Categories: ಕೋಲಾರ

ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ವಿಶೇಷ ತಂಡ ರಚನೆ ಮಾಡಿ ಬಡ ರೈತ ಕೂಲಿಕಾರ್ಮಿಕರನ್ನು ರಕ್ಷಣೆ ಮಾಡಬೇಕೆಂದು ಆಗ್ರಹಿಸಿ ರೈತಸಂಘದಿಂದ ಅಬಕಾರಿ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯಾದ್ಯಂತ ಗ್ರಾಮೀಣ ಪ್ರದೇಶದ ದಿನಸಿ ಅಂಗಡಿಗಳಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಡಾಬಾಗಳಲ್ಲಿ ದಿನದ 24 ಗಂಟೆ ಮದ್ಯ ಮಾರಾಟ
ನಿರಂತರವಾಗಿ ನಡೆಯುತ್ತಿದ್ದರೂ ಕ್ರಮಕೈಗೊಳ್ಳಬೇಕಾದ ಅಬಕಾರಿ ಇಲಾಖೆ ಅಧಿಕಾರಿಗಳು ನೆಪ
ಮಾತ್ರಕ್ಕೆ ದಾಳಿ ಮಾಡಿ ಕೆಲಸಕ್ಕೆ ಬಾರದ ಕೇಸ್‌ ಹಾಕಿ
ಕೈತೊಳೆದುಕೊಳ್ಳುತ್ತಿದ್ದಾರೆಂದು ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಅಕ್ರಮ ಮದ್ಯ ಮಾರಾಟದ ಬಗ್ಗೆ ದಾಖಲೆಗಳ ಸಮೇತ ವಿವರಿಸಿದರು.

ಸರ್ಕಾರ ನಡೆಯಬೇಕಾದರೆ ಹಣದ ಮೂಲಗಳು ಬೇಕು. ಹಣದ ಮೂಲಗಳು ಬೇಕಾದರೆ ಜಿಲ್ಲೆಯ ಅಬಕಾರಿ ವ್ಯಾಪಾರ ಹೆಚ್ಚಾಗಬೇಕು. ವ್ಯಾಪಾರ ಹೆಚ್ಚಾಗಬೇಕಾದರೆ ಅಕ್ರಮವಾಗಿ ಮದ್ಯಮಾರಾಟಕ್ಕೆ ಅವಕಾಶ ನೀಡಬೇಕು. ಇದರಿಂದ ಅಬಕಾರಿ ಆದಾಯ ಹೆಚ್ಚಾಗಿ ಬಡವರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿ ಬೆಳಗ್ಗೆಯಿಂದ ಸಂಜೆಯವರೆಗೆ ಕಷ್ಟಪಟ್ಟ ಹಣವನ್ನು ಹೆಂಡತಿ ಮಕ್ಕಳ ಕಡೆ ತಿರುಗಿ ನೋಡದ ಮದ್ಯ ವ್ಯಸನಿಗಳು ಸಂಜೆ ವೇಳೆ ಅಬಕಾರಿ ಅಂಗಡಿಗೆ ದುಡಿದ ಹಣವನ್ನು ಇಟ್ಟು ಖಾಲಿ ಕೈಯಲ್ಲಿ ಮನೆಗೆ ಬಂದು ಹೆಂಡತಿ ಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಿ ಕೊಲೆಗಳು ನಡೆದಿರುವ ಮಟ್ಟಕ್ಕೆ ಅಬಕಾರಿ ಪ್ರಕರಣಗಳು ಸಂಭವಿಸುತ್ತಿದ್ದರೂ ವಾಸ್ತವಾಂಶವನ್ನು ಸರ್ಕಾರಕ್ಕೆ ನೀಡುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಲಿ ಕಾರ್ಮಿಕ ರೈತ ಮಹಿಳೆ ಶೈಲಜಾ ಮಾತನಾಡಿ, ಜಿಲ್ಲೆಯ ಜನಪ್ರತಿನಿಧಿಗಳು ವಿಧಾನಸೌಧ
ಹಾಗೂ ಜಿಲ್ಲೆಯ ಕೆಡಿಪಿ ಸಭೆಗಳಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ರಾಜಾರೋಷದ ಮಾತುಗಳನ್ನು ಹೇಳಿ ಆನಂತರ ಅಕ್ರಮ ಮದ್ಯ ಮಾರಾಟ ನಿಯಂತ್ರಣ ಮಾಡದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮಕೈಗೊಳ್ಳದೆ
ಮೌನವಾಗಿರುವುದಕ್ಕೆ ಕಾರಣವೇನು. ಅಲ್ಲಿದ್ದ ಧ್ವನಿ ಇಲ್ಲಿ ಎಲ್ಲಿ ಹೋಯಿತು ಡಾಬಾಗಳಲ್ಲಿ ನಿರಂತರವಾಗಿ ಮಾರಾಟವಾಗುತ್ತಿರುವ ದಂಧೆ ನಿಯಂತ್ರಿಸುವ ಅಧಿಕಾರಿಗಳ ಮೇಲೆ ರಾಜಕಾರಣಿಗಳ ಒತ್ತಡವೇ ಎಂದು ಆಯುಕ್ತರನ್ನು ಪ್ರಶ್ನೆ ಮಾಡಿದರು.

ಕೂಲಿ ಮಾಡಿ ಹಾಗೂ ಖಾಸಗಿ ಸಾಲ ಪಡೆದು ಮಕ್ಕಳ ವಿದ್ಯಾಭ್ಯಾಸ ಹಿರಿಯ ಆರೋಗ್ಯಕ್ಕೆ ಹಣ ಕೂಡಿಟ್ಟರೆ ಕೆಲಸ ಕಾರ್ಯ ಮಾಡದ ಕುಡಿತಕ್ಕೆ ದಾಸರಾಗಿರುವ ಮನೆಯ ಯಜಮಾನರು ಕೂಲಿ ಹಣವನ್ನು ಸಾಲದ ಹಣವನ್ನು ಕಿತ್ತುಕೊಳ್ಳುವ ಜೊತೆಗೆ ಸರ್ಕಾರದಿಂದ ಉಚಿತವಾಗಿ ನೀಡುವ 2 ಸಾವಿರ, 3 ಕೆಜಿ ಅಕ್ಕಿ ಸಹ ಕಾಳಸಂತೆಯಲ್ಲಿ ಮಾರಾಟ ಮಾಡಿ ಕುಡಿದು ಬಂದು ಕುಟುಂಬದ
ಮರ್ಯಾದೆಯನ್ನು ತೆಗೆಯುತ್ತಿರುವ ಮದ್ಯವ್ಯಸನಿಗಳಿಂದ ಮಧ್ಯಮ ವರ್ಗದ ಕುಟುಂಬಗಳು ಉಳಿಯಬೇಕಾದರೆ ಸರ್ಕಾರ ಮದ್ಯ ಮಾರಾಟ ಸಂಪೂರ್ಣವಾಗಿ ನಿಷೇಧ ಮಾಡಿ ತಮ್ಮ ತಾಕತ್ತು ತೋರಿಸಲಿ ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅಬಕಾರಿ ಆಯುಕ್ತರು, ಹೊಸದಾಗಿ ಜಿಲ್ಲೆಗೆ ಬಂದಿದ್ದೇನೆ.
ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಅಕ್ರಮ ಮದ್ಯ ಮಾರಾಟ ತಡೆ ಮಾಡುವ ಭರವಸೆ
ನೀಡಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಗೌರಮ್ಮ, ವೆಂಕಟಮ್ಮ, ಮುನಿರತ್ನ, ಶೋಭ, ರತ್ನಮ್ಮ, ಭಾಗ್ಯಮ್ಮ, ತುಳಸಮ್ಮ ಮುಂತಾದವರಿದ್ದರು.

Ramesh Babu

Journalist

Recent Posts

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

4 hours ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

13 hours ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

18 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

22 hours ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

2 days ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

3 days ago