ಅಕ್ರಮ ಮರಳು ಸಾಗಾಟ: ಟಿಪ್ಪರ್, ಜೆಸಿಬಿ ವಶ

ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿಯ ಪುರ ಗ್ರಾಮ ಪಂಚಾಯಿತಿಯ ಬೀಸಲಹಳ್ಳಿ ಗ್ರಾಮದಿಂದ ಚಿನ್ನಬೈರನ ಹಳ್ಳಿ, ಅಲಕಾಪುರ ಕಡೆಗೆ ಹೋಗುವ ಮಾರ್ಗದಲ್ಲಿ ಉತ್ತರ ಪಿನಾಕಿನಿ ನದಿ ಇದ್ದು, ನದಿಗೆ ಹೋಗುವುದಕ್ಕೆ ‘ಪುಷ್ಪ ಸಿನಿಮಾದಂತೆ ಇಲ್ಲಿನ ಜಮೀನುಗಳ ಮಧ್ಯೆ ರಸ್ತೆ ಮಾಡಿಕೊಂಡು ರಾಜಾರೋಷವಾಗಿ ಟಿಪ್ಪರ್, ಜೆಸಿಬಿ, ಟ್ರ್ಯಾಕ್ಟರ್ ಮೂಲಕ ನದಿಯ ಮರಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮರಳು ಮಾಫಿಯಾ ಮಾಹಿತಿ ಕಲೆಹಾಕಿದ ಸೆನ್ ಪೊಲೀಸರು ಎರಡು ದಿನಗಳ ಕಾರ್ಯಾಚರಣೆ ನಡೆಸಿ ಕೊನೆಗೆ‌ ಮುಂಜಾನೆ ಮರಳು ಮಾಫೀಯಾ ಮಾಡುತ್ತಿದ್ದ ತಿಮ್ಮರೆಡ್ಡಿ ಮತ್ತು ಚಾಲಕ ರವಿಕುಮಾರ್ ನನ್ನು ಸ್ಥಳದಲ್ಲೇ ವಶಕ್ಕೆ ಪಡೆದು, ಒಂದು ಟಿಪ್ಪರ್, ಜೆಸಿಬಿ, ಮರಳು ಸಮೇತ ಜಪ್ತಿ ಮಾಡಲಾಗಿದೆ.

ಸ್ಥಳಕ್ಕೆ ಸೆನ್ ಡಿ ವೈ ಎಸ್ ಪಿ ರವಿಕುಮಾರ್, ಪಿಐ ಸೂರ್ಯಪ್ರಕಾಶ, ಪಿಎಸ್ಐ ಶರತ್ ಕುಮಾರ್, ಎ ಎಸ್ ಐ  ಸುಬ್ರಹ್ಮಣ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

10 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago