ಅಕ್ರಮ ಮರಳು-ಮಣ್ಣು ಲೂಟಿಕೋರರಿಂದ ಬರಿದಾದ ಗೂಳ್ಯ ನಂದಿಗುಂದ ಕೆರೆ: ಪ್ರತಿ ದಿನ 150ಲೋಡ್ ಸಾಗಾಟ: ಒಂದು ಲೋಡ್ ಗೆ 1500ರೂ.ಗೆ ಮಾರಾಟ

ಈ ವರ್ಷ ಮಳೆ ಕೊರತೆಯಿಂದಾಗಿ ತಾಲೂಕಿನ ಕೆಲ ಕೆರೆಗಳ ಒಡಲಿನಲ್ಲಿ ನೀರಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಮರಳು-ಮಣ್ಣು ದಂಧೆಕೋರರು ಕೆರೆಗಳ ಒಡಲನ್ನು ಜೆಸಿಬಿ, ಹಿಟಾಚಿಗಳ ಮೂಲಕ ಬಗೆದು ಅಕ್ರಮವಾಗಿ ಮರಳು-ಮಣ್ಣು ಸಾಗಿಸಿ ಅಟ್ಟಹಾಸ ಮೆರೆಯುತ್ತಿದ್ದಾರೆ.

ತಾಲೂಕಿನ ತೂಬಗೆರೆ ಹೋಬಳಿಯ ಗೂಳ್ಯ ನಂದಿಗುಂದ ಗ್ರಾಮಕ್ಕೆ ಸೇರಿದ ಸರ್ವೇ ನಂಬರ್ 61‌ರ ಸರ್ಕಾರಿ ಕೆರೆಯಲ್ಲಿ ತಾಲೂಕು ಆಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖಾ ವತಿಯಿಂದ ಅಪ್ಪಣೆ ಇಲ್ಲದೆ ರಾಜಾರೋಷವಾಗಿ ಮಣ್ಣು-ಮರಳು ದಂಧೆ ನಡೆಯುತ್ತಿದೆ. ಕೆರೆಯ ಒಡಲಲ್ಲಿ ಜೆಸಿಬಿ ಮೂಲಕ 5ರಿಂದ 10ಅಡಿಗಳಷ್ಟು ಬಗೆದು ಕೆರೆಯನ್ನು ಬರಿದು ಮಾಡಲಾಗುತ್ತಿದೆ.

ಕೆರೆಯಿಂದ ಒಂದು ದಿನಕ್ಕೆ 100-150 ಲೋಡ್ ಮಣ್ಣು-ಮರಳುನ್ನು‌ ಸಾಗಿಸಲಾಗುತ್ತದೆ. ಒಂದು ಲೋಡ್ ನ್ನು 1000-1500ಕ್ಕೆ ಮಾರಾಟ ಮಾಡಲಾಗುತ್ತಿದೆ. ಈ ಕುರಿತು ಎಷ್ಟೇ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಲಿಲ್ಲ. ನಾವು ನಮ್ಮ ಹೊಲ ಗದ್ದೆಗಳಿಗೆ ಹೋಗಲು ರಸ್ತೆಯೇ ಇಲ್ಲದಂತಾಗಿದೆ ಎಂದು ಯುವ ರೈತ ಚೇತನ್ ಆಕ್ರೋಶ ವ್ಯಕ್ತಪಡಿಸಿದರು.

ಕೆರೆಯಲ್ಲಿ ಅಡಿಗಳುಗಟ್ಟಲೇ ಆಳ ಇಟ್ಟು ಮಣ್ಣನ್ನ ಹೊರತೆಗೆದಿದ್ದಾರೆ. ಒಂದು ವೇಳೆ ಮಳೆ ಬಂದು ಕೆರೆ ತುಂಬಿದರೆ ಈ ಗುಂಡಿಗಳು ಕಾಣಿಸೋದಿಲ್ಲ. ಊರಿನ ಯುವಕರು ಮೀನು ಹಿಡಿಯಲು, ಈಜು ಆಡಲು ಬಂದು ಈ ಗುಂಡಿಗಳಲ್ಲಿ ಬಿದ್ದು ಸಾವನ್ನಪ್ಪಿದರೆ ಯಾರು ಹೊಣೆ. ದನಕರುಗಳು ನೀರು ಕುಡಿಯಲು ಬಂದು ಕಾಲು ಜಾರಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು‌ ಹೇಳಿದರು.

ಕೆರೆಯ ಮರಳು-ಮಣ್ಣನ್ನು ಖಾಸಗಿ ಬಡಾವಣೆಗಳನ್ನು ನಿರ್ಮಿಸಲು ಹಾಗೂ ಖಾಸಗಿ ಜಮೀನುಗಳಲ್ಲಿನ ಹಳ್ಳಕೊಳ್ಳ ಮುಚ್ಚಲು ಕಾನೂನು ಬಾಹಿರವಾಗಿ ಮಾರಾಟ ಮಾಡಲಾಗುತ್ತಿದೆ. ಕೂಡಲೇ ಸ್ಥಳ ಪರಿಶೀಲನೆ ಮಾಡಿ, ಅಕ್ರಮವಾಗಿ ಮರಳು-ಮಣ್ಣು ದಂಧೆಕೋರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಈ ದಂಧೆಗೆ ಕಡಿವಾಣ ಹಾಕಬೇಕು. ಮುಂದಿನ ಪೀಳಿಗೆಗೆ ಕೆರೆಯನ್ನು ಉಳಿಸಿ, ಬೆಳಸಬೇಕು ಎಂದು ಪ್ರಜಾ ವಿಮೋಚನಾ ಸಮಿತಿ ತಹಶಿಲ್ದಾರ್ ಕಚೇರಿಗೆ ಲಿಖಿತ ರೂಪದಲ್ಲಿ ದೂರು ನೀಡಲಾಗಿದೆ.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

5 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

17 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

17 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

18 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

18 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

1 day ago