ಈ ವರ್ಷ ಮಳೆ ಕೊರತೆಯಿಂದಾಗಿ ತಾಲೂಕಿನ ಕೆಲ ಕೆರೆಗಳ ಒಡಲಿನಲ್ಲಿ ನೀರಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಮರಳು-ಮಣ್ಣು ದಂಧೆಕೋರರು ಕೆರೆಗಳ ಒಡಲನ್ನು ಜೆಸಿಬಿ, ಹಿಟಾಚಿಗಳ ಮೂಲಕ ಬಗೆದು ಅಕ್ರಮವಾಗಿ ಮರಳು-ಮಣ್ಣು ಸಾಗಿಸಿ ಅಟ್ಟಹಾಸ ಮೆರೆಯುತ್ತಿದ್ದಾರೆ.
ತಾಲೂಕಿನ ತೂಬಗೆರೆ ಹೋಬಳಿಯ ಗೂಳ್ಯ ನಂದಿಗುಂದ ಗ್ರಾಮಕ್ಕೆ ಸೇರಿದ ಸರ್ವೇ ನಂಬರ್ 61ರ ಸರ್ಕಾರಿ ಕೆರೆಯಲ್ಲಿ ತಾಲೂಕು ಆಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖಾ ವತಿಯಿಂದ ಅಪ್ಪಣೆ ಇಲ್ಲದೆ ರಾಜಾರೋಷವಾಗಿ ಮಣ್ಣು-ಮರಳು ದಂಧೆ ನಡೆಯುತ್ತಿದೆ. ಕೆರೆಯ ಒಡಲಲ್ಲಿ ಜೆಸಿಬಿ ಮೂಲಕ 5ರಿಂದ 10ಅಡಿಗಳಷ್ಟು ಬಗೆದು ಕೆರೆಯನ್ನು ಬರಿದು ಮಾಡಲಾಗುತ್ತಿದೆ.
ಕೆರೆಯಲ್ಲಿ ಅಡಿಗಳುಗಟ್ಟಲೇ ಆಳ ಇಟ್ಟು ಮಣ್ಣನ್ನ ಹೊರತೆಗೆದಿದ್ದಾರೆ. ಒಂದು ವೇಳೆ ಮಳೆ ಬಂದು ಕೆರೆ ತುಂಬಿದರೆ ಈ ಗುಂಡಿಗಳು ಕಾಣಿಸೋದಿಲ್ಲ. ಊರಿನ ಯುವಕರು ಮೀನು ಹಿಡಿಯಲು, ಈಜು ಆಡಲು ಬಂದು ಈ ಗುಂಡಿಗಳಲ್ಲಿ ಬಿದ್ದು ಸಾವನ್ನಪ್ಪಿದರೆ ಯಾರು ಹೊಣೆ. ದನಕರುಗಳು ನೀರು ಕುಡಿಯಲು ಬಂದು ಕಾಲು ಜಾರಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…