ಅಕ್ರಮ ಮರಳು-ಮಣ್ಣು ಲೂಟಿಕೋರರಿಂದ ಬರಿದಾದ ಗೂಳ್ಯ ನಂದಿಗುಂದ ಕೆರೆ: ಪ್ರತಿ ದಿನ 150ಲೋಡ್ ಸಾಗಾಟ: ಒಂದು ಲೋಡ್ ಗೆ 1500ರೂ.ಗೆ ಮಾರಾಟ

ಈ ವರ್ಷ ಮಳೆ ಕೊರತೆಯಿಂದಾಗಿ ತಾಲೂಕಿನ ಕೆಲ ಕೆರೆಗಳ ಒಡಲಿನಲ್ಲಿ ನೀರಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಮರಳು-ಮಣ್ಣು ದಂಧೆಕೋರರು ಕೆರೆಗಳ ಒಡಲನ್ನು ಜೆಸಿಬಿ, ಹಿಟಾಚಿಗಳ ಮೂಲಕ ಬಗೆದು ಅಕ್ರಮವಾಗಿ ಮರಳು-ಮಣ್ಣು ಸಾಗಿಸಿ ಅಟ್ಟಹಾಸ ಮೆರೆಯುತ್ತಿದ್ದಾರೆ.

ತಾಲೂಕಿನ ತೂಬಗೆರೆ ಹೋಬಳಿಯ ಗೂಳ್ಯ ನಂದಿಗುಂದ ಗ್ರಾಮಕ್ಕೆ ಸೇರಿದ ಸರ್ವೇ ನಂಬರ್ 61‌ರ ಸರ್ಕಾರಿ ಕೆರೆಯಲ್ಲಿ ತಾಲೂಕು ಆಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖಾ ವತಿಯಿಂದ ಅಪ್ಪಣೆ ಇಲ್ಲದೆ ರಾಜಾರೋಷವಾಗಿ ಮಣ್ಣು-ಮರಳು ದಂಧೆ ನಡೆಯುತ್ತಿದೆ. ಕೆರೆಯ ಒಡಲಲ್ಲಿ ಜೆಸಿಬಿ ಮೂಲಕ 5ರಿಂದ 10ಅಡಿಗಳಷ್ಟು ಬಗೆದು ಕೆರೆಯನ್ನು ಬರಿದು ಮಾಡಲಾಗುತ್ತಿದೆ.

ಕೆರೆಯಿಂದ ಒಂದು ದಿನಕ್ಕೆ 100-150 ಲೋಡ್ ಮಣ್ಣು-ಮರಳುನ್ನು‌ ಸಾಗಿಸಲಾಗುತ್ತದೆ. ಒಂದು ಲೋಡ್ ನ್ನು 1000-1500ಕ್ಕೆ ಮಾರಾಟ ಮಾಡಲಾಗುತ್ತಿದೆ. ಈ ಕುರಿತು ಎಷ್ಟೇ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಲಿಲ್ಲ. ನಾವು ನಮ್ಮ ಹೊಲ ಗದ್ದೆಗಳಿಗೆ ಹೋಗಲು ರಸ್ತೆಯೇ ಇಲ್ಲದಂತಾಗಿದೆ ಎಂದು ಯುವ ರೈತ ಚೇತನ್ ಆಕ್ರೋಶ ವ್ಯಕ್ತಪಡಿಸಿದರು.

ಕೆರೆಯಲ್ಲಿ ಅಡಿಗಳುಗಟ್ಟಲೇ ಆಳ ಇಟ್ಟು ಮಣ್ಣನ್ನ ಹೊರತೆಗೆದಿದ್ದಾರೆ. ಒಂದು ವೇಳೆ ಮಳೆ ಬಂದು ಕೆರೆ ತುಂಬಿದರೆ ಈ ಗುಂಡಿಗಳು ಕಾಣಿಸೋದಿಲ್ಲ. ಊರಿನ ಯುವಕರು ಮೀನು ಹಿಡಿಯಲು, ಈಜು ಆಡಲು ಬಂದು ಈ ಗುಂಡಿಗಳಲ್ಲಿ ಬಿದ್ದು ಸಾವನ್ನಪ್ಪಿದರೆ ಯಾರು ಹೊಣೆ. ದನಕರುಗಳು ನೀರು ಕುಡಿಯಲು ಬಂದು ಕಾಲು ಜಾರಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು‌ ಹೇಳಿದರು.

ಕೆರೆಯ ಮರಳು-ಮಣ್ಣನ್ನು ಖಾಸಗಿ ಬಡಾವಣೆಗಳನ್ನು ನಿರ್ಮಿಸಲು ಹಾಗೂ ಖಾಸಗಿ ಜಮೀನುಗಳಲ್ಲಿನ ಹಳ್ಳಕೊಳ್ಳ ಮುಚ್ಚಲು ಕಾನೂನು ಬಾಹಿರವಾಗಿ ಮಾರಾಟ ಮಾಡಲಾಗುತ್ತಿದೆ. ಕೂಡಲೇ ಸ್ಥಳ ಪರಿಶೀಲನೆ ಮಾಡಿ, ಅಕ್ರಮವಾಗಿ ಮರಳು-ಮಣ್ಣು ದಂಧೆಕೋರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಈ ದಂಧೆಗೆ ಕಡಿವಾಣ ಹಾಕಬೇಕು. ಮುಂದಿನ ಪೀಳಿಗೆಗೆ ಕೆರೆಯನ್ನು ಉಳಿಸಿ, ಬೆಳಸಬೇಕು ಎಂದು ಪ್ರಜಾ ವಿಮೋಚನಾ ಸಮಿತಿ ತಹಶಿಲ್ದಾರ್ ಕಚೇರಿಗೆ ಲಿಖಿತ ರೂಪದಲ್ಲಿ ದೂರು ನೀಡಲಾಗಿದೆ.

Ramesh Babu

Journalist

Recent Posts

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

2 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

5 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

17 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

18 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

23 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

1 day ago