ಈ ವರ್ಷ ಮಳೆ ಕೊರತೆಯಿಂದಾಗಿ ತಾಲೂಕಿನ ಕೆಲ ಕೆರೆಗಳ ಒಡಲಿನಲ್ಲಿ ನೀರಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಮರಳು-ಮಣ್ಣು ದಂಧೆಕೋರರು ಕೆರೆಗಳ ಒಡಲನ್ನು ಜೆಸಿಬಿ, ಹಿಟಾಚಿಗಳ ಮೂಲಕ ಬಗೆದು ಅಕ್ರಮವಾಗಿ ಮರಳು-ಮಣ್ಣು ಸಾಗಿಸಿ ಅಟ್ಟಹಾಸ ಮೆರೆಯುತ್ತಿದ್ದಾರೆ.
ತಾಲೂಕಿನ ತೂಬಗೆರೆ ಹೋಬಳಿಯ ಗೂಳ್ಯ ನಂದಿಗುಂದ ಗ್ರಾಮಕ್ಕೆ ಸೇರಿದ ಸರ್ವೇ ನಂಬರ್ 61ರ ಸರ್ಕಾರಿ ಕೆರೆಯಲ್ಲಿ ತಾಲೂಕು ಆಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖಾ ವತಿಯಿಂದ ಅಪ್ಪಣೆ ಇಲ್ಲದೆ ರಾಜಾರೋಷವಾಗಿ ಮಣ್ಣು-ಮರಳು ದಂಧೆ ನಡೆಯುತ್ತಿದೆ. ಕೆರೆಯ ಒಡಲಲ್ಲಿ ಜೆಸಿಬಿ ಮೂಲಕ 5ರಿಂದ 10ಅಡಿಗಳಷ್ಟು ಬಗೆದು ಕೆರೆಯನ್ನು ಬರಿದು ಮಾಡಲಾಗುತ್ತಿದೆ.
ಕೆರೆಯಲ್ಲಿ ಅಡಿಗಳುಗಟ್ಟಲೇ ಆಳ ಇಟ್ಟು ಮಣ್ಣನ್ನ ಹೊರತೆಗೆದಿದ್ದಾರೆ. ಒಂದು ವೇಳೆ ಮಳೆ ಬಂದು ಕೆರೆ ತುಂಬಿದರೆ ಈ ಗುಂಡಿಗಳು ಕಾಣಿಸೋದಿಲ್ಲ. ಊರಿನ ಯುವಕರು ಮೀನು ಹಿಡಿಯಲು, ಈಜು ಆಡಲು ಬಂದು ಈ ಗುಂಡಿಗಳಲ್ಲಿ ಬಿದ್ದು ಸಾವನ್ನಪ್ಪಿದರೆ ಯಾರು ಹೊಣೆ. ದನಕರುಗಳು ನೀರು ಕುಡಿಯಲು ಬಂದು ಕಾಲು ಜಾರಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…