Categories: ಕೋಲಾರ

ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ವಿಶೇಷ ತಂಡ ರಚನೆ ಮಾಡಿ ಬಡ ರೈತ ಕೂಲಿಕಾರ್ಮಿಕರನ್ನು ರಕ್ಷಣೆ ಮಾಡಬೇಕೆಂದು ಆಗ್ರಹಿಸಿ ರೈತಸಂಘದಿಂದ ಅಬಕಾರಿ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯಾದ್ಯಂತ ಗ್ರಾಮೀಣ ಪ್ರದೇಶದ ದಿನಸಿ ಅಂಗಡಿಗಳಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಡಾಬಾಗಳಲ್ಲಿ ದಿನದ 24 ಗಂಟೆ ಮದ್ಯ ಮಾರಾಟ
ನಿರಂತರವಾಗಿ ನಡೆಯುತ್ತಿದ್ದರೂ ಕ್ರಮಕೈಗೊಳ್ಳಬೇಕಾದ ಅಬಕಾರಿ ಇಲಾಖೆ ಅಧಿಕಾರಿಗಳು ನೆಪ
ಮಾತ್ರಕ್ಕೆ ದಾಳಿ ಮಾಡಿ ಕೆಲಸಕ್ಕೆ ಬಾರದ ಕೇಸ್‌ ಹಾಕಿ
ಕೈತೊಳೆದುಕೊಳ್ಳುತ್ತಿದ್ದಾರೆಂದು ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಅಕ್ರಮ ಮದ್ಯ ಮಾರಾಟದ ಬಗ್ಗೆ ದಾಖಲೆಗಳ ಸಮೇತ ವಿವರಿಸಿದರು.

ಸರ್ಕಾರ ನಡೆಯಬೇಕಾದರೆ ಹಣದ ಮೂಲಗಳು ಬೇಕು. ಹಣದ ಮೂಲಗಳು ಬೇಕಾದರೆ ಜಿಲ್ಲೆಯ ಅಬಕಾರಿ ವ್ಯಾಪಾರ ಹೆಚ್ಚಾಗಬೇಕು. ವ್ಯಾಪಾರ ಹೆಚ್ಚಾಗಬೇಕಾದರೆ ಅಕ್ರಮವಾಗಿ ಮದ್ಯಮಾರಾಟಕ್ಕೆ ಅವಕಾಶ ನೀಡಬೇಕು. ಇದರಿಂದ ಅಬಕಾರಿ ಆದಾಯ ಹೆಚ್ಚಾಗಿ ಬಡವರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿ ಬೆಳಗ್ಗೆಯಿಂದ ಸಂಜೆಯವರೆಗೆ ಕಷ್ಟಪಟ್ಟ ಹಣವನ್ನು ಹೆಂಡತಿ ಮಕ್ಕಳ ಕಡೆ ತಿರುಗಿ ನೋಡದ ಮದ್ಯ ವ್ಯಸನಿಗಳು ಸಂಜೆ ವೇಳೆ ಅಬಕಾರಿ ಅಂಗಡಿಗೆ ದುಡಿದ ಹಣವನ್ನು ಇಟ್ಟು ಖಾಲಿ ಕೈಯಲ್ಲಿ ಮನೆಗೆ ಬಂದು ಹೆಂಡತಿ ಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಿ ಕೊಲೆಗಳು ನಡೆದಿರುವ ಮಟ್ಟಕ್ಕೆ ಅಬಕಾರಿ ಪ್ರಕರಣಗಳು ಸಂಭವಿಸುತ್ತಿದ್ದರೂ ವಾಸ್ತವಾಂಶವನ್ನು ಸರ್ಕಾರಕ್ಕೆ ನೀಡುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಲಿ ಕಾರ್ಮಿಕ ರೈತ ಮಹಿಳೆ ಶೈಲಜಾ ಮಾತನಾಡಿ, ಜಿಲ್ಲೆಯ ಜನಪ್ರತಿನಿಧಿಗಳು ವಿಧಾನಸೌಧ
ಹಾಗೂ ಜಿಲ್ಲೆಯ ಕೆಡಿಪಿ ಸಭೆಗಳಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ರಾಜಾರೋಷದ ಮಾತುಗಳನ್ನು ಹೇಳಿ ಆನಂತರ ಅಕ್ರಮ ಮದ್ಯ ಮಾರಾಟ ನಿಯಂತ್ರಣ ಮಾಡದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮಕೈಗೊಳ್ಳದೆ
ಮೌನವಾಗಿರುವುದಕ್ಕೆ ಕಾರಣವೇನು. ಅಲ್ಲಿದ್ದ ಧ್ವನಿ ಇಲ್ಲಿ ಎಲ್ಲಿ ಹೋಯಿತು ಡಾಬಾಗಳಲ್ಲಿ ನಿರಂತರವಾಗಿ ಮಾರಾಟವಾಗುತ್ತಿರುವ ದಂಧೆ ನಿಯಂತ್ರಿಸುವ ಅಧಿಕಾರಿಗಳ ಮೇಲೆ ರಾಜಕಾರಣಿಗಳ ಒತ್ತಡವೇ ಎಂದು ಆಯುಕ್ತರನ್ನು ಪ್ರಶ್ನೆ ಮಾಡಿದರು.

ಕೂಲಿ ಮಾಡಿ ಹಾಗೂ ಖಾಸಗಿ ಸಾಲ ಪಡೆದು ಮಕ್ಕಳ ವಿದ್ಯಾಭ್ಯಾಸ ಹಿರಿಯ ಆರೋಗ್ಯಕ್ಕೆ ಹಣ ಕೂಡಿಟ್ಟರೆ ಕೆಲಸ ಕಾರ್ಯ ಮಾಡದ ಕುಡಿತಕ್ಕೆ ದಾಸರಾಗಿರುವ ಮನೆಯ ಯಜಮಾನರು ಕೂಲಿ ಹಣವನ್ನು ಸಾಲದ ಹಣವನ್ನು ಕಿತ್ತುಕೊಳ್ಳುವ ಜೊತೆಗೆ ಸರ್ಕಾರದಿಂದ ಉಚಿತವಾಗಿ ನೀಡುವ 2 ಸಾವಿರ, 3 ಕೆಜಿ ಅಕ್ಕಿ ಸಹ ಕಾಳಸಂತೆಯಲ್ಲಿ ಮಾರಾಟ ಮಾಡಿ ಕುಡಿದು ಬಂದು ಕುಟುಂಬದ
ಮರ್ಯಾದೆಯನ್ನು ತೆಗೆಯುತ್ತಿರುವ ಮದ್ಯವ್ಯಸನಿಗಳಿಂದ ಮಧ್ಯಮ ವರ್ಗದ ಕುಟುಂಬಗಳು ಉಳಿಯಬೇಕಾದರೆ ಸರ್ಕಾರ ಮದ್ಯ ಮಾರಾಟ ಸಂಪೂರ್ಣವಾಗಿ ನಿಷೇಧ ಮಾಡಿ ತಮ್ಮ ತಾಕತ್ತು ತೋರಿಸಲಿ ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅಬಕಾರಿ ಆಯುಕ್ತರು, ಹೊಸದಾಗಿ ಜಿಲ್ಲೆಗೆ ಬಂದಿದ್ದೇನೆ.
ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಅಕ್ರಮ ಮದ್ಯ ಮಾರಾಟ ತಡೆ ಮಾಡುವ ಭರವಸೆ
ನೀಡಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಗೌರಮ್ಮ, ವೆಂಕಟಮ್ಮ, ಮುನಿರತ್ನ, ಶೋಭ, ರತ್ನಮ್ಮ, ಭಾಗ್ಯಮ್ಮ, ತುಳಸಮ್ಮ ಮುಂತಾದವರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

8 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

9 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

11 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

12 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

17 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

20 hours ago