ಈ ವರ್ಷ ಮಳೆ ಕೊರತೆಯಿಂದಾಗಿ ತಾಲೂಕಿನ ಕೆಲ ಕೆರೆಗಳ ಒಡಲಿನಲ್ಲಿ ನೀರಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಮರಳು-ಮಣ್ಣು ದಂಧೆಕೋರರು ಕೆರೆಗಳ ಒಡಲನ್ನು ಜೆಸಿಬಿ, ಹಿಟಾಚಿಗಳ ಮೂಲಕ ಬಗೆದು ಅಕ್ರಮವಾಗಿ ಮರಳು-ಮಣ್ಣು ಸಾಗಿಸಿ ಅಟ್ಟಹಾಸ ಮೆರೆಯುತ್ತಿದ್ದಾರೆ.
ತಾಲೂಕಿನ ತೂಬಗೆರೆ ಹೋಬಳಿಯ ಗೂಳ್ಯ ನಂದಿಗುಂದ ಗ್ರಾಮಕ್ಕೆ ಸೇರಿದ ಸರ್ವೇ ನಂಬರ್ 61ರ ಸರ್ಕಾರಿ ಕೆರೆಯಲ್ಲಿ ತಾಲೂಕು ಆಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖಾ ವತಿಯಿಂದ ಅಪ್ಪಣೆ ಇಲ್ಲದೆ ರಾಜಾರೋಷವಾಗಿ ಮಣ್ಣು-ಮರಳು ದಂಧೆ ನಡೆಯುತ್ತಿದೆ. ಕೆರೆಯ ಒಡಲಲ್ಲಿ ಜೆಸಿಬಿ ಮೂಲಕ 5ರಿಂದ 10ಅಡಿಗಳಷ್ಟು ಬಗೆದು ಕೆರೆಯನ್ನು ಬರಿದು ಮಾಡಲಾಗುತ್ತಿದೆ.
ಕೆರೆಯಲ್ಲಿ ಅಡಿಗಳುಗಟ್ಟಲೇ ಆಳ ಇಟ್ಟು ಮಣ್ಣನ್ನ ಹೊರತೆಗೆದಿದ್ದಾರೆ. ಒಂದು ವೇಳೆ ಮಳೆ ಬಂದು ಕೆರೆ ತುಂಬಿದರೆ ಈ ಗುಂಡಿಗಳು ಕಾಣಿಸೋದಿಲ್ಲ. ಊರಿನ ಯುವಕರು ಮೀನು ಹಿಡಿಯಲು, ಈಜು ಆಡಲು ಬಂದು ಈ ಗುಂಡಿಗಳಲ್ಲಿ ಬಿದ್ದು ಸಾವನ್ನಪ್ಪಿದರೆ ಯಾರು ಹೊಣೆ. ದನಕರುಗಳು ನೀರು ಕುಡಿಯಲು ಬಂದು ಕಾಲು ಜಾರಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…