ಈ ವರ್ಷ ಮಳೆ ಕೊರತೆಯಿಂದಾಗಿ ತಾಲೂಕಿನ ಕೆಲ ಕೆರೆಗಳ ಒಡಲಿನಲ್ಲಿ ನೀರಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಮರಳು-ಮಣ್ಣು ದಂಧೆಕೋರರು ಕೆರೆಗಳ ಒಡಲನ್ನು ಜೆಸಿಬಿ, ಹಿಟಾಚಿಗಳ ಮೂಲಕ ಬಗೆದು ಅಕ್ರಮವಾಗಿ ಮರಳು-ಮಣ್ಣು ಸಾಗಿಸಿ ಅಟ್ಟಹಾಸ ಮೆರೆಯುತ್ತಿದ್ದಾರೆ.
ತಾಲೂಕಿನ ತೂಬಗೆರೆ ಹೋಬಳಿಯ ಗೂಳ್ಯ ನಂದಿಗುಂದ ಗ್ರಾಮಕ್ಕೆ ಸೇರಿದ ಸರ್ವೇ ನಂಬರ್ 61ರ ಸರ್ಕಾರಿ ಕೆರೆಯಲ್ಲಿ ತಾಲೂಕು ಆಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖಾ ವತಿಯಿಂದ ಅಪ್ಪಣೆ ಇಲ್ಲದೆ ರಾಜಾರೋಷವಾಗಿ ಮಣ್ಣು-ಮರಳು ದಂಧೆ ನಡೆಯುತ್ತಿದೆ. ಕೆರೆಯ ಒಡಲಲ್ಲಿ ಜೆಸಿಬಿ ಮೂಲಕ 5ರಿಂದ 10ಅಡಿಗಳಷ್ಟು ಬಗೆದು ಕೆರೆಯನ್ನು ಬರಿದು ಮಾಡಲಾಗುತ್ತಿದೆ.
ಕೆರೆಯಲ್ಲಿ ಅಡಿಗಳುಗಟ್ಟಲೇ ಆಳ ಇಟ್ಟು ಮಣ್ಣನ್ನ ಹೊರತೆಗೆದಿದ್ದಾರೆ. ಒಂದು ವೇಳೆ ಮಳೆ ಬಂದು ಕೆರೆ ತುಂಬಿದರೆ ಈ ಗುಂಡಿಗಳು ಕಾಣಿಸೋದಿಲ್ಲ. ಊರಿನ ಯುವಕರು ಮೀನು ಹಿಡಿಯಲು, ಈಜು ಆಡಲು ಬಂದು ಈ ಗುಂಡಿಗಳಲ್ಲಿ ಬಿದ್ದು ಸಾವನ್ನಪ್ಪಿದರೆ ಯಾರು ಹೊಣೆ. ದನಕರುಗಳು ನೀರು ಕುಡಿಯಲು ಬಂದು ಕಾಲು ಜಾರಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…