ಈ ವರ್ಷ ಮಳೆ ಕೊರತೆಯಿಂದಾಗಿ ತಾಲೂಕಿನ ಕೆಲ ಕೆರೆಗಳ ಒಡಲಿನಲ್ಲಿ ನೀರಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಮರಳು-ಮಣ್ಣು ದಂಧೆಕೋರರು ಕೆರೆಗಳ ಒಡಲನ್ನು ಜೆಸಿಬಿ, ಹಿಟಾಚಿಗಳ ಮೂಲಕ ಬಗೆದು ಅಕ್ರಮವಾಗಿ ಮರಳು-ಮಣ್ಣು ಸಾಗಿಸಿ ಅಟ್ಟಹಾಸ ಮೆರೆಯುತ್ತಿದ್ದಾರೆ.
ತಾಲೂಕಿನ ತೂಬಗೆರೆ ಹೋಬಳಿಯ ಗೂಳ್ಯ ನಂದಿಗುಂದ ಗ್ರಾಮಕ್ಕೆ ಸೇರಿದ ಸರ್ವೇ ನಂಬರ್ 61ರ ಸರ್ಕಾರಿ ಕೆರೆಯಲ್ಲಿ ತಾಲೂಕು ಆಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖಾ ವತಿಯಿಂದ ಅಪ್ಪಣೆ ಇಲ್ಲದೆ ರಾಜಾರೋಷವಾಗಿ ಮಣ್ಣು-ಮರಳು ದಂಧೆ ನಡೆಯುತ್ತಿದೆ. ಕೆರೆಯ ಒಡಲಲ್ಲಿ ಜೆಸಿಬಿ ಮೂಲಕ 5ರಿಂದ 10ಅಡಿಗಳಷ್ಟು ಬಗೆದು ಕೆರೆಯನ್ನು ಬರಿದು ಮಾಡಲಾಗುತ್ತಿದೆ.
ಕೆರೆಯಲ್ಲಿ ಅಡಿಗಳುಗಟ್ಟಲೇ ಆಳ ಇಟ್ಟು ಮಣ್ಣನ್ನ ಹೊರತೆಗೆದಿದ್ದಾರೆ. ಒಂದು ವೇಳೆ ಮಳೆ ಬಂದು ಕೆರೆ ತುಂಬಿದರೆ ಈ ಗುಂಡಿಗಳು ಕಾಣಿಸೋದಿಲ್ಲ. ಊರಿನ ಯುವಕರು ಮೀನು ಹಿಡಿಯಲು, ಈಜು ಆಡಲು ಬಂದು ಈ ಗುಂಡಿಗಳಲ್ಲಿ ಬಿದ್ದು ಸಾವನ್ನಪ್ಪಿದರೆ ಯಾರು ಹೊಣೆ. ದನಕರುಗಳು ನೀರು ಕುಡಿಯಲು ಬಂದು ಕಾಲು ಜಾರಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…