ಇನ್ಮುಂದೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡಿದರೆ ಸರ್ಕಾರಿ ಸವಲತ್ತುಗಳನ್ನು ಕಡಿತಗೊಳಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದೊಡ್ಡಬಳ್ಳಾಪುರ ವಲಯದ ಅಬಕಾರಿ ಸಬ್ ಇನ್ಸ್ಪೆಕ್ಟರ್ ಎಸ್.ಎಂ ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ತಾಲೂಕಿನ ಹಳೇಕೋಟೆ ಗ್ರಾಮದಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಜೂನ್.7ರಂದು ಊರಿನ ಗ್ರಾಮದ ಯುವಕರು ನಗರದ ಅಬಕಾರಿ ನಿರೀಕ್ಷಕರ ಕಚೇರಿಗೆ ಮನವಿ ಸಲ್ಲಿಸಿದ್ದರು ಈ ಹಿನ್ನೆಲೆ ಇಂದು ಗ್ರಾಮದಲ್ಲಿ ಜಾಗೃತಿ ಸಭೆ ನಡೆಸಿ ಮಾತನಾಡಿದ ಅವರು, ಕುಡಿದು ಗ್ರಾಮದಲ್ಲಿ ಅಶಾಂತಿ, ಜನರ ನೆಮ್ಮದಿ ಹಾಳು ಮಾಡುವಂತಹ ಕೆಲಸ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.
ಗ್ರಾಮದಲ್ಲಿ ಸುಮಾರು 150 ಕುಟುಂಬಗಳು ವಾಸವಾಗಿದ್ದು 7 ರಿಂದ 8 ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ, ಈ ಮದ್ಯ ಮಾರಾಟಗಾರರಲ್ಲಿ ಶಿಕ್ಷಕರೂ ಇರುವುದು ವಿಪರ್ಯಾಸ, ಮನೆಗಳಲ್ಲಿ ಪೆಟ್ಟಿಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಸೂಚಿಸಿದರು.
ಈ ವೇಳೆ ಅಬಕಾರಿ ಸಿಬ್ಬಂದಿ ಹನುಮಂತರಾಜು, ಗ್ರಾಮ ಪಂಚಾಯತ್ ಸದಸ್ಯ ಹನುಮಂತರಾಜು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…