Categories: ಕೋಲಾರ

ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ವಿಶೇಷ ತಂಡ ರಚನೆ ಮಾಡಿ ಬಡ ರೈತ ಕೂಲಿಕಾರ್ಮಿಕರನ್ನು ರಕ್ಷಣೆ ಮಾಡಬೇಕೆಂದು ಆಗ್ರಹಿಸಿ ರೈತಸಂಘದಿಂದ ಅಬಕಾರಿ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯಾದ್ಯಂತ ಗ್ರಾಮೀಣ ಪ್ರದೇಶದ ದಿನಸಿ ಅಂಗಡಿಗಳಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಡಾಬಾಗಳಲ್ಲಿ ದಿನದ 24 ಗಂಟೆ ಮದ್ಯ ಮಾರಾಟ
ನಿರಂತರವಾಗಿ ನಡೆಯುತ್ತಿದ್ದರೂ ಕ್ರಮಕೈಗೊಳ್ಳಬೇಕಾದ ಅಬಕಾರಿ ಇಲಾಖೆ ಅಧಿಕಾರಿಗಳು ನೆಪ
ಮಾತ್ರಕ್ಕೆ ದಾಳಿ ಮಾಡಿ ಕೆಲಸಕ್ಕೆ ಬಾರದ ಕೇಸ್‌ ಹಾಕಿ
ಕೈತೊಳೆದುಕೊಳ್ಳುತ್ತಿದ್ದಾರೆಂದು ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಅಕ್ರಮ ಮದ್ಯ ಮಾರಾಟದ ಬಗ್ಗೆ ದಾಖಲೆಗಳ ಸಮೇತ ವಿವರಿಸಿದರು.

ಸರ್ಕಾರ ನಡೆಯಬೇಕಾದರೆ ಹಣದ ಮೂಲಗಳು ಬೇಕು. ಹಣದ ಮೂಲಗಳು ಬೇಕಾದರೆ ಜಿಲ್ಲೆಯ ಅಬಕಾರಿ ವ್ಯಾಪಾರ ಹೆಚ್ಚಾಗಬೇಕು. ವ್ಯಾಪಾರ ಹೆಚ್ಚಾಗಬೇಕಾದರೆ ಅಕ್ರಮವಾಗಿ ಮದ್ಯಮಾರಾಟಕ್ಕೆ ಅವಕಾಶ ನೀಡಬೇಕು. ಇದರಿಂದ ಅಬಕಾರಿ ಆದಾಯ ಹೆಚ್ಚಾಗಿ ಬಡವರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿ ಬೆಳಗ್ಗೆಯಿಂದ ಸಂಜೆಯವರೆಗೆ ಕಷ್ಟಪಟ್ಟ ಹಣವನ್ನು ಹೆಂಡತಿ ಮಕ್ಕಳ ಕಡೆ ತಿರುಗಿ ನೋಡದ ಮದ್ಯ ವ್ಯಸನಿಗಳು ಸಂಜೆ ವೇಳೆ ಅಬಕಾರಿ ಅಂಗಡಿಗೆ ದುಡಿದ ಹಣವನ್ನು ಇಟ್ಟು ಖಾಲಿ ಕೈಯಲ್ಲಿ ಮನೆಗೆ ಬಂದು ಹೆಂಡತಿ ಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಿ ಕೊಲೆಗಳು ನಡೆದಿರುವ ಮಟ್ಟಕ್ಕೆ ಅಬಕಾರಿ ಪ್ರಕರಣಗಳು ಸಂಭವಿಸುತ್ತಿದ್ದರೂ ವಾಸ್ತವಾಂಶವನ್ನು ಸರ್ಕಾರಕ್ಕೆ ನೀಡುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಲಿ ಕಾರ್ಮಿಕ ರೈತ ಮಹಿಳೆ ಶೈಲಜಾ ಮಾತನಾಡಿ, ಜಿಲ್ಲೆಯ ಜನಪ್ರತಿನಿಧಿಗಳು ವಿಧಾನಸೌಧ
ಹಾಗೂ ಜಿಲ್ಲೆಯ ಕೆಡಿಪಿ ಸಭೆಗಳಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ರಾಜಾರೋಷದ ಮಾತುಗಳನ್ನು ಹೇಳಿ ಆನಂತರ ಅಕ್ರಮ ಮದ್ಯ ಮಾರಾಟ ನಿಯಂತ್ರಣ ಮಾಡದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮಕೈಗೊಳ್ಳದೆ
ಮೌನವಾಗಿರುವುದಕ್ಕೆ ಕಾರಣವೇನು. ಅಲ್ಲಿದ್ದ ಧ್ವನಿ ಇಲ್ಲಿ ಎಲ್ಲಿ ಹೋಯಿತು ಡಾಬಾಗಳಲ್ಲಿ ನಿರಂತರವಾಗಿ ಮಾರಾಟವಾಗುತ್ತಿರುವ ದಂಧೆ ನಿಯಂತ್ರಿಸುವ ಅಧಿಕಾರಿಗಳ ಮೇಲೆ ರಾಜಕಾರಣಿಗಳ ಒತ್ತಡವೇ ಎಂದು ಆಯುಕ್ತರನ್ನು ಪ್ರಶ್ನೆ ಮಾಡಿದರು.

ಕೂಲಿ ಮಾಡಿ ಹಾಗೂ ಖಾಸಗಿ ಸಾಲ ಪಡೆದು ಮಕ್ಕಳ ವಿದ್ಯಾಭ್ಯಾಸ ಹಿರಿಯ ಆರೋಗ್ಯಕ್ಕೆ ಹಣ ಕೂಡಿಟ್ಟರೆ ಕೆಲಸ ಕಾರ್ಯ ಮಾಡದ ಕುಡಿತಕ್ಕೆ ದಾಸರಾಗಿರುವ ಮನೆಯ ಯಜಮಾನರು ಕೂಲಿ ಹಣವನ್ನು ಸಾಲದ ಹಣವನ್ನು ಕಿತ್ತುಕೊಳ್ಳುವ ಜೊತೆಗೆ ಸರ್ಕಾರದಿಂದ ಉಚಿತವಾಗಿ ನೀಡುವ 2 ಸಾವಿರ, 3 ಕೆಜಿ ಅಕ್ಕಿ ಸಹ ಕಾಳಸಂತೆಯಲ್ಲಿ ಮಾರಾಟ ಮಾಡಿ ಕುಡಿದು ಬಂದು ಕುಟುಂಬದ
ಮರ್ಯಾದೆಯನ್ನು ತೆಗೆಯುತ್ತಿರುವ ಮದ್ಯವ್ಯಸನಿಗಳಿಂದ ಮಧ್ಯಮ ವರ್ಗದ ಕುಟುಂಬಗಳು ಉಳಿಯಬೇಕಾದರೆ ಸರ್ಕಾರ ಮದ್ಯ ಮಾರಾಟ ಸಂಪೂರ್ಣವಾಗಿ ನಿಷೇಧ ಮಾಡಿ ತಮ್ಮ ತಾಕತ್ತು ತೋರಿಸಲಿ ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅಬಕಾರಿ ಆಯುಕ್ತರು, ಹೊಸದಾಗಿ ಜಿಲ್ಲೆಗೆ ಬಂದಿದ್ದೇನೆ.
ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಅಕ್ರಮ ಮದ್ಯ ಮಾರಾಟ ತಡೆ ಮಾಡುವ ಭರವಸೆ
ನೀಡಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಗೌರಮ್ಮ, ವೆಂಕಟಮ್ಮ, ಮುನಿರತ್ನ, ಶೋಭ, ರತ್ನಮ್ಮ, ಭಾಗ್ಯಮ್ಮ, ತುಳಸಮ್ಮ ಮುಂತಾದವರಿದ್ದರು.

Ramesh Babu

Journalist

Recent Posts

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…

37 minutes ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

3 hours ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

6 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

16 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

17 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

18 hours ago