿಲ್ಲೆ ಮೂಲದ ಸುರೇಶ್ ಎಂಬಾತನ ಮನೆಯ ಮೇಲೆ ದಾಳಿ ನಡೆಸಿದೆ.

ಅಕ್ರಮವಾಗಿ ನಾಡ ಬಂದೂಕು ತಯಾರಿಸಲು ಬಳಸುತ್ತಿದ್ದ ಸಾಮಾಗ್ರಿಗಳು ಮತ್ತು 02 – ನಾಡ ಬಂದೂಕು (ಎಸ್.ಬಿ.ಬಿ.ಎಲ್) ಹಾಗೂ 01 ನಾಡ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ.  ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಕಲಂ: 3, 25 Indian Arms Act ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಸುರೇಶ್, 52 ವರ್ಷ ಎಂಬಾತನನ್ನು ಬಂಧಿಸಲಾಗಿದೆ.

ಅಲ್ಲದೇ ಆರೋಪಿ ಸುರೇಶ್ ಅಕ್ರಮವಾಗಿ ತಯಾರಿಸಿರುವ ನಾಡ ಬಂದೂಕುಗಳನ್ನು ಖರೀದಿ ಮಾಡಿದ್ದ 1)ಎನ್.ಜೆ.ಶಿವರಾಮ, 45 ವರ್ಷ, ಚೇತುಕಾಯ ಗ್ರಾಮ, ಕರಿಕೆ, 2) ಎಸ್.ರವಿ, 35 ವರ್ಷ, ಮಾಗಳಿ ಗ್ರಾಮ, ಪಿರಿಯಾಪಟ್ಟಣ, ಮತ್ತು 3) ಕೋಟಿ, 55 ವರ್ಷ, ದೊಡ್ಡಪುಲಿಕೋಟು, ಭಾಗಮಂಡಲ ಇವರುಗಳಿಂದ ತಲಾ ಒಂದು ನಾಡ ಬಂದೂಕು (ಎಸ್.ಬಿ.ಬಿ.ಎಲ್) ಅನ್ನು ವಶಪಡಿಸಿಕೊಂಡು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಒಟ್ಟು 05 – ನಾಡ ಬಂದೂಕು (ಎಸ್.ಬಿ.ಬಿ.ಎಲ್) ಹಾಗೂ 01 – ನಾಡ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಸದರಿ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅಭಿನಂದಿಸಿದ್ದಾರೆ.

Ramesh Babu

Journalist

Recent Posts

ಸಂಭ್ರಮದ ಹಸಿ ಕರಗ ಮಹೋತ್ಸವ

  ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ…

58 minutes ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

1 hour ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

1 hour ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

4 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

7 hours ago

ಬೆಂಗಳೂರಿನಲ್ಲಿ ಮಳೆ ಅವಾಂತರ: ಬೌರಿಂಗ್ ಆಸ್ಪತ್ರೆ ಬಳಿ ಕಾಂಪೌಂಡ್ ಕುಸಿತ: ಇಬ್ಬರು ಮಕ್ಕಳು ಸೇರಿ 7 ಮಂದಿ ಬೀದಿಬದಿಯ ವ್ಯಾಪಾರಿಗಳ ದುರ್ಮರಣ

ರಾಜ್ಯ ರಾಜಧಾನಿಯಲ್ಲಿ ಅಬ್ಬರಿಸಿದ ಬಿರುಗಾಳಿ ಸಹಿತ ಭಾರಿ ಮಳೆ ಇಂದು ಮಹಾ ದುರಂತವನ್ನೇ ಸೃಷ್ಟಿಸಿದೆ. ನಗರದ ಬೌರಿಂಗ್ ಆಸ್ಪತ್ರೆ ಸಮೀಪದ…

22 hours ago