ಅಕ್ರಮ ಮರಳು ಸಾಗಾಟ: ಟಿಪ್ಪರ್, ಜೆಸಿಬಿ ವಶ

ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿಯ ಪುರ ಗ್ರಾಮ ಪಂಚಾಯಿತಿಯ ಬೀಸಲಹಳ್ಳಿ ಗ್ರಾಮದಿಂದ ಚಿನ್ನಬೈರನ ಹಳ್ಳಿ, ಅಲಕಾಪುರ ಕಡೆಗೆ ಹೋಗುವ ಮಾರ್ಗದಲ್ಲಿ ಉತ್ತರ ಪಿನಾಕಿನಿ ನದಿ ಇದ್ದು, ನದಿಗೆ ಹೋಗುವುದಕ್ಕೆ ‘ಪುಷ್ಪ ಸಿನಿಮಾದಂತೆ ಇಲ್ಲಿನ ಜಮೀನುಗಳ ಮಧ್ಯೆ ರಸ್ತೆ ಮಾಡಿಕೊಂಡು ರಾಜಾರೋಷವಾಗಿ ಟಿಪ್ಪರ್, ಜೆಸಿಬಿ, ಟ್ರ್ಯಾಕ್ಟರ್ ಮೂಲಕ ನದಿಯ ಮರಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮರಳು ಮಾಫಿಯಾ ಮಾಹಿತಿ ಕಲೆಹಾಕಿದ ಸೆನ್ ಪೊಲೀಸರು ಎರಡು ದಿನಗಳ ಕಾರ್ಯಾಚರಣೆ ನಡೆಸಿ ಕೊನೆಗೆ‌ ಮುಂಜಾನೆ ಮರಳು ಮಾಫೀಯಾ ಮಾಡುತ್ತಿದ್ದ ತಿಮ್ಮರೆಡ್ಡಿ ಮತ್ತು ಚಾಲಕ ರವಿಕುಮಾರ್ ನನ್ನು ಸ್ಥಳದಲ್ಲೇ ವಶಕ್ಕೆ ಪಡೆದು, ಒಂದು ಟಿಪ್ಪರ್, ಜೆಸಿಬಿ, ಮರಳು ಸಮೇತ ಜಪ್ತಿ ಮಾಡಲಾಗಿದೆ.

ಸ್ಥಳಕ್ಕೆ ಸೆನ್ ಡಿ ವೈ ಎಸ್ ಪಿ ರವಿಕುಮಾರ್, ಪಿಐ ಸೂರ್ಯಪ್ರಕಾಶ, ಪಿಎಸ್ಐ ಶರತ್ ಕುಮಾರ್, ಎ ಎಸ್ ಐ  ಸುಬ್ರಹ್ಮಣ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

14 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

16 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

17 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago