ಅಕ್ರಮ ಮರಳು-ಮಣ್ಣು ಲೂಟಿಕೋರರಿಂದ ಬರಿದಾದ ಗೂಳ್ಯ ನಂದಿಗುಂದ ಕೆರೆ: ಪ್ರತಿ ದಿನ 150ಲೋಡ್ ಸಾಗಾಟ: ಒಂದು ಲೋಡ್ ಗೆ 1500ರೂ.ಗೆ ಮಾರಾಟ

ಈ ವರ್ಷ ಮಳೆ ಕೊರತೆಯಿಂದಾಗಿ ತಾಲೂಕಿನ ಕೆಲ ಕೆರೆಗಳ ಒಡಲಿನಲ್ಲಿ ನೀರಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಮರಳು-ಮಣ್ಣು ದಂಧೆಕೋರರು ಕೆರೆಗಳ ಒಡಲನ್ನು ಜೆಸಿಬಿ, ಹಿಟಾಚಿಗಳ ಮೂಲಕ ಬಗೆದು ಅಕ್ರಮವಾಗಿ ಮರಳು-ಮಣ್ಣು ಸಾಗಿಸಿ ಅಟ್ಟಹಾಸ ಮೆರೆಯುತ್ತಿದ್ದಾರೆ.

ತಾಲೂಕಿನ ತೂಬಗೆರೆ ಹೋಬಳಿಯ ಗೂಳ್ಯ ನಂದಿಗುಂದ ಗ್ರಾಮಕ್ಕೆ ಸೇರಿದ ಸರ್ವೇ ನಂಬರ್ 61‌ರ ಸರ್ಕಾರಿ ಕೆರೆಯಲ್ಲಿ ತಾಲೂಕು ಆಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖಾ ವತಿಯಿಂದ ಅಪ್ಪಣೆ ಇಲ್ಲದೆ ರಾಜಾರೋಷವಾಗಿ ಮಣ್ಣು-ಮರಳು ದಂಧೆ ನಡೆಯುತ್ತಿದೆ. ಕೆರೆಯ ಒಡಲಲ್ಲಿ ಜೆಸಿಬಿ ಮೂಲಕ 5ರಿಂದ 10ಅಡಿಗಳಷ್ಟು ಬಗೆದು ಕೆರೆಯನ್ನು ಬರಿದು ಮಾಡಲಾಗುತ್ತಿದೆ.

ಕೆರೆಯಿಂದ ಒಂದು ದಿನಕ್ಕೆ 100-150 ಲೋಡ್ ಮಣ್ಣು-ಮರಳುನ್ನು‌ ಸಾಗಿಸಲಾಗುತ್ತದೆ. ಒಂದು ಲೋಡ್ ನ್ನು 1000-1500ಕ್ಕೆ ಮಾರಾಟ ಮಾಡಲಾಗುತ್ತಿದೆ. ಈ ಕುರಿತು ಎಷ್ಟೇ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಲಿಲ್ಲ. ನಾವು ನಮ್ಮ ಹೊಲ ಗದ್ದೆಗಳಿಗೆ ಹೋಗಲು ರಸ್ತೆಯೇ ಇಲ್ಲದಂತಾಗಿದೆ ಎಂದು ಯುವ ರೈತ ಚೇತನ್ ಆಕ್ರೋಶ ವ್ಯಕ್ತಪಡಿಸಿದರು.

ಕೆರೆಯಲ್ಲಿ ಅಡಿಗಳುಗಟ್ಟಲೇ ಆಳ ಇಟ್ಟು ಮಣ್ಣನ್ನ ಹೊರತೆಗೆದಿದ್ದಾರೆ. ಒಂದು ವೇಳೆ ಮಳೆ ಬಂದು ಕೆರೆ ತುಂಬಿದರೆ ಈ ಗುಂಡಿಗಳು ಕಾಣಿಸೋದಿಲ್ಲ. ಊರಿನ ಯುವಕರು ಮೀನು ಹಿಡಿಯಲು, ಈಜು ಆಡಲು ಬಂದು ಈ ಗುಂಡಿಗಳಲ್ಲಿ ಬಿದ್ದು ಸಾವನ್ನಪ್ಪಿದರೆ ಯಾರು ಹೊಣೆ. ದನಕರುಗಳು ನೀರು ಕುಡಿಯಲು ಬಂದು ಕಾಲು ಜಾರಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು‌ ಹೇಳಿದರು.

ಕೆರೆಯ ಮರಳು-ಮಣ್ಣನ್ನು ಖಾಸಗಿ ಬಡಾವಣೆಗಳನ್ನು ನಿರ್ಮಿಸಲು ಹಾಗೂ ಖಾಸಗಿ ಜಮೀನುಗಳಲ್ಲಿನ ಹಳ್ಳಕೊಳ್ಳ ಮುಚ್ಚಲು ಕಾನೂನು ಬಾಹಿರವಾಗಿ ಮಾರಾಟ ಮಾಡಲಾಗುತ್ತಿದೆ. ಕೂಡಲೇ ಸ್ಥಳ ಪರಿಶೀಲನೆ ಮಾಡಿ, ಅಕ್ರಮವಾಗಿ ಮರಳು-ಮಣ್ಣು ದಂಧೆಕೋರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಈ ದಂಧೆಗೆ ಕಡಿವಾಣ ಹಾಕಬೇಕು. ಮುಂದಿನ ಪೀಳಿಗೆಗೆ ಕೆರೆಯನ್ನು ಉಳಿಸಿ, ಬೆಳಸಬೇಕು ಎಂದು ಪ್ರಜಾ ವಿಮೋಚನಾ ಸಮಿತಿ ತಹಶಿಲ್ದಾರ್ ಕಚೇರಿಗೆ ಲಿಖಿತ ರೂಪದಲ್ಲಿ ದೂರು ನೀಡಲಾಗಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

8 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

10 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

19 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

23 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago