ಅಕ್ರಮ ಮರಳು-ಮಣ್ಣು ಲೂಟಿಕೋರರಿಂದ ಬರಿದಾದ ಗೂಳ್ಯ ನಂದಿಗುಂದ ಕೆರೆ: ಪ್ರತಿ ದಿನ 150ಲೋಡ್ ಸಾಗಾಟ: ಒಂದು ಲೋಡ್ ಗೆ 1500ರೂ.ಗೆ ಮಾರಾಟ

ಈ ವರ್ಷ ಮಳೆ ಕೊರತೆಯಿಂದಾಗಿ ತಾಲೂಕಿನ ಕೆಲ ಕೆರೆಗಳ ಒಡಲಿನಲ್ಲಿ ನೀರಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಮರಳು-ಮಣ್ಣು ದಂಧೆಕೋರರು ಕೆರೆಗಳ ಒಡಲನ್ನು ಜೆಸಿಬಿ, ಹಿಟಾಚಿಗಳ ಮೂಲಕ ಬಗೆದು ಅಕ್ರಮವಾಗಿ ಮರಳು-ಮಣ್ಣು ಸಾಗಿಸಿ ಅಟ್ಟಹಾಸ ಮೆರೆಯುತ್ತಿದ್ದಾರೆ.

ತಾಲೂಕಿನ ತೂಬಗೆರೆ ಹೋಬಳಿಯ ಗೂಳ್ಯ ನಂದಿಗುಂದ ಗ್ರಾಮಕ್ಕೆ ಸೇರಿದ ಸರ್ವೇ ನಂಬರ್ 61‌ರ ಸರ್ಕಾರಿ ಕೆರೆಯಲ್ಲಿ ತಾಲೂಕು ಆಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖಾ ವತಿಯಿಂದ ಅಪ್ಪಣೆ ಇಲ್ಲದೆ ರಾಜಾರೋಷವಾಗಿ ಮಣ್ಣು-ಮರಳು ದಂಧೆ ನಡೆಯುತ್ತಿದೆ. ಕೆರೆಯ ಒಡಲಲ್ಲಿ ಜೆಸಿಬಿ ಮೂಲಕ 5ರಿಂದ 10ಅಡಿಗಳಷ್ಟು ಬಗೆದು ಕೆರೆಯನ್ನು ಬರಿದು ಮಾಡಲಾಗುತ್ತಿದೆ.

ಕೆರೆಯಿಂದ ಒಂದು ದಿನಕ್ಕೆ 100-150 ಲೋಡ್ ಮಣ್ಣು-ಮರಳುನ್ನು‌ ಸಾಗಿಸಲಾಗುತ್ತದೆ. ಒಂದು ಲೋಡ್ ನ್ನು 1000-1500ಕ್ಕೆ ಮಾರಾಟ ಮಾಡಲಾಗುತ್ತಿದೆ. ಈ ಕುರಿತು ಎಷ್ಟೇ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಲಿಲ್ಲ. ನಾವು ನಮ್ಮ ಹೊಲ ಗದ್ದೆಗಳಿಗೆ ಹೋಗಲು ರಸ್ತೆಯೇ ಇಲ್ಲದಂತಾಗಿದೆ ಎಂದು ಯುವ ರೈತ ಚೇತನ್ ಆಕ್ರೋಶ ವ್ಯಕ್ತಪಡಿಸಿದರು.

ಕೆರೆಯಲ್ಲಿ ಅಡಿಗಳುಗಟ್ಟಲೇ ಆಳ ಇಟ್ಟು ಮಣ್ಣನ್ನ ಹೊರತೆಗೆದಿದ್ದಾರೆ. ಒಂದು ವೇಳೆ ಮಳೆ ಬಂದು ಕೆರೆ ತುಂಬಿದರೆ ಈ ಗುಂಡಿಗಳು ಕಾಣಿಸೋದಿಲ್ಲ. ಊರಿನ ಯುವಕರು ಮೀನು ಹಿಡಿಯಲು, ಈಜು ಆಡಲು ಬಂದು ಈ ಗುಂಡಿಗಳಲ್ಲಿ ಬಿದ್ದು ಸಾವನ್ನಪ್ಪಿದರೆ ಯಾರು ಹೊಣೆ. ದನಕರುಗಳು ನೀರು ಕುಡಿಯಲು ಬಂದು ಕಾಲು ಜಾರಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು‌ ಹೇಳಿದರು.

ಕೆರೆಯ ಮರಳು-ಮಣ್ಣನ್ನು ಖಾಸಗಿ ಬಡಾವಣೆಗಳನ್ನು ನಿರ್ಮಿಸಲು ಹಾಗೂ ಖಾಸಗಿ ಜಮೀನುಗಳಲ್ಲಿನ ಹಳ್ಳಕೊಳ್ಳ ಮುಚ್ಚಲು ಕಾನೂನು ಬಾಹಿರವಾಗಿ ಮಾರಾಟ ಮಾಡಲಾಗುತ್ತಿದೆ. ಕೂಡಲೇ ಸ್ಥಳ ಪರಿಶೀಲನೆ ಮಾಡಿ, ಅಕ್ರಮವಾಗಿ ಮರಳು-ಮಣ್ಣು ದಂಧೆಕೋರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಈ ದಂಧೆಗೆ ಕಡಿವಾಣ ಹಾಕಬೇಕು. ಮುಂದಿನ ಪೀಳಿಗೆಗೆ ಕೆರೆಯನ್ನು ಉಳಿಸಿ, ಬೆಳಸಬೇಕು ಎಂದು ಪ್ರಜಾ ವಿಮೋಚನಾ ಸಮಿತಿ ತಹಶಿಲ್ದಾರ್ ಕಚೇರಿಗೆ ಲಿಖಿತ ರೂಪದಲ್ಲಿ ದೂರು ನೀಡಲಾಗಿದೆ.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

10 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

10 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

22 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

1 day ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago