ಇನ್ಮುಂದೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡಿದರೆ ಸರ್ಕಾರಿ ಸವಲತ್ತುಗಳನ್ನು ಕಡಿತಗೊಳಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದೊಡ್ಡಬಳ್ಳಾಪುರ ವಲಯದ ಅಬಕಾರಿ ಸಬ್ ಇನ್ಸ್ಪೆಕ್ಟರ್ ಎಸ್.ಎಂ ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ತಾಲೂಕಿನ ಹಳೇಕೋಟೆ ಗ್ರಾಮದಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಜೂನ್.7ರಂದು ಊರಿನ ಗ್ರಾಮದ ಯುವಕರು ನಗರದ ಅಬಕಾರಿ ನಿರೀಕ್ಷಕರ ಕಚೇರಿಗೆ ಮನವಿ ಸಲ್ಲಿಸಿದ್ದರು ಈ ಹಿನ್ನೆಲೆ ಇಂದು ಗ್ರಾಮದಲ್ಲಿ ಜಾಗೃತಿ ಸಭೆ ನಡೆಸಿ ಮಾತನಾಡಿದ ಅವರು, ಕುಡಿದು ಗ್ರಾಮದಲ್ಲಿ ಅಶಾಂತಿ, ಜನರ ನೆಮ್ಮದಿ ಹಾಳು ಮಾಡುವಂತಹ ಕೆಲಸ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.
ಗ್ರಾಮದಲ್ಲಿ ಸುಮಾರು 150 ಕುಟುಂಬಗಳು ವಾಸವಾಗಿದ್ದು 7 ರಿಂದ 8 ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ, ಈ ಮದ್ಯ ಮಾರಾಟಗಾರರಲ್ಲಿ ಶಿಕ್ಷಕರೂ ಇರುವುದು ವಿಪರ್ಯಾಸ, ಮನೆಗಳಲ್ಲಿ ಪೆಟ್ಟಿಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಸೂಚಿಸಿದರು.
ಈ ವೇಳೆ ಅಬಕಾರಿ ಸಿಬ್ಬಂದಿ ಹನುಮಂತರಾಜು, ಗ್ರಾಮ ಪಂಚಾಯತ್ ಸದಸ್ಯ ಹನುಮಂತರಾಜು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದರು.
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…
ಹೀಟ್ ಸ್ಟ್ರೋಕ್ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…
ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…
ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…