Categories: ಕೋಲಾರ

ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ವಿಶೇಷ ತಂಡ ರಚನೆ ಮಾಡಿ ಬಡ ರೈತ ಕೂಲಿಕಾರ್ಮಿಕರನ್ನು ರಕ್ಷಣೆ ಮಾಡಬೇಕೆಂದು ಆಗ್ರಹಿಸಿ ರೈತಸಂಘದಿಂದ ಅಬಕಾರಿ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯಾದ್ಯಂತ ಗ್ರಾಮೀಣ ಪ್ರದೇಶದ ದಿನಸಿ ಅಂಗಡಿಗಳಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಡಾಬಾಗಳಲ್ಲಿ ದಿನದ 24 ಗಂಟೆ ಮದ್ಯ ಮಾರಾಟ
ನಿರಂತರವಾಗಿ ನಡೆಯುತ್ತಿದ್ದರೂ ಕ್ರಮಕೈಗೊಳ್ಳಬೇಕಾದ ಅಬಕಾರಿ ಇಲಾಖೆ ಅಧಿಕಾರಿಗಳು ನೆಪ
ಮಾತ್ರಕ್ಕೆ ದಾಳಿ ಮಾಡಿ ಕೆಲಸಕ್ಕೆ ಬಾರದ ಕೇಸ್‌ ಹಾಕಿ
ಕೈತೊಳೆದುಕೊಳ್ಳುತ್ತಿದ್ದಾರೆಂದು ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಅಕ್ರಮ ಮದ್ಯ ಮಾರಾಟದ ಬಗ್ಗೆ ದಾಖಲೆಗಳ ಸಮೇತ ವಿವರಿಸಿದರು.

ಸರ್ಕಾರ ನಡೆಯಬೇಕಾದರೆ ಹಣದ ಮೂಲಗಳು ಬೇಕು. ಹಣದ ಮೂಲಗಳು ಬೇಕಾದರೆ ಜಿಲ್ಲೆಯ ಅಬಕಾರಿ ವ್ಯಾಪಾರ ಹೆಚ್ಚಾಗಬೇಕು. ವ್ಯಾಪಾರ ಹೆಚ್ಚಾಗಬೇಕಾದರೆ ಅಕ್ರಮವಾಗಿ ಮದ್ಯಮಾರಾಟಕ್ಕೆ ಅವಕಾಶ ನೀಡಬೇಕು. ಇದರಿಂದ ಅಬಕಾರಿ ಆದಾಯ ಹೆಚ್ಚಾಗಿ ಬಡವರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿ ಬೆಳಗ್ಗೆಯಿಂದ ಸಂಜೆಯವರೆಗೆ ಕಷ್ಟಪಟ್ಟ ಹಣವನ್ನು ಹೆಂಡತಿ ಮಕ್ಕಳ ಕಡೆ ತಿರುಗಿ ನೋಡದ ಮದ್ಯ ವ್ಯಸನಿಗಳು ಸಂಜೆ ವೇಳೆ ಅಬಕಾರಿ ಅಂಗಡಿಗೆ ದುಡಿದ ಹಣವನ್ನು ಇಟ್ಟು ಖಾಲಿ ಕೈಯಲ್ಲಿ ಮನೆಗೆ ಬಂದು ಹೆಂಡತಿ ಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಿ ಕೊಲೆಗಳು ನಡೆದಿರುವ ಮಟ್ಟಕ್ಕೆ ಅಬಕಾರಿ ಪ್ರಕರಣಗಳು ಸಂಭವಿಸುತ್ತಿದ್ದರೂ ವಾಸ್ತವಾಂಶವನ್ನು ಸರ್ಕಾರಕ್ಕೆ ನೀಡುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಲಿ ಕಾರ್ಮಿಕ ರೈತ ಮಹಿಳೆ ಶೈಲಜಾ ಮಾತನಾಡಿ, ಜಿಲ್ಲೆಯ ಜನಪ್ರತಿನಿಧಿಗಳು ವಿಧಾನಸೌಧ
ಹಾಗೂ ಜಿಲ್ಲೆಯ ಕೆಡಿಪಿ ಸಭೆಗಳಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ರಾಜಾರೋಷದ ಮಾತುಗಳನ್ನು ಹೇಳಿ ಆನಂತರ ಅಕ್ರಮ ಮದ್ಯ ಮಾರಾಟ ನಿಯಂತ್ರಣ ಮಾಡದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮಕೈಗೊಳ್ಳದೆ
ಮೌನವಾಗಿರುವುದಕ್ಕೆ ಕಾರಣವೇನು. ಅಲ್ಲಿದ್ದ ಧ್ವನಿ ಇಲ್ಲಿ ಎಲ್ಲಿ ಹೋಯಿತು ಡಾಬಾಗಳಲ್ಲಿ ನಿರಂತರವಾಗಿ ಮಾರಾಟವಾಗುತ್ತಿರುವ ದಂಧೆ ನಿಯಂತ್ರಿಸುವ ಅಧಿಕಾರಿಗಳ ಮೇಲೆ ರಾಜಕಾರಣಿಗಳ ಒತ್ತಡವೇ ಎಂದು ಆಯುಕ್ತರನ್ನು ಪ್ರಶ್ನೆ ಮಾಡಿದರು.

ಕೂಲಿ ಮಾಡಿ ಹಾಗೂ ಖಾಸಗಿ ಸಾಲ ಪಡೆದು ಮಕ್ಕಳ ವಿದ್ಯಾಭ್ಯಾಸ ಹಿರಿಯ ಆರೋಗ್ಯಕ್ಕೆ ಹಣ ಕೂಡಿಟ್ಟರೆ ಕೆಲಸ ಕಾರ್ಯ ಮಾಡದ ಕುಡಿತಕ್ಕೆ ದಾಸರಾಗಿರುವ ಮನೆಯ ಯಜಮಾನರು ಕೂಲಿ ಹಣವನ್ನು ಸಾಲದ ಹಣವನ್ನು ಕಿತ್ತುಕೊಳ್ಳುವ ಜೊತೆಗೆ ಸರ್ಕಾರದಿಂದ ಉಚಿತವಾಗಿ ನೀಡುವ 2 ಸಾವಿರ, 3 ಕೆಜಿ ಅಕ್ಕಿ ಸಹ ಕಾಳಸಂತೆಯಲ್ಲಿ ಮಾರಾಟ ಮಾಡಿ ಕುಡಿದು ಬಂದು ಕುಟುಂಬದ
ಮರ್ಯಾದೆಯನ್ನು ತೆಗೆಯುತ್ತಿರುವ ಮದ್ಯವ್ಯಸನಿಗಳಿಂದ ಮಧ್ಯಮ ವರ್ಗದ ಕುಟುಂಬಗಳು ಉಳಿಯಬೇಕಾದರೆ ಸರ್ಕಾರ ಮದ್ಯ ಮಾರಾಟ ಸಂಪೂರ್ಣವಾಗಿ ನಿಷೇಧ ಮಾಡಿ ತಮ್ಮ ತಾಕತ್ತು ತೋರಿಸಲಿ ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅಬಕಾರಿ ಆಯುಕ್ತರು, ಹೊಸದಾಗಿ ಜಿಲ್ಲೆಗೆ ಬಂದಿದ್ದೇನೆ.
ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಅಕ್ರಮ ಮದ್ಯ ಮಾರಾಟ ತಡೆ ಮಾಡುವ ಭರವಸೆ
ನೀಡಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಗೌರಮ್ಮ, ವೆಂಕಟಮ್ಮ, ಮುನಿರತ್ನ, ಶೋಭ, ರತ್ನಮ್ಮ, ಭಾಗ್ಯಮ್ಮ, ತುಳಸಮ್ಮ ಮುಂತಾದವರಿದ್ದರು.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

5 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

6 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

9 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

15 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 day ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago