ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಿದ್ದ 208 ಕ್ವಿಂಟಾಲ್ ಅಕ್ಕಿ, 8 ಕ್ವಿಂಟಾಲ್ ರಾಗಿಯನ್ನು ಆಹಾರ ಇಲಾಖೆಯವರು ವಶಕ್ಕೆ ಪಡೆದಿದ್ದಾರೆ.

ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಪ್ರಿಯದರ್ಶಿನಿ ಬಡಾವಣೆಯ ಗೋಡೌನ್ ನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 208 ಕ್ವಿಂಟಾಲ್ ಪಡಿತರ ಅಕ್ಕಿ, ರಾಗಿಯನ್ನು ವಶಪಡಸಿಕೊಳ್ಳಾಲಾಗಿದೆ.

ಎಪಿಎಂಸಿ ಎದುರಿನ ಪಾಲನಜೋಗಿಹಳ್ಳಿ ಗ್ರಾಮದ 1ನೇ ಕ್ರಾಸ್ ಪ್ರಿಯದರ್ಶಿನಿ ಬಡಾವಣೆಯಲ್ಲಿನ ಗೋಡೌನ್ ನಲ್ಲಿ ಕಾನೂನು ಬಾಹಿರವಾಗಿ ರಾಗಿ ಮತ್ತು ಅಕ್ಕಿಯನ್ನು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿತ್ತು.

ಅಂಗಡಿ ಮಾಲೀಕ ಹರೀಶ್ ಎಂಬುವವರು ಬಡವರಿಗೆ ನೀಡಬೇಕಾಗದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಲಾಭಮಾಡಿಕೊಳ್ಳುವ ಉದ್ದೇಶದಿಂದ ಸರ್ಕಾರಕ್ಕೆ ದೋಖಾ ಮಾಡಲಾಗಿರುತ್ತದೆ ಎಂದು ಆಹಾರ ಇಲಾಖೆಯವರು ದೂರು ನೀಡಿದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಡಿತರ ಅಕ್ಕಿ ಮತ್ತು ರಾಗಿಯ ಅಕ್ರಮ ಸಂಗ್ರಹದ ಕುರಿತು ಆಹಾರ ಇಲಾಖೆಯ ಶಿರಸ್ತೆದಾರ್ ವರದಿ ನೀಡಿದ್ದಾರೆ. ಅಲ್ಲದೆ ಪೊಲೀಸ್ ಇಲಾಖೆಗೆ ದೂರು ನೀಡಿದ್ದು ಪೊಲೀಸರು ಕಾನೂನು ಕ್ರಮ ಜರುಗಿಸುತ್ತಿದ್ದಾರೆ. ಇಂತಹ ಸೋರಿಕೆಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕಲಾಗುವುದು ಎಂದು ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳ ತಿಳಿಸಿದ್ದಾರೆ..

Ramesh Babu

Journalist

Recent Posts

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 hour ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

20 hours ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

22 hours ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

1 day ago

ಫುಟ್ ಪಾತ್…… (ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ….)

Footpath...... ಫುಟ್ ಪಾತ್...... ( ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ....) ಫುಟ್ ಪಾತ್ ಎಂದು ಆಂಗ್ಲ ಭಾಷೆಯಲ್ಲಿ ಕರೆಯಲ್ಪಡುವ…

1 day ago

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ವಿಸ್ತರಣೆ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…

2 days ago