Categories: ಕೋಲಾರ

ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ವಿಶೇಷ ತಂಡ ರಚನೆ ಮಾಡಿ ಬಡ ರೈತ ಕೂಲಿಕಾರ್ಮಿಕರನ್ನು ರಕ್ಷಣೆ ಮಾಡಬೇಕೆಂದು ಆಗ್ರಹಿಸಿ ರೈತಸಂಘದಿಂದ ಅಬಕಾರಿ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯಾದ್ಯಂತ ಗ್ರಾಮೀಣ ಪ್ರದೇಶದ ದಿನಸಿ ಅಂಗಡಿಗಳಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಡಾಬಾಗಳಲ್ಲಿ ದಿನದ 24 ಗಂಟೆ ಮದ್ಯ ಮಾರಾಟ
ನಿರಂತರವಾಗಿ ನಡೆಯುತ್ತಿದ್ದರೂ ಕ್ರಮಕೈಗೊಳ್ಳಬೇಕಾದ ಅಬಕಾರಿ ಇಲಾಖೆ ಅಧಿಕಾರಿಗಳು ನೆಪ
ಮಾತ್ರಕ್ಕೆ ದಾಳಿ ಮಾಡಿ ಕೆಲಸಕ್ಕೆ ಬಾರದ ಕೇಸ್‌ ಹಾಕಿ
ಕೈತೊಳೆದುಕೊಳ್ಳುತ್ತಿದ್ದಾರೆಂದು ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಅಕ್ರಮ ಮದ್ಯ ಮಾರಾಟದ ಬಗ್ಗೆ ದಾಖಲೆಗಳ ಸಮೇತ ವಿವರಿಸಿದರು.

ಸರ್ಕಾರ ನಡೆಯಬೇಕಾದರೆ ಹಣದ ಮೂಲಗಳು ಬೇಕು. ಹಣದ ಮೂಲಗಳು ಬೇಕಾದರೆ ಜಿಲ್ಲೆಯ ಅಬಕಾರಿ ವ್ಯಾಪಾರ ಹೆಚ್ಚಾಗಬೇಕು. ವ್ಯಾಪಾರ ಹೆಚ್ಚಾಗಬೇಕಾದರೆ ಅಕ್ರಮವಾಗಿ ಮದ್ಯಮಾರಾಟಕ್ಕೆ ಅವಕಾಶ ನೀಡಬೇಕು. ಇದರಿಂದ ಅಬಕಾರಿ ಆದಾಯ ಹೆಚ್ಚಾಗಿ ಬಡವರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿ ಬೆಳಗ್ಗೆಯಿಂದ ಸಂಜೆಯವರೆಗೆ ಕಷ್ಟಪಟ್ಟ ಹಣವನ್ನು ಹೆಂಡತಿ ಮಕ್ಕಳ ಕಡೆ ತಿರುಗಿ ನೋಡದ ಮದ್ಯ ವ್ಯಸನಿಗಳು ಸಂಜೆ ವೇಳೆ ಅಬಕಾರಿ ಅಂಗಡಿಗೆ ದುಡಿದ ಹಣವನ್ನು ಇಟ್ಟು ಖಾಲಿ ಕೈಯಲ್ಲಿ ಮನೆಗೆ ಬಂದು ಹೆಂಡತಿ ಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಿ ಕೊಲೆಗಳು ನಡೆದಿರುವ ಮಟ್ಟಕ್ಕೆ ಅಬಕಾರಿ ಪ್ರಕರಣಗಳು ಸಂಭವಿಸುತ್ತಿದ್ದರೂ ವಾಸ್ತವಾಂಶವನ್ನು ಸರ್ಕಾರಕ್ಕೆ ನೀಡುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಲಿ ಕಾರ್ಮಿಕ ರೈತ ಮಹಿಳೆ ಶೈಲಜಾ ಮಾತನಾಡಿ, ಜಿಲ್ಲೆಯ ಜನಪ್ರತಿನಿಧಿಗಳು ವಿಧಾನಸೌಧ
ಹಾಗೂ ಜಿಲ್ಲೆಯ ಕೆಡಿಪಿ ಸಭೆಗಳಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ರಾಜಾರೋಷದ ಮಾತುಗಳನ್ನು ಹೇಳಿ ಆನಂತರ ಅಕ್ರಮ ಮದ್ಯ ಮಾರಾಟ ನಿಯಂತ್ರಣ ಮಾಡದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮಕೈಗೊಳ್ಳದೆ
ಮೌನವಾಗಿರುವುದಕ್ಕೆ ಕಾರಣವೇನು. ಅಲ್ಲಿದ್ದ ಧ್ವನಿ ಇಲ್ಲಿ ಎಲ್ಲಿ ಹೋಯಿತು ಡಾಬಾಗಳಲ್ಲಿ ನಿರಂತರವಾಗಿ ಮಾರಾಟವಾಗುತ್ತಿರುವ ದಂಧೆ ನಿಯಂತ್ರಿಸುವ ಅಧಿಕಾರಿಗಳ ಮೇಲೆ ರಾಜಕಾರಣಿಗಳ ಒತ್ತಡವೇ ಎಂದು ಆಯುಕ್ತರನ್ನು ಪ್ರಶ್ನೆ ಮಾಡಿದರು.

ಕೂಲಿ ಮಾಡಿ ಹಾಗೂ ಖಾಸಗಿ ಸಾಲ ಪಡೆದು ಮಕ್ಕಳ ವಿದ್ಯಾಭ್ಯಾಸ ಹಿರಿಯ ಆರೋಗ್ಯಕ್ಕೆ ಹಣ ಕೂಡಿಟ್ಟರೆ ಕೆಲಸ ಕಾರ್ಯ ಮಾಡದ ಕುಡಿತಕ್ಕೆ ದಾಸರಾಗಿರುವ ಮನೆಯ ಯಜಮಾನರು ಕೂಲಿ ಹಣವನ್ನು ಸಾಲದ ಹಣವನ್ನು ಕಿತ್ತುಕೊಳ್ಳುವ ಜೊತೆಗೆ ಸರ್ಕಾರದಿಂದ ಉಚಿತವಾಗಿ ನೀಡುವ 2 ಸಾವಿರ, 3 ಕೆಜಿ ಅಕ್ಕಿ ಸಹ ಕಾಳಸಂತೆಯಲ್ಲಿ ಮಾರಾಟ ಮಾಡಿ ಕುಡಿದು ಬಂದು ಕುಟುಂಬದ
ಮರ್ಯಾದೆಯನ್ನು ತೆಗೆಯುತ್ತಿರುವ ಮದ್ಯವ್ಯಸನಿಗಳಿಂದ ಮಧ್ಯಮ ವರ್ಗದ ಕುಟುಂಬಗಳು ಉಳಿಯಬೇಕಾದರೆ ಸರ್ಕಾರ ಮದ್ಯ ಮಾರಾಟ ಸಂಪೂರ್ಣವಾಗಿ ನಿಷೇಧ ಮಾಡಿ ತಮ್ಮ ತಾಕತ್ತು ತೋರಿಸಲಿ ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅಬಕಾರಿ ಆಯುಕ್ತರು, ಹೊಸದಾಗಿ ಜಿಲ್ಲೆಗೆ ಬಂದಿದ್ದೇನೆ.
ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಅಕ್ರಮ ಮದ್ಯ ಮಾರಾಟ ತಡೆ ಮಾಡುವ ಭರವಸೆ
ನೀಡಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಗೌರಮ್ಮ, ವೆಂಕಟಮ್ಮ, ಮುನಿರತ್ನ, ಶೋಭ, ರತ್ನಮ್ಮ, ಭಾಗ್ಯಮ್ಮ, ತುಳಸಮ್ಮ ಮುಂತಾದವರಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

52 minutes ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

3 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

4 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

8 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

9 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

17 hours ago