ಅಕ್ರಮ ಮರಳು-ಮಣ್ಣು ಲೂಟಿಕೋರರಿಂದ ಬರಿದಾದ ಗೂಳ್ಯ ನಂದಿಗುಂದ ಕೆರೆ: ಪ್ರತಿ ದಿನ 150ಲೋಡ್ ಸಾಗಾಟ: ಒಂದು ಲೋಡ್ ಗೆ 1500ರೂ.ಗೆ ಮಾರಾಟ

ಈ ವರ್ಷ ಮಳೆ ಕೊರತೆಯಿಂದಾಗಿ ತಾಲೂಕಿನ ಕೆಲ ಕೆರೆಗಳ ಒಡಲಿನಲ್ಲಿ ನೀರಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಮರಳು-ಮಣ್ಣು ದಂಧೆಕೋರರು ಕೆರೆಗಳ ಒಡಲನ್ನು ಜೆಸಿಬಿ, ಹಿಟಾಚಿಗಳ ಮೂಲಕ ಬಗೆದು ಅಕ್ರಮವಾಗಿ ಮರಳು-ಮಣ್ಣು ಸಾಗಿಸಿ ಅಟ್ಟಹಾಸ ಮೆರೆಯುತ್ತಿದ್ದಾರೆ.

ತಾಲೂಕಿನ ತೂಬಗೆರೆ ಹೋಬಳಿಯ ಗೂಳ್ಯ ನಂದಿಗುಂದ ಗ್ರಾಮಕ್ಕೆ ಸೇರಿದ ಸರ್ವೇ ನಂಬರ್ 61‌ರ ಸರ್ಕಾರಿ ಕೆರೆಯಲ್ಲಿ ತಾಲೂಕು ಆಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖಾ ವತಿಯಿಂದ ಅಪ್ಪಣೆ ಇಲ್ಲದೆ ರಾಜಾರೋಷವಾಗಿ ಮಣ್ಣು-ಮರಳು ದಂಧೆ ನಡೆಯುತ್ತಿದೆ. ಕೆರೆಯ ಒಡಲಲ್ಲಿ ಜೆಸಿಬಿ ಮೂಲಕ 5ರಿಂದ 10ಅಡಿಗಳಷ್ಟು ಬಗೆದು ಕೆರೆಯನ್ನು ಬರಿದು ಮಾಡಲಾಗುತ್ತಿದೆ.

ಕೆರೆಯಿಂದ ಒಂದು ದಿನಕ್ಕೆ 100-150 ಲೋಡ್ ಮಣ್ಣು-ಮರಳುನ್ನು‌ ಸಾಗಿಸಲಾಗುತ್ತದೆ. ಒಂದು ಲೋಡ್ ನ್ನು 1000-1500ಕ್ಕೆ ಮಾರಾಟ ಮಾಡಲಾಗುತ್ತಿದೆ. ಈ ಕುರಿತು ಎಷ್ಟೇ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಲಿಲ್ಲ. ನಾವು ನಮ್ಮ ಹೊಲ ಗದ್ದೆಗಳಿಗೆ ಹೋಗಲು ರಸ್ತೆಯೇ ಇಲ್ಲದಂತಾಗಿದೆ ಎಂದು ಯುವ ರೈತ ಚೇತನ್ ಆಕ್ರೋಶ ವ್ಯಕ್ತಪಡಿಸಿದರು.

ಕೆರೆಯಲ್ಲಿ ಅಡಿಗಳುಗಟ್ಟಲೇ ಆಳ ಇಟ್ಟು ಮಣ್ಣನ್ನ ಹೊರತೆಗೆದಿದ್ದಾರೆ. ಒಂದು ವೇಳೆ ಮಳೆ ಬಂದು ಕೆರೆ ತುಂಬಿದರೆ ಈ ಗುಂಡಿಗಳು ಕಾಣಿಸೋದಿಲ್ಲ. ಊರಿನ ಯುವಕರು ಮೀನು ಹಿಡಿಯಲು, ಈಜು ಆಡಲು ಬಂದು ಈ ಗುಂಡಿಗಳಲ್ಲಿ ಬಿದ್ದು ಸಾವನ್ನಪ್ಪಿದರೆ ಯಾರು ಹೊಣೆ. ದನಕರುಗಳು ನೀರು ಕುಡಿಯಲು ಬಂದು ಕಾಲು ಜಾರಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು‌ ಹೇಳಿದರು.

ಕೆರೆಯ ಮರಳು-ಮಣ್ಣನ್ನು ಖಾಸಗಿ ಬಡಾವಣೆಗಳನ್ನು ನಿರ್ಮಿಸಲು ಹಾಗೂ ಖಾಸಗಿ ಜಮೀನುಗಳಲ್ಲಿನ ಹಳ್ಳಕೊಳ್ಳ ಮುಚ್ಚಲು ಕಾನೂನು ಬಾಹಿರವಾಗಿ ಮಾರಾಟ ಮಾಡಲಾಗುತ್ತಿದೆ. ಕೂಡಲೇ ಸ್ಥಳ ಪರಿಶೀಲನೆ ಮಾಡಿ, ಅಕ್ರಮವಾಗಿ ಮರಳು-ಮಣ್ಣು ದಂಧೆಕೋರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಈ ದಂಧೆಗೆ ಕಡಿವಾಣ ಹಾಕಬೇಕು. ಮುಂದಿನ ಪೀಳಿಗೆಗೆ ಕೆರೆಯನ್ನು ಉಳಿಸಿ, ಬೆಳಸಬೇಕು ಎಂದು ಪ್ರಜಾ ವಿಮೋಚನಾ ಸಮಿತಿ ತಹಶಿಲ್ದಾರ್ ಕಚೇರಿಗೆ ಲಿಖಿತ ರೂಪದಲ್ಲಿ ದೂರು ನೀಡಲಾಗಿದೆ.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

5 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

10 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

10 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

17 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago